ಭಟ್ಕಳ : ಕೋವಿಡ್ 2ನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು ಅಧಿಕಾರಿಗಳು, ವೈದ್ಯರು ಸೈನಿಕರಂತೆ ಕೆಲಸ ಮಾಡಬೇಕು. ಕೋವಿಡ್ ಮಾರ್ಗಸೂಚಿ ಪಾಲನೆ ಮಾಡುವಾಗ ಅಧಿಕಾರಿಗಳು ಯಾರ ಒತ್ತಡಕ್ಕೂ ಮಣಿಯದೇ ನಿರ್ಧಾಕ್ಷಿಣ್ಯ ಕ್ರಮಕ್ಕೆ ಮುಂದಾಗಬೇಕು ಎಂದು ಭಟ್ಕಳ ಶಾಸಕ ಸುನೀಲ ನಾಯ್ಕ ಹೇಳಿದರು.
ಅವರು ಶುಕ್ರವಾರ ಕೋವಿಡ್ 2ನೇ ಅಲೆಯ ನಿಯಂತ್ರಣ ಹಾಗೂ ಮುಂಜಾಗ್ರತ ಕ್ರಮಗಳ ಬಗ್ಗೆ ಚರ್ಚಿಸಲು ಭಟ್ಕಳ ಉಉವಿಭಾಗಾಧಿಕಾರಿಗಳ ಕಛೇರಿಯಲ್ಲಿ ಕರೇದ ಹೊನ್ನಾವರ ಹಾಗೂ ಭಟ್ಕಳ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು. ಭಟ್ಕಳ ಹಾಗೂ ಹೊನ್ನಾವರ ತಾಲೂಕಿನಲ್ಲಿ ಇರುವ ಕೋವಿಡ್ ಸೋಂಕಿತರ ಮಾಹಿತಿ ಪಡೆದ ಅವರು ಆಸ್ಪತ್ರೆಯಲ್ಲಿರುವ ಆಮ್ಲಜನಕ ಸಂಗ್ರಹ, ಬೆಡ್ ಗಳ ವ್ಯವಸ್ಥೆಗಳ ವಿವರಣೆ ಕೇಳಿದರು. ತಾಲೂಕಿನಲ್ಲಿ ಬೆಡ್ ಗಳ ಕೊರತೆ ಕಂಡುಬಂದಲ್ಲಿ ವಿದ್ಯಾರ್ಥಿಗಳ ವಸತಿ ನಿಲಯಗಳನ್ನು ಎರವಲು ಪಡೆಯುವುದಾಗಿ ತಿಳಿಸಿದರು. ಇದಕ್ಕೆ ಪ್ರತಿಕ್ರೀಯಿಸಿ ಡಾ! ಸವಿತಾ ಕಾಮತ್ ಬೆಡ್ ವ್ಯವಸ್ಥೆ ಮಾಡುವುದರಿಂದ ಎನೂ ಪ್ರಯೋಜನವಾಗುವುದಿಲ್ಲ. ಈ ಬಾರಿ ಸೋಂಕಿತರಿಗೆ ಬೆಡ್ ಗಳ ಜೊತೆ ಆಮ್ಲಜನಕ ಪೂರೈಕೆ ಕೂಡ ಮಾಡಬೇಕಾಗುತ್ತದೆ. ಅದು ಅಲ್ಲಿ ಸಾಧ್ಯವಾಗುವುದಿಲ್ಲ ಎಂದರು. ಹೊನ್ನಾವರ ಹಾಗೂ ಭಟ್ಕಳ ತಾಲೂಕಿನಲ್ಲಿ ಜನರು ಅನಗತ್ಯವಾಗಿ ಓಡಾಟ ಮಾಡುತ್ತೀರುವುದು ನನ್ನ ಗಮನಕ್ಕೆ ಬಂದಿದೆ. ಇಂದು ಬಂದವರೇ ನಾಳೆ ಮಾರುಕಟ್ಟಯಲ್ಲಿರುತ್ತಾರೆ. ಭಟ್ಕಳ ಪಟ್ಟಣದಲ್ಲಿ ಬೆಳಿಗ್ಗೆ ಜನದಟ್ಟಣೆ ತುಂಬಿರುತ್ತದೆ. ಪೊಲೀಸರು ಬಿಗಿ ಕ್ರಮ ಕೈಗೊಂಡು ಜನರ ಅನಗತ್ಯ ತೀರುಗಾಟಕ್ಕೆ ನಿಯಂತ್ರಣ ಹಾಕಬೇಕು ಎಂದು ಶಾಸಕ ಸುನೀಲ್ ಡಿವೈಎಸ್ಪಿ ಬೆಳ್ಳಿಯಪ್ಪ ಅವರಿಗೆ ಹೇಳಿದರು. ಖಾಸಗಿ ಆಸ್ಪತ್ರೆಗಳು ಕೋವಿಡ್ ಸೋಂಕಿನ ಲಕ್ಷಣವುಳ್ಳವರಿಗೆ ಚಿಕಿತ್ಸೆ ನೀಡುತ್ತೀರುವ ಹಾಗೂ ಔಷಧಿ ಅಂಗಡಿಗಳಲ್ಲಿ ವೈದ್ಯರ ಚೀಟಿಯಿಲ್ಲದೇ ಔಷಧಿ ನೀಡುತ್ತೀರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕರು ನೊಡೇಲ್ ಅಧಿಕಾರಿಗಳು ಪ್ರತಿದಿವಸ ಅಲ್ಲಿಗೆ ಭೇಟಿ ಮಾಡಿ ಮಾಹಿತಿ ಸಂಗ್ರಹಿಸುವಂತೆ ತಿಳಿಸಿದರು. ಭಟ್ಕಳ ಉಪವಿಭಾಗಾಧಿಕಾರಿ ಮಮತಾ ದೇವಿ, ಭಟ್ಕಳ ತಹಶೀಲ್ದಾರ ರವಿಚಂದ್ರ, ಹೊನ್ನಾವರ ತಹಶೀಲ್ದಾರ ವಿವೇಕ, ಡಾ! ಬಾಲಚಂದ್ರ ಮೇಸ್ತ, ಹೊನ್ನಾವರ ಸಿಪಿಐ ಶ್ರೀಧರ ಎಸ್.ಆರ್, ಇದ್ದರು.
Read These Next
ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್
ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...
ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್
೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...
ಕಣ್ಣೂರಿನಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಐವರು ಮೃತ್ಯು
ಕಣ್ಣೂರಿನಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಐವರು ಮೃತ್ಯು; ಮನೆಮಗನನ್ನು ಕೋಝಿಕ್ಕೋಡ್ನ ಹಾಸ್ಟೆಲ್ ಗೆ ದಾಖಲಿಸಿ ...
ಭಟ್ಕಳದ ಏಐಟಿಎಮ್ (AITM) ನಲ್ಲಿ ಕ್ಯೂ ಸ್ಪೈಡರ್ಸ್ ನಿಂದ ಕ್ಯಾಂಪಸ್ ಸಂದರ್ಶನ
ಬೆಂಗಳೂರಿನ ಕ್ಯೂ ಸ್ಪೈಡರ್ಸ್ ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ ಭಟ್ಕಳದ ಅಂಜುಮನ್ ಇನ್;ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ...
ಕಾರವಾರ: ಮಾದರಿ ನೀತಿ ಸಂಹಿತೆ ಉಲ್ಲಂಘನೆ ; ವಸ್ತುಗಳ ವಶ
ಅಬಕಾರಿ ಇಲಾಖೆ ವತಿಯಿಂದ 44.31 ಲೀ ಮದ್ಯ (ಮೌಲ್ಯ ರೂ.20,717) ವಶಪಡಿಸಿಕೊಂಡಿದ್ದು , ಇದುವರೆಗೆ ಅಬಕಾರಿ ಇಲಾಖೆ ವತಿಯಿಂದ ಒಟ್ಟು 1016 ಮತ್ತು ...
ಕಾರವಾರ: ಉಚಿತ ಕೌಶಲ್ಯ ಆಧಾರಿತ ತರಬೇತಿಗೆ ಅರ್ಜಿ ಆಹ್ವಾನ
ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗ ಯುವಕ ...