ಲಾಕ್ ಡೌನ್ ಎಫೆಕ್ಟ್ ಕಂಪು ಕಳೆದುಕೊಳ್ಳುತ್ತಿರುವ ಭಟ್ಕಳ ಮಲ್ಲಿಗೆ; ಕಂಗಲಾದ ರೈತ ಕುಟುಂಬ

Source: sonews | By Staff Correspondent | Published on 7th April 2020, 6:55 PM | Coastal News | Special Report | Don't Miss |

ಭಟ್ಕಳ ಮಲ್ಲಿಗೆ ದೇಶ ದಲ್ಲಷ್ಟೆ ಅಲ್ಲದೇ ವಿದೇಶಗಳಲ್ಲೂ ಭಾರಿ ಬೇಡಿಕೆ. ಇಲ್ಲಿನ ನವಾಯತ್ ಮುಸ್ಲಿಮರು ಭಟ್ಕಳ ಮಲ್ಲಿಗೆಯ ಕಂಪನ್ನು ಗಲ್ಫ್ ರಾಷ್ಟ್ರಗಳಲ್ಲೂ ಹರಡುವಂತೆ ಮಾಡಿದ್ದಾರೆ. ಭಟ್ಕಳದ ಪ್ರಮುಖ ತೋಟಗಾರಿಕಾ ಬೆಳೆಯಾಗಿರುವ ಮಲ್ಲಿಗೆ ಲಾಕ್ ಡೌನ್ ನಿಂದಾಗಿ ಗಿಡದಲ್ಲೇ ಮೊಗ್ಗು ಅರಳುವ ಮುನ್ನವೇ ಬಾಡಿ ಹೋಗಲಾರಂಭಿಸಿವೆ. ಮಾರುಕಟ್ಟೆಯಲ್ಲಿ ಭಾರಿ ಬೇಡಿಕೆಯಾಗಿದ್ದ ಈ ಮಲ್ಲಿಗೆ ಮೇಲೆ ಕೊರೋನಾ ಕರಿನೆರಳು ಬಿದ್ದು  ತನ್ನ ಕಂಪನ್ನು ಸೂಸದೆ ಅಲ್ಲಿಯೆ ಮುದುಡಿಕೊಳ್ಳುತ್ತಿದೆ.

ಮಲ್ಲಿಗೆಯನ್ನು ಬೆಳೆಯುವ ರೈತರು ಅತ್ತ ಗಿಡದಲ್ಲೂ ಬಿಡಲಾಗದೆ, ಅದನ್ನು ತೆಗೆದು ಕಟ್ಟೆ ಕಟ್ಟಿ ಮಾರಾಟ ಮಾಡಲಾಗದೆ ಅತಂತ್ರರಾಗಿದ್ದಾರೆ.

ಭಟ್ಕಳ ತಾಲೂಕಿನ ಸುಮಾರು 90 ಹೆಕ್ಟೇರ್ ಪ್ರದೇಶದಲ್ಲಿ ಮಲ್ಲಿಗೆಯನ್ನು ಒಂದು ಪ್ರಮುಖ ಬೆಳೆಯನ್ನಾಗಿ ಬೆಳಸಲಾಗುತ್ತಿದೆ. ಕೃಷಿಯಲ್ಲಿ ಮಲ್ಲಿಗೆಯೂ ಒಂದು ಪ್ರಮುಖ ಪಾತ್ರ ಪಡೆದಿದ್ದು, ಭಟ್ಕಳ ತಾಲ್ಲೂಕೊಂದರಲ್ಲೇ 8ರಿಂದ 10 ಸಾವಿರ ಕುಟುಂಬಗಳು ಮಲ್ಲಿಗೆಯನ್ನು ಆಶ್ರಯಿಸಿ ಬದುಕು ಸಾಗಿಸುತ್ತಿವೆ. ಮಲ್ಲಿಗೆಯ ಗಿಡ ಬೆಳೆಸಿ ಅದರಿಂದ ಫಸಲು ಪಡೆಯಲು ಸುಮಾರು 2 ವರ್ಷಗಳಂತೂ ಬೇಕು. ಅದು ಫಸಲು ಕೊಡಲು ಆರಂಭಿಸಿದ ನಂತರ ಸತತವಾಗಿ ಅದರ ಆರೈಕೆ ಆಗಲೇಬೇಕು.

