ಖಾಸಗಿ ಬಸ್​ಗಳ ಮೇಲೆ ತಹಶೀಲ್ದಾರ್ ದಾಳಿ: ದುಪ್ಪಟ್ಟು ಪ್ರಯಾಣ ದರ ವಿಧಿಸದಂತೆ ಖಡಕ್​​​ ಸೂಚನೆ

Source: so news | Published on 13th October 2019, 6:54 AM | Coastal News | Don't Miss |

ಭಟ್ಕಳ: ರಾತ್ರಿ ವೇಳೆ ಬೆಂಗಳೂರು ಹಾಗೂ ಹೊರ ಜಿಲ್ಲೆಗಳಿಗೆ ಸಂಚರಿಸುವ ಖಾಸಗಿ ಬಸ್​ಗಳ ಕಚೇರಿ ಹಾಗೂ ಬಸ್​​ಗಳ ಮೇಲೆ ತಹಶೀಲ್ದಾರ್​ ನೇತೃತ್ವದಲ್ಲಿ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.ಜಿಲ್ಲಾಧಿಕಾರಿಗಳಿಗೆ ಖಾಸಗಿ ಬಸಗಳ ಟಿಕೆಟ್ ದರ ದುಪ್ಪಟ್ಟು ಸಂಗ್ರಹದ ವಿರುದ್ಧ ದೂರು ಸಲ್ಲಿಕೆಯಾಗಿತ್ತು. ಇದರಿಂದ ಜಿಲ್ಲಾಧಿಕಾರಿಗಳು ತಹಶೀಲ್ದಾರ್​ಗೆ​ ಪರಿಶೀಲಿಸುವಂತೆ ಆದೇಶ ನೀಡಿದ್ದರು. ಈ ಹಿನ್ನೆಲೆ‌ ಕಚೇರಿ ಹಾಗೂ ಬಸ್​​ಗಳ ಮೇಲೆ ದಿಢೀರ್ ದಾಳಿ ನಡೆಸಲಾಗಿದೆ. ದಾಳಿಯಲ್ಲಿ ಹೆದ್ದಾರಿ ಪಕ್ಕದಲ್ಲಿ ಸಂಚಾರಕ್ಕೆ ಸಿದ್ಧವಿದ್ದ 4-5 ಖಾಸಗಿ ಬಸ್​​ಗಳನ್ನು ಹತ್ತಿ ಚಾಲಕ ಹಾಗೂ ಕಂಡಕ್ಟರ್​​ ಬಳಿ ಬಸ್​​ನಲ್ಲಿ ನಿಗದಿಯಾದ ದರದ ಪಟ್ಟಿ ಪಡೆದು ಪರಿಶೀಲನೆ ನಡೆಸಿದರು. ಬಳಿಕ ಬಸ್​ನಲ್ಲಿದ್ದ ಪ್ರಯಾಣಿಕರೋರ್ವರನ್ನು ಬಸ್ ದರದ ಬಗ್ಗೆ ವಿಚಾರಿಸಿದ ತಹಶೀಲ್ದಾರ್​​ ವಿ.ಪಿ.ಕೊಟ್ರಳ್ಳಿ ಎಲ್ಲಾ ಬಸ ಚಾಲಕ, ನಿರ್ವಾಹಕರಿಗೆ ಕನಿಷ್ಠ ದರ ಮಾತ್ರ ಪಡೆಯುವಂತೆ ಖಡಕ್​ ಎಚ್ಚರಿಕೆ ನೀಡಿದರು. ನಂತರ ಖಾಸಗಿ ಬಸ್​ ಕಚೇರಿಗಳಿಗೆ ತೆರಳಿ ಅಲ್ಲಿನ ದಾಖಲೆಗಳನ್ನು ಪರಿಶೀಲನೆ ನಡೆಸಿದರು.ಖಾಸಗಿ ಬಸ್​ಗಳ ಮೇಲೆ ಅಧಿಕಾರಿಗಳ ದಾಳಿಜಿಲ್ಲಾಧಿಕಾರಿಗಳ ಬಳಿ ದರ ದುಪ್ಪಟ್ಟು ಪಡೆದಿರುವ ಬಗ್ಗೆ ದೂರು ಸಲ್ಲಿಕೆಯಾಗಿದ್ದು, ಮತ್ತೊಮ್ಮೆ ಟಿಕೆಟ್ ದರದಲ್ಲಿ ದುಪ್ಪಟ್ಟು ಹಣ ವಸೂಲಿ ಮಾಡಿದರೆ ಜಿಲ್ಲಾಧಿಕಾರಿಗಳು ಮುಂದಿನ ಕಾನೂನು ಕ್ರಮಕ್ಕೆ ಎಚ್ಚರಿಕೆ ನೀಡಿರುವ ಬಗ್ಗೆ ಖಾಸಗಿ ಬಸ್ ಕಚೇರಿ ಸಿಬ್ಬಂದಿಗಳಿಗೆ ತಿಳಿಸಿ, ಎಚ್ಚರಿಕೆ ನೀಡಿ ಅಧಿಕಾರಿಗಳು ತೆರಳಿದ್ದಾರೆ

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...