ದಡಾರ ರುಬೆಲ್ಲಾ ವ್ಯಾಕ್ಸಿನ್ ಗೆ ಭಾರಿ ಪ್ರತಿರೋಧ; ಶಿಕ್ಷಕ, ವೈದ್ಯರ ಹಲ್ಲೆಗೆ ಮುಂದಾದ ಪಾಲಕರು

Source: S O News service | By Staff Correspondent | Published on 20th February 2017, 12:20 AM | Coastal News | Incidents | Don't Miss |

ಭಟ್ಕಳ: ಇಲ್ಲಿನ ಖಾಸಗಿ ಆಂಗ್ಲ ಮಾಧ್ಯಮ ಶಾಲೆಯೊಂದರಲ್ಲಿ ಸರ್ಕಾರದ ಯೋಜನೆಯಾದ ದಡಾರ, ರುಬೆಲ್ಲಾ ಲಸಿಕಾ ಅಭಿಯಾನದಲ್ಲಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡುತ್ತಿರುವ ಸಂದರ್ಭದಲ್ಲಿ ತೀವ್ರ ಪ್ರತಿರೋಧ ವ್ಯಕ್ತಪಡಿಸಿದ ಪಾಲಕರು ವೈದ್ಯರು ಹಾಗೂ ಶಾಲಾ ಶಿಕ್ಷಕರ ಮೇಲೆ ಹಲ್ಲೆಗೆ ಮುಂದಾಗಿರುವ ಘಟನೆ ರವಿವಾರ ಜರಗಿದೆ. 

