ದೇವಸ್ಥಾನಗಳಿಗೆ ಮಂಜೂರಾದ ಹಣ ಸದ್ಬಳಕೆಯಾಗಬೇಕು: ಭಟ್ಕಳ ಶಾಸಕ ಸುನೀಲ್ ನಾಯ್ಕ

Source: S O News Service | By I.G. Bhatkali | Published on 20th September 2020, 11:51 PM | Coastal News |

ಭಟ್ಕಳ: ತಾಲೂಕಿನ ಹಲವು ದೇವಸ್ಥಾನಗಳಿಗೆ ಅಬಿವೃದ್ದಿಗೆ  ಧಾರ್ಮಿಕ ದತ್ತಿನಿಧಿಯಿಂದ ನಮ್ಮ ಸರಕಾರದಿಂದ
ಹಣ ಮಂಜೂರಾಗಿದ್ದು ಇದರ ಸದ್ಭಳಕೆಯಾಗಬೆಕಾಗಿದೆ ಎಂದು ಶಾಸಕ ಸುನೀಲ್ ನಾಯ್ಕ ಹೇಳಿದರು.

ಅವರು ರವಿವಾರದಂದು ಬೆಳಿಗ್ಗೆ ನಗರದ ಆಸರಕೇರಿಯ ಗುರುಮಠ ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನದ ಅಬಿವೃದ್ದಿಗೆ ಸರಕಾರದಿಂದ ಮಂಜೂರಾದ ಕಾಮಗಾರಿಗೆ ದೇವಸ್ಥಾನದ ಆವರಣದಲ್ಲಿ  ಗುದ್ದಲಿ ಪೂಜೆ ನೆರವೇರಿಸಿ ಮಾತನಾಡುತ್ತಿದ್ದರು. 
 ಈಗಾಗಲೇ ಗುರುಮಠಕ್ಕೆ ಸರಕಾರದಿಂದ 20 ಲಕ್ಷ ರೂ ಮಂಜೂರಿ ದೊರೆತಿದ್ದು ಇನ್ನು ಮುಂದಿನ ಹಂತದಲ್ಲಿ ಇ  ದೇವಸ್ಥಾನದ ಯಾತ್ರಿನಿವಾಸ ವಸತಿಗೃಹಕ್ಕೆ ಹಣ ಮಂಜೂರಿಗೆ ಶಿಫಾರಸ್ಸು ಮಾಡಲಾಗಿದ್ದು ತಾಲೂಕಿನ ಎಲ್ಲಾ ದೇವಸ್ಥಾನಗಳಿಗೆ ನಮ್ಮ  ಸರಕಾರದಿಂದ ಹಣ ಮಂಜೂರಾತಿಗಾಗಿ ಪ್ರಯತ್ನಿಸಲಾಗುವುದು ಎಂದರು. 

ದೇವಸ್ತಾನದ ಆಡಳಿತ ಮಂಡಳಿಯ ಅಧ್ಯಕ್ಷ ಎಂ.ಆರ್. ನಾಯ್ಕ, ಗೌರವಾಧ್ಯಕ್ಷ ಡಿ.ಬಿ.ನಾಯ್ಕ ಮಾತನಾಡಿ ತಾಲೂಕಿನಲ್ಲಿ  ಶಾಸಕರು ಅನೇಕ ಅಬಿವೃದ್ದ ಕಾರ್ಯಕ್ರಮಗಳನ್ನು ಮಾಡುತ್ತಿದ್ದು ನಮ್ಮ ದೇವಸ್ಥಾನಗಳಿಗೆ ಹಣ ಮಂಜೂರಾತಿಯ ಬಗ್ಗೆ  ಮೆಚ್ಚುಗೆ ವ್ಯಕ್ತಪಡಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರಾದ ಮೋಹನ ನಾಯ್ಕ,  ಶ್ರೀಧರ ನಾಯ್ಕ, ರಾಜೇಶ ನಾಯ್ಕ, ಎಸ್.ಎಂ.ನಾಯ್ಕ, ಗಣಪತಿ ನಾಯ್ಕ, ವಿನಾಯಕ ನಾಯ್ಕ ಸೇರಿದಂತೆ ನೂತನ ಕಮಿಟಿಯ ಸದಸ್ಯರು ಹಾಜರಿದ್ದರು.
 

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...