ಉತ್ತರಕನ್ನಡ ಡಿಸಿ ಪ್ರಭುಲಿಂಗ ವರ್ಗ. ನೂತನ ಜಿಲ್ಲಾಧಿಕಾರಿಯಾಗಿ ಗಂಗೂಬಾಯಿ ಮಾನಕರ ನೇಮಕ.
ಬೆಂಗಳೂರು : ಉತ್ತರಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಗಂಗೂಬಾಯಿ ರಮೇಶ ಮಾನಕರ ಅವರನ್ನ ನೇಮಕಗೊಳಿಸಿ ಸರ್ಕಾರ ಆದೇಶಿಸಿದೆ
1998ನೇ ಸಾಲಿನ ಕೆ.ಎ.ಎಸ್. ಬ್ಯಾಚ್ ಅಧಿಕಾರಿಯಾಗಿದ್ದ ಗಂಗೂಬಾಯಿ ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಕಾರ್ಯದರ್ಶಿಯಾಗಿದ್ದರು. ಈ ಹಿಂದೆ ಕುಮಟಾ ಉಪವಿಭಾಗಾಧಿಕಾರಿಯೂ ಕೆಲಸ ಮಾಡಿದ್ದರು. 2018ರಲ್ಲಿ ಐ.ಎ.ಎಸ್.ಗೆ ಮುಂಬಡ್ತಿ ಪಡೆದಿದ್ದರು.
ನಿರ್ಗಮಿತ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ವರ್ಗಾವಣೆ ಮಾಡಲಾಗಿದ್ದು ಯಾವುದೇ ಹುದ್ದೆ, ಸ್ಥಳ ತೋರಿಸಿಲ್ಲ.