ಕಾರವಾರ : ಲೋಕಾಯುಕ್ತ ಕಾರವಾರ ಘಟಕದ ಪೊಲೀಸ್ ಅಧಿಕಾರಿಗಳು ಜುಲೈ 25 ರಿಂದ 31 ರವರೆಗೆ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುತ್ತಿದ್ದು ಜು.29 ರಂದು ಬೆಳಿಗ್ಗೆ 11.00ರಿಂದ 12.30ರ ವರೆಗೆ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಆಹವಾಲುಗಳನ್ನು ಸ್ವೀಕರಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಜುಲೈ 25 ರಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 1 ರವರೆಗೆ ಕಾರವಾರ ಲೋಕಾಯುಕ್ತ ಪೊಲೀಸ್ ಅಧಿಕ್ಷಕರ ಕಚೇರಿಯಲ್ಲಿ, 26 ರಂದು ಬೆಳಗ್ಗೆ 11 ರಿಂದ 12.30 ರವರೆಗೆ ಕುಮಟಾ ಹಾಗೂ ಮಧ್ಯಾಹ್ನ 2.30 ರಿಂದ 4 ರವರೆಗೆ ಹೊನ್ನಾವರ ಪ್ರವಾಸಿ ಮಂದಿರ, 29 ರಂದು ಬೆಳಗ್ಗೆ 11 ರಿಂದ 12.30 ರವರೆಗೆ ಭಟ್ಕಳ ಪ್ರವಾಸಿ ಮಂದಿರ, 30 ರಂದು ಬೆಳಗ್ಗೆ 11 ರಿಂದ 12.30 ರವರೆಗೆ ಜೋಯಿಡಾ ಹಾಗೂ ಮಧ್ಯಾಹ್ನ 3 ರಿಂದ 4.30 ರವರೆಗೆ ಹಳಿಯಾಳ ಪ್ರವಾಸಿ ಮಂದಿರ, 31 ರಂದು ಬೆಳಗ್ಗೆ 11 ರಿಂದ 12.30 ರವರೆಗೆ ಯಲ್ಲಾಪುರ ಹಾಗೂ ಮಧ್ಯಾಹ್ನ 3.30 ರಿಂದ ಸಂಜೆ 5 ರವರೆಗೆ ಶಿರಸಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಾಗುವುದು.
ದೂರು ನೀಡುವವರು ಸಿವಿಲ್ ಮತ್ತು ನ್ಯಾಯಾಲಯಗಳಲ್ಲಿ ನಡೆಯುತ್ತಿರುವ ಪ್ರಕರಣಗಳನ್ನು ಹೊರತುಪಡಿಸಿ ಸಾರ್ವಜನಿಕ/ಸರ್ಕಾರಿ ನೌಕರರ ಕರ್ತವ್ಯ ಲೋಪಕ್ಕೆ ಸಂಬಂದಿಸಿದಂತೆ ಅರ್ಜಿ ನಮೂನೆ 1 ಮತ್ತು 2 ರಲ್ಲಿ ಭರ್ತಿ ಮಾಡಿ ನೋಟರಿಯಿಂದ ಆಫಿಡೆವಿಟ್ ಮಾಡಿ ಸಂಬಂದಪಟ್ಟ ಎಲ್ಲಾ ದಾಖಲಾತಿಗಳೊಂದಿಗೆ ದೂರು ಅರ್ಜಿಯನ್ನು ಜಿಲ್ಲಾ ಲೋಕಾಯುಕ್ತ ಕಛೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ ಬಹುಮಹಡಿಗಳ ಕಟ್ಟಡ, ಡಾ|| ಬಿ.ಆರ್.ಅಂಬೇಡ್ಕರ್ ಬೀದಿ ಬೆಂಗಳೂರ ರವರಿಗೂ ಸಹ ಸಲ್ಲಿಸಬಹುದಾಗಿದೆ.
ಅನಾಮದೇಯ ಅರ್ಜಿಗಳು ಬಂದಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ ಆದ್ದರಿಂದ ಅರ್ಜಿದಾರರು ಅರ್ಜಿಯಲ್ಲಿ ತಮ್ಮ ಹೆಸರು, ವಿಳಾಸ ಹಾಗೂ ದೂರವಾಣಿ ಸಂಖ್ಯೆಗಳನ್ನು ತಪ್ಪದೇ ನಮೂದಿಸುವುದು, ಹೆಚ್ಚಿನ ವಿವರಗಳಿಗಾಗಿ ಲೋಕಾಯುಕ್ತ ಕಛೇರಿ : ದೂರವಾಣಿ ಸಂಖ್ಯೆ: 08382-222202, 222250, 222022, 220198. ಸಂಪರ್ಕಿಸಬಹುದಾಗಿದೆ.