ಪುಸ್ತಕಗಳು ಮನುಷ್ಯನ ಬದುಕಿಗೆ ನಿಜವಾಗಿ ಆಸರೆಯಾಗುವ ಸಂಗಾತಿ. ಅಂತಹ ಪುಸ್ತಕದ ಸಾಂಗತ್ಯ ಅತ್ಯಂತ ಶ್ರೇಷ್ಠವಾದುದು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ್ ನುಡಿದರು. ಅವರು ಭಟ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ದೀಪಾ ಬುಕ್ ಹೌಸ್ ಪುತ್ತೂರು ಇವರ ಸಹಯೋಗದಲ್ಲಿ ಆಯೋಜಿಸಲಾದ ಪುಸ್ತಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ನಂತರ ಮಾತನಾಡಿದ ಅವರು ಪುಸ್ತಕದದ ಓದು ನೀಡುವ ಖುಷಿಯಾಗಲಿ ಮಾನಸಿಕ ವಿಕಾಸವಾಗಲಿ ಮೊಬೈಲ್ ಅಥವಾ ಅಂತರ್ಜಾಲಗಳಿಂದಲಾಗಲಾರದು ಶಾಲಾ ಮಕ್ಕಳಿಂದ ಆದಿಯಾಗಿ ಎಲ್ಲರೂ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಂಡು ಹೆಚ್ಚಿಸಿಕೊಳ್ಳಬೇಕೆಂದರಲ್ಲದೇ ಈ ನೆಲೆಯಲ್ಲಿ ಕಸಾಪ ಭಟ್ಕಳ ಘಟಕ ಮತ್ತು ದೀಪಾ ಬುಕ್ ಹೌಸ್ ಪುತ್ತೂರು ಇವರ ಸಹಯೋಗದಲ್ಲಿ ನಡೆಯುತ್ತಿರುವ ಪುಸ್ತಕೋತ್ಸದ ಕುರಿತು ಅಭಿನಂದಿಸಿ ವಿದ್ಯಾವಂತರು, ಯುವಕ ಯುವತಿಯರು ಸಾರ್ವಜನಿಕರು ಸದುಪಯೋಗಪಡೆಸಿಕೊಳ್ಳುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಮಾತನಾಡಿ ಹೊತ್ತಗೆಯುನಮ್ಮ ಬದುಕಿನ ಎಲ್ಲ ಹೊತ್ತಿಗೆ ನಮ್ಮಜೊತೆಗೆ ಇರುವ ಮಿತೃ. ಯಾವ ಪ್ರತಿಫಲಾಪೇಕ್ಷೆ ಇಲ್ಲದೇ . ಇಟ್ಟಲ್ಲಿ ಇರುವ ಬೇಕೆಂದಾಗ ಕೈಗೆ ಬರುವ ಗೆಳೆಯ. ಯಾರು ಪುಸ್ತಕದ ಗೆಳೆತನ ಹೊಂದಿರುತ್ತಾರೋ ಆವರೆಂದೂ ಒಂಟಿತನ ಅನುಭವಿಸಲಾರರು ಎಂದರು. ಕಸಾಪ ಸಂಘಟನಾ ಕಾರ್ಯದರ್ಶಿ ಪ್ರಕಾಶ್ ಶಿರಾಲಿ ಎಲ್ಲರನ್ನು ಸ್ವಾಗತಿಸಿ ವಂದಿಸಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಸ.ಮಾ.ಕ.ಗಂಡು ಮಕ್ಕಳ ಶಾಲೆಯ ಪ್ರಭಾರಿ ಮುಖ್ಯಾಧ್ಯಾಪಕಿ ಮಾಲತಿ ಕೆ, ದೀಪಾ ಬುಕ್ ಹೌಸ್ನ ಸತ್ಯಮೂರ್ತಿ ಹೆಬ್ಬಾರ್ ,ಮಂಜುನಾಥ್ ಉಪಸ್ಥಿತರಿದ್ದು ಅತಿಥಿಗಳಿಗೆ ಪುಸ್ತಕವನ್ನು ನೆನಪಿನ ಕಾಣಿಕೆಯಾಗಿ ನೀಡಿದರು ಕಾರ್ಯಕ್ರಮದಲ್ಲಿ ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆಯ ಶಿಕ್ಷಕಿ ಜಯಶ್ರೀ ಆಚಾರಿ, ಪ್ರೇಮಾ ಮತ್ತು ವಿಧ್ಯಾರ್ಥಿಗಳು ಉಪಸ್ಥಿತರಿದರು. ನಂತರ ಜ.ಪಂ. ಅಧ್ಯಕ್ಷರು ಪುಸ್ತಕ ವೀಕ್ಷಣೆ ಮಾಡಿದರು.