ತಾಲೂಕಿನ ಹೆಬಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಮ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರವಿವಾರ ವಿದ್ಯಾರ್ಥಿಗಳಿಗೆ ಲಿಸಿಕೆ ನೀಡುತ್ತಿದ್ದು ತಮ್ಮ  ಅನುಮತಿಯಿಲ್ಲದೆ ಲಸಿಕೆಯನ್ನು ನೀಡಲಾಗುತ್ತಿದೆ ಎಂದು ಆರೋಪಿಸಿದ ಐವತ್ತಕ್ಕೂ ಹೆಚ್ಚು ಪಾಲಕರು ಎಕಾ‌ಎಕಿ ಶಾಲೆಗೆ ನುಗ್ಗಿ ಅಲ್ಲಿನ ಆಡಳಿತ ಮಂಡಳಿ ಕಾರ್ಯದರ್ಶಿ, ಶಿಕ್ಷಕರು ಹಾಗೂ ವೈದ್ಯರನ್ನು ತರಾಟಗೆ ತೆಗೆದುಕೊಂಡಿದ್ದು ಮಹಿಳಾ ವೈದ್ಯೆಯೊಬ್ಬರು ಹಾಗೂ ಇಬ್ಬರು ಶಿಕ್ಷಕರ ಮೇಲೆ ಹಲ್ಲೆಗೂ ಮುಂದಾಗಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿರುವುದನ್ನು ಮನಗಂಡ ಶಾಲೆಯ ಮುಖ್ಯಸ್ಥರು ತಹಸಿಲ್ದಾರರಿಗೆ ವಿಷಯ ತಿಳಿಸಿದ್ದು ಕೂಡಲೆ ಸ್ಥಳಕ್ಕಾಗಮಿಸಿದ ತಹಸಿಲ್ದಾರ್ ವಿ.ಎನ್.ಬಾಡ್ಕರ್ ಪಾಲಕರ ಮನವೊಲಿಸಲು ಎಷ್ಟೇ ಪ್ರಯತ್ನಿಸಿದರೂ ಕೇಳದ ಪಾಲಕರು ತಹಸಿಲ್ದಾರರ ವಿರುದ್ಧವೇ ತಿರುಗಿಬಿದ್ದಿದ್ದು ಈ ಲಸಿಕೆಯನ್ನು ಮುಸ್ಲಿಮರನ್ನು ಗುರಿಯಾಗಿಸಿ ನೀಡಲಾಗುತ್ತಿದೆ. ಮುಸ್ಲಿಮ್ ಮಕ್ಕಳಿಗೆ ಸಂತಾನಹರಣ ಮಾಡುವ ಈ ಲಸಿಕೆ ನಮಗೆ ಬೇಡ ಎಂದು ತಹಸಿಲ್ದಾರರೊಂದಿಗೆ ವಾಗ್ವಾದ ನಡೆಸಿದರು. ತಹಿಸಿಲ್ದಾರರು ಇದು ಸರ್ಕಾರದ ಅಭಿಯಾನ ಮಕ್ಕಳ ಮುಂದಿನ ಭವಿಷ್ಯವನ್ನು ಮುಂದಿಟ್ಟುಕೊಂಡು ರೂಪಿಸಲಾಗಿದೆ. ದಡಾರ ಹಾಗೂ ರುಬೆಲ್ಲಾ ರೋಗಗಳಿಂದ ಹೋರಾಟ ಮಾಡಲಾಗುತ್ತಿದ್ದು ಭಟ್ಕಳದಲ್ಲಿ ಸುಮಾರು ೧೬ಸಾವಿರಕ್ಕೂ ಹೆಚ್ಚು ಹಿಂದೂ ವಿದ್ಯಾರ್ಥಿಗಳಿಗೆ ಈ ಲಸಿಕೆಯನ್ನು ನೀಡಲಾಗಿದೆ ಮುಸ್ಲಿಮರಲ್ಲಿನ ತಪ್ಪುತಿಳುವಳಿಯಿಂದಾಗಿ ಈ ಪ್ರತಿರೋಧ ನಡೆಯುತ್ತಿದ್ದು ಪಾಲಕರ ಮನವೊಲಿಸಲಾಗುವುದು, ಅಲ್ಲದೇ ಈ ಲಸಿಕೆ ಹಾಕುವುದು ಪ್ರತಿಯೊಂದು ವಿದ್ಯಾರ್ಥಿಗೆ ಕಡ್ಡಾಯವಾಗಿದೆ. ಯಾವುದಾದರೂ ಆರೋಗ್ಯ ಸಮಸ್ಯೆ ಇರುವ ವಿದ್ಯಾರ್ಥಿಗಳನ್ನು ಹೊರತು ಪಡಿಸಿ ಎಲ್ಲ ವಿದ್ಯಾರ್ಥಿಗಳಗೆ ಲಸಿಕೆಯನ್ನು ನೀಡಲಾಗುವುದು. ಲಸಿಕೆ ನೀಡುತ್ತಿರುವ ಶಾಲಾ ಸಿಬ್ಬಂಧಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂಧಿಗಳಿಗೆ ಯಾವುದೇ ರೀತಿಯ ತೊಂದರೆ ನೀಡಿದ್ದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಜರಗಿಸಲಾಗುವುದು. ಲಸಿಕಾ ಅಭಿಯಾನದ ವಿರುದ್ಧ ವಾಟ್ಸಪ್ ಸಂದೇಶ ಕಳುಹಿಸುತ್ತಿರುವ ಮೊಬೈಲ್ ಸಂಖ್ಯೆಗಳ ಹಾಗೂ ಗ್ರೂಪ್‌ಗಳ ಮೇಲೆ ಪೊಲೀಸರು ನಿಗಾವಹಿಸುವರು ಎಂದು ಅವರು ತಿಳಿಸಿದ್ದಾರೆ. 
ಪುರಸಭೆ ಅಧ್ಯಕ್ಷ ಮಟ್ಟಾ ಸಾದಿಕ್, ಇಮ್ತಿಯಾಝ್ ಉದ್ಯಾವರ್, ನಿಸಾರ್ ರುಕ್ನುದ್ದೀನ್, ತಂಝೀಮ್ ಉಪಾಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಮತ್ತಿತರರು ಪಾಲಕರನ್ನು ಸಮಧಾನಪಡಿಸಿ ಅವರಿಗೆ ತಿಳಿ ಹೇಳಿದರು. ಆದರೂ ಪಾಲಕರು ಯಾರ ಮಾತನ್ನು ಕೇಳದೇ ಇದ್ದಾಗ ಅನಿವಾರ್ಯವಾಗಿ ಲಸಿಕೆ ನೀಡುವುದನ್ನು ಸ್ಥಗಿತಗೊಳಿಸಲಾಯಿತು ಎಂದು ಶಾಲಾ ಮೂಲಗಳು ತಿಳಿಸಿವೆ.

 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...