ಭಟ್ಕಳದ ಉರಿಯುವ ಧಗೆಯೊಂದಿಗೆ ಕುಡಿಯುವ ನೀರಿಗೂ ಹಾಹಾಕಾರ;

Source: S O News service | By Staff Correspondent | Published on 17th April 2017, 6:24 PM | Coastal News | State News | Special Report | Public Voice | Don't Miss |

ಬತ್