ಭಟ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆ ಹಮ್ಮಿಕೊಂಡ ತಾಲೂಕಾ ಮಟ್ಟದ ಸಾಂಸ್ಕತಿಕ ಸಹ ಪಠ್ಯೇತರ ಚಟುವಟಿಕೆಗಳ ಸ್ಪರ್ಧೆಗಳಲ್ಲಿ ದಿ.ನ್ಯೂ ಇಂಗ್ಲೀಷ ಪಿಯು ಕಾಲೇಜಿನ ದ್ವಿತೀಯ ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಶಿಹಾಬುದ್ದೀನ ಇಂಗ್ಲೀಷ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಗೌರೀಶ ಹೆಗ್ಡೆ ಭಕ್ತಿಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಅಕ್ಷತಾ ನಾಯ್ಕ ಕನ್ನಡ ಚರ್ಚಾ ಸ್ಫರ್ಧೆಯಲ್ಲಿ ತೃತೀಯ ಸ್ಥಾನ ಹಾಗೂ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಅಕ್ಷತಾ ನಾಯ್ಕ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಶ್ರೇಯಾ ಹೆಬ್ಬಾರ ಭಾವಗೀತೆ ಸ್ಫರ್ಧೆಯಲ್ಲಿ ಪ್ರಥಮ ಸ್ಥಾನ, ಪ್ರಿತೇಶ ನಾಯ್ಕ ಚಿತ್ರಕಲೆ ಸ್ಫರ್ಧೆಯಲ್ಲಿ ಪ್ರಥಮ ಸ್ಥಾನ, ಕುಸುಮಾ ನಾಯ್ಕ, ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ದಿವ್ಯಾ ಪ್ರಭು ಏಕಪಾತ್ರಾಭಿನಯ ಸ್ಫರ್ಧೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ.
ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಸುಷ್ಮಾ ಹೆಬ್ಬಾರ ಭಕ್ತಿ ಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಗೌತಮ ಕಿಣಿ ಏಕಪಾತ್ರಾಭಿನಯ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಕಲಾ ವಿಭಾಗದ ವಿದ್ಯಾರ್ಥಿಗಳಾದ ಅಶ್ವಿನಿ ಜಾನಪದ ಗೀತೆಯಲ್ಲಿ ತೃತೀಂiÀi ಸ್ಥಾನ, ನಾಗರತ್ನ ನಾಯ್ಕ ಕನ್ನಡ ಚರ್ಚಾ ಸ್ಫರ್ಧೆಯಲ್ಲಿ ತೃತೀಂiÀi ಸ್ಥಾನ , ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಅಂಕಿತಾ ದೇವಾಡಿಗ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನ, ವಾಣಿಶ್ರೀ ಎಮ್. ಭಟ್ ಇಂಗ್ಲೀಷ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ.
ವಿದ್ಯಾರ್ಥಿಗಳ ಸಾಧನೆಗೆ ಭಟ್ಕಳ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಸುರೇಶ ನಾಯಕ್ ಟ್ರಸ್ಟಿ ಮೆನೇಜರ್ ರಾಜೇಶ ನಾಯಕ್ ಹಾಗೂ ಪ್ರಾಂಶುಪಾಲ ವೀರೇಂದ್ರ ಶಾನಭಾಗ ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.