ಭಟ್ಕಳ ವಲಯ ಅರಣ್ಯಾಧಿಕಾರಿ ಶರತ್‌ ಶೆಟ್ಟಿಗೆ ಜೀವ ಬೆದರಿಕೆ

Source: so news | By MV Bhatkal | Published on 24th September 2023, 7:23 PM | Coastal News | Don't Miss |

ಭಟ್ಕಳ: ಭಟ್ಕಳ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಓ) ಶರತ್‌ ಶೆಟ್ಟಿಗೆ ಅನಾಮಿಕ ವ್ಯಕ್ತಿಯೋರ್ವರು ವಾಟ್ಸಪ್‌ನಲ್ಲಿ ಜೀವ ಬೆದರಿಕೆಯ ಸಂದೇಶಗಳನ್ನು ರವಾನಿಸಿರುವ ಬಗ್ಗೆ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ದೂರೊಂದು ದಾಖಲಾಗಿದೆ.
ಕಳೆದ ಸೆ.19ರ ರಾತ್ರಿ ಆರ್‌ಎಫ್‌ಓ ಶರತ್ ಶೆಟ್ಟಿ  +1(334)581-4044 ನಂಬರಿನಿಂದ ಆರ್‌ಎಫ್‌ಓ ಶರತ್ ಶೆಟ್ಟಿಯವರ ವಾಟ್ಸಪ್ ನಂಬರಿಗೆ ವೈಯಕ್ತಿಕ ಜೀವನ, ಸಾರ್ವಜನಿಕರೊಂದಿಗಿನ ಸಂಬಂಧ ಮತ್ತು ವೃತ್ತಿ ಜೀವನವನ್ನು ಹಾಳುಮಾಡುತ್ತೇವೆ. ಎಂದು ಬೆದರಿಕೆ ಸಂದೇಶಗಳನ್ನು ಕಳುಹಿಸಲಾಗಿದೆ. ತಾನು ಕಳೆದ 5 ವರ್ಷಗಳಿಂದ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ಹಾಗೂ ಭಟ್ಕಳದಲ್ಲಿ ಆರ್‌ಎಫ್‌ಓ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಈ ಅವಧಿಯಲ್ಲಿ ಹಲವಾರು ಅತಿಕ್ರಮಣ ಖುಲ್ಲಾ ಪಡಿಸಲಾಗಿದೆ. ಅಲ್ಲದೇ ಹಗಲು ರಾತ್ರಿ ಎನ್ನದೇ ಅರಣ್ಯದಲ್ಲಿ ನಡೆಯುತ್ತಿದ್ದ ಹಲವಾರು ಅಕ್ರಮಗಳನ್ನು ತಡೆದು ಅಪರಾಧಿಗಳನ್ನು ಶಿಕ್ಷೆಗೆ ಗುರಿಪಡಿಸಲಾಗಿದೆ. ಸದರಿ ಶಿಕ್ಷೆಗಳಿಗೆ ಒಳಪಟ್ಟವರ ಪೈಕಿ ಯಾರೋ ತನ್ನ ಆತ್ಮಸ್ಥೆರ್ಯ ಕುಗ್ಗಿಸಲು ಈ ರೀತಿ ಮಾಡಿರಬಹುದು. ಈ ಸಂದೇಶಗಳಿಂದ ತಾನು ಮಾನಸಿಕವಾಗಿ ನೊಂದಿರುವುದಾಗಿ ಶರತ್‌ ಶೆಟ್ಟಿ ತಾವು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಭಾರತ ದಂಡ ಸಂಹಿತೆ ಕಲಂ 507ನೇದರಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

 

Read These Next

ಬೀಫ್ ಎಕ್ಸ್‌ಪೋರ್ಟ್ ಕಂಪನಿ ಸೇರಿದಂತೆ ಪಾಕಿಸ್ತಾನಿ ಏಜೆನ್ಸಿಗಳಿಂದಲೂ ಬಿಜೆಪಿ ದೇಣಿಗೆ ತೆಗೆದುಕೊಂಡಿದೆ- ಭಟ್ಕಳದಲ್ಲಿ ಕಾಂಗ್ರೆಸ್ ಸುದ್ದಿಗೋಷ್ಠಿ

ಭಟ್ಕಳ:  ಗೋಹತ್ಯೆ ವಿರೋಧಿಸುವ ಬಿಜೆಪಿ ಬೀಫ್ ರಫ್ತು ಮಾಡುವ ಕಂಪನಿ ಸೇರಿದಂತೆ ಪಾಕಿಸ್ಥಾನಿ ಎಜೆನ್ಸಿಗಳಿಂದಲೂ ದೇಣಿಗೆ ...

ಪ್ರಜಾಧ್ವನಿ ಸಮಾವೇಶ: ಭಟ್ಕಳದಿಂದ ಕುಮಟಾ ದ ವರೆಗೆ ಬೈಕ್ ರ್ಯಾಲಿ ಮೂಲಕ ಶಕ್ತಿ ಪ್ರದರ್ಶನ

ಕುಮಟಾ: ಪಟ್ಟಣದ ಮಣಕಿ ಮೈದಾನದಲ್ಲಿ ಆಯೋಜನೆಗೊಂಡಿದ್ದ ಪ್ರಜಾಧ್ವನಿ- 2 ಸಮಾವೇಶಕ್ಕೂ ಪೂರ್ವ ಬೃಹತ್ ಬೈಕ್ ರ್ಯಾಲಿ ಮೂಲಕ ಕರಾವಳಿಯಲ್ಲಿ ...