ಮುರುಡೇಶ್ವರ ಚೂರಿ ಇರಿತ ಆರೋಪಿ ವಶಕ್ಕೆ

Source: S.O. News Service | By I.G. Bhatkali | Published on 28th October 2020, 11:01 PM | Coastal News |

ಭಟ್ಕಳ: ಕಳೆದ ಜುಲೈ ತಿಂಗಳಿನಲ್ಲಿ ಮುರುಡೇಶ್ವರದಲ್ಲಿ ವ್ಯಕ್ತಿಯೋರ್ವರಿಗೆ ಚೂರಿಯಿಂದ ಇರಿದು ಗಾಯಗೊಳಿಸಿ ಪರಾರಿಯಾಗಿದ್ದ ಆರೋಪಿಯನ್ನು ಮುರುಡೇಶ್ವರ ಪೊಲೀಸರು ಮಂಗಳವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತನನ್ನು ಮುರುಡೇಶ್ವರ ಕನ್ನಡ ಶಾಲೆ ವ್ಯಾಪ್ತಿಯ ಗಣೇಶ ಜಯಂತ ನಾಯ್ಕ (17) ಎಂದು ಗುರುತಿಸಲಾಗಿದೆ. ಈತ ಶಿವಮೊಗ್ಗದಲ್ಲಿ ತಲೆ ಮರೆಸಿಕೊಂಡಿದ್ದ ಎಂದು ತಿಳಿದು ಬಂದಿದೆ. ಈತನ ವಿರುದ್ಧ ಕಾರ್ತಿಕ್ ಜೀವನ ನಾಯ್ಕ (17) ಎಂಬುವವರು ಪೊಲೀಸರಿಗೆ ದೂರು ನೀಡಿದ್ದರು. ಆರೋಪಿಯನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗಿದೆ.  

ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. 

Read These Next