ಭಟ್ಕಳ ತಾಲೂಕಿನ ಮುಠ್ಠಳ್ಳಿ, ಮಣ್ಕುಳಿ, ತಲಾಂದ, ಮುಂಡಳ್ಳಿ, ಶಿರಾಲಿ, ಬೆಂಗ್ರೆ, ಮಾವಳ್ಳಿ- 1 ಹಾಗೂ ಮಾವಳ್ಳಿ-2, ಬೈಲೂರು ಪಂಚಾಯತಿ ವ್ಯಾಪ್ತಿಯಲ್ಲಿ ಮಲ್ಲಿಗೆಯನ್ನು ವ್ಯಾಪಕವಾಗಿ ಬೆಳೆಯಲಾಗುತ್ತಿದೆ. ಇವರೆಲ್ಲರೂ ಆರ್ಥಿಕವಾಗಿ ಸಬಲರಾಗುವ ಕಾರಣಕ್ಕೆ ಉಳಿದ ಕೃಷಿಯನ್ನು ಕೈ ಬಿಟ್ಟು ಮಲ್ಲಿಗೆಯನ್ನು ನಂಬಿಕೊಂಡಿದ್ದಾರೆ. ಆದರೆ, ಇದೀಗ ದೇಶದಲ್ಲಿ ಕೊರೋನಾ ಕಂಟಕ ಎದುರಾಗಿದ್ದು, ಲಾಕ್‌ಡೌನ್ ಸಂಕಟದಲ್ಲಿ ದೇಶವಿದೆ. ಇದರಿಂದ ಹೂವಿನ ಮಾರುಕಟ್ಟೆ ಸಂಪೂರ್ಣ ಸ್ತಬ್ಧವಾಗಿದ್ದು, ಇದನ್ನೇ ಆಶ್ರಯಿಸಿದ್ದ ಬೆಳೆಗಾರರು ಕಂಗಾಲಾಗಿದ್ದಾರೆ.

ಬಿಟ್ಟರೆ ಹುಳದ ಕಾಟ, ತೆಗೆದರೆ ಬೆಲೆಯಿಲ್ಲ: ಮಲ್ಲಿಗೆಗೆ ಫೆಬ್ರ‍್ರುವರಿ, ಮಾರ್ಚ್, ಏಪ್ರಿಲ್, ಮೇ ತಿಂಗಳಲ್ಲಿ ಭಾರಿ ಬೇಡಿಕೆ ಇರುತ್ತಿದ್ದವು. ಆದರೆ, ಈ ಕೊರೋನಾದಿಂದ ಎಲ್ಲವೂ ಹಾಳಾಗಿದಂತಾಗಿದೆ. ಅತ್ತ ಕಡೆ ಮಾರಾಟವಿಲ್ಲ ಎಂದು ಸುಮ್ಮನೆ ಗಿಡದಲ್ಲೇ ಮಲ್ಲಿಗೆಯನ್ನು ಬಿಟ್ಟರೆ ಕೀಟಗಳಿಂದ ಗಿಡವು ನಾಶವಾಗಲಿವೆ. ಗಿಡದಲ್ಲಿನ ಮಲ್ಲಿಗೆ ಮೊಗ್ಗು ತೆಗೆದರೆ ಅದನ್ನು ಖರೀದಿಸುವವರಿಲ್ಲ. ಇದರಿಂದಾಗಿ ಬೆಳೆಗಾರರು ಅಕ್ಕಪಕ್ಕದ ಮನೆಯವರಿಗೆ ಮುಡಿಯಲು, ದೇವರ ಪೂಜೆಗೆ ನೀಡುತ್ತಾ ಸಮಾಧಾನಪಟ್ಟುಕೊಳ್ಳುತ್ತಿದ್ದಾರೆ.

ಮಕ್ಕಳಂತೆ ಮಲ್ಲಿಗೆ: ಮಲ್ಲಿಗೆ ಮೊಗ್ಗು ಕೊಯ್ಯುವವರಿಗೆ ಪ್ರತಿದಿನ ಮೊಳದ ಲೆಕ್ಕದಂತೆ ನೀಡುವ ಸಂಭಾವನೆ ಒಂದೆಡೆಯಾದರೆ, ತೆಗೆದ ಹೂವು ಹಾಳಾಗುತ್ತಿರುವ ಹೊರೆ ಇನ್ನೊಂದೆಡೆ. ಕಾಲಕ್ಕೆ ತಕ್ಕಂತೆ ನೀರು, ಗೊಬ್ಬರ, ಮದ್ದು ಸಿಂಪಡಣೆ ಎಲ್ಲವೂ ಹಾಕಿ ಮಲ್ಲಿಗೆಯನ್ನು ತಮ್ಮ ಜೀವನದ ಒಂದು ಅವಿಭಾಜ್ಯ ಅಂಗವಾಗಿಯೇ ನೋಡಿಕೊಂಡಿದ್ದು, ಮಕ್ಕಳಂತೆ ಪೋಷಿಸಿದ್ದಾರೆ. ಆದರೆ, ಇವೆಲ್ಲದರ ಮಧ್ಯೆ ಅವರ ಪಾಲನೆ, ಪೋಷಣೆ, ಬೆಳೆಗೆ ಮಾಡಿದ ಖರ್ಚು ದುಬಾರಿಯಾಗಿರುವುದು ಮಲ್ಲಿಗೆ ಬೆಳೆಗಾರರಿಗೆ ಆತಂಕ ದ್ವಿಗುಣಗೊಳಿಸಿದೆ. ಕೋವಿಡ್- 19 ಮಹಾಮಾರಿಯ ವಿಷಯದಲ್ಲಿ ಭಟ್ಕಳ ಹಾಟ್‌ಸ್ಪಾಟ್ ಆಗಿ ಗುರುತಿಸಿಕೊಂಡಿರುವುದು ರೈತರ ನೆಮ್ಮದಿ ಮತ್ತಷ್ಟು ಹಾಳು ಮಾಡಿದೆ.

ಭಟ್ಕಳದಲ್ಲಿ ಪ್ರತಿದಿನ ಸರಾಸರಿ 1.10 ಲಕ್ಷ ಮೊಳ (11 ಸಾವಿರ ಅಟ್ಟೆ) ಹೂವು ಮಾರುಕಟ್ಟೆಗೆ ಹೋಗುತ್ತಿದ್ದವು. ಇದಕ್ಕೆ ಮಂಗಳೂರು ಮುಖ್ಯ ಮಾರುಕಟ್ಟೆಯಾದರೆ, ರಾಜ್ಯದ ವಿವಿಧೆಡೆಯೂ ಭಟ್ಕಳ ಮಲ್ಲಿಗೆಗೆ ಬೇಡಿಕೆ ಇದೆ. ಉಳಿದಂತೆ ಪಟ್ಟಣದಲ್ಲೂ ಮಲ್ಲಿಗೆ ಹಾಟ್ ಫೇವರೇಟ್. ಹೀಗಿರುವಾಗ ಪ್ರತಿದಿನ ಇಷ್ಟು ಪ್ರಮಾಣದ ಹೂವು ಹಾಳಾಗುತ್ತಿರುವುದು ಬೆಳೆಗಾರರ ಚಿಂತೆಗೆ ಕಾರಣವಾಗಿದ್ದು, ಸರ್ಕಾರ ತಮ್ಮ ನೆರೆವಿಗೆ ಬರಬೇಕು ಎಂದು ಕೃಷಿಕರು ಆಗ್ರಹಿಸುತ್ತಿದ್ದಾರೆ.

ಕಳೆದ ವರ್ಷ ಮಾರ್ಚ್‌ನಿಂದ ಮೇ ತಿಂಗಳ ತನಕ ದಿನಕ್ಕೆ ನೂರಾರು ಮಲ್ಲಿಗೆ ಮೊಳ ಸಿಗುತ್ತಿದ್ದು, ಭಾರಿ ಬೇಡಿಕೆ ಹಾಗೂ ಉತ್ತಮ ದರವೂ ಲಭಿಸಿತ್ತು. ಅದರಂತೆ ಈ ವರ್ಷವೂ ಒಳ್ಳೆಯ ಬೇಡಿಕೆ ಬರಲಿದೆ ಎಂದು ಭರವಸೆಯಿಟ್ಟಿದ್ದೆವು. ಆದರೆ ದೇಶಕ್ಕೆ ಬಂದ ಕೊರೋನಾ ರೋಗದಿಂದ ಮಲ್ಲಿಗೆ ಬೆಳೆಗೆ ಬೇಡಿಕೆ ಕುಸಿದಿದೆ. ಇದನ್ನೇ ನಂಬಿ ಬದುಕು ಸಾಗಿಸುವ ನಮಗೆ ಆಕಾಶವೇ ಕಳಚಿ ಬಿದ್ದಂತಾಗಿದೆ. ಈ ಬಗ್ಗೆ ಇಲಾಖೆಯವರು ನಮ್ಮ ಬೆಂಬಲಕ್ಕೆ ಬರಬೇಕಿದೆ.
ಶಾಂತಿ ದೇವಾಡಿಗ, ಮಲ್ಲಿಗೆ ಬೆಳೆಗಾರರು

ಭಟ್ಕಳದಲ್ಲಿ ಮಲ್ಲಿಗೆ ಬೆಳೆಗೆ ಅದರದೇ ಆದ ಮಾರುಕಟ್ಟೆ ಇದೆ. ಪ್ರತಿದಿನ ಲಕ್ಷ ಮೊಳದಷ್ಟು ಹೂವು ಹಾಳಾಗುತ್ತಿರುವ ಕುರಿತು ಕಾರವಾರದ ಉಪನಿರ್ದೇಶಕರ ಗಮನಕ್ಕೆ ತರಲಾಗಿದೆ. ಇವರಿಗೂ ಬೆಂಬಲ ಬೆಲೆ ನೀಡುವ ಕುರಿತು ಉಪನಿರ್ದೇಶಕರು ರಾಜ್ಯ ಮಟ್ಟದಲ್ಲಿ ಮಾತುಕತೆ ನಡೆಸುತ್ತಿದ್ದಾರೆ. ಕೃಷಿಕರಿಗೆ ತಿರುಗಾಡಲು ಯಾರು ತಡೆ ಒಡ್ಡುವಂತಿಲ್ಲ ಎಂದು ಸರ್ಕಾರ ಆದೇಶಿಸಿದೆ.
ಸಂಧ್ಯಾ ಭಟ್, ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ

 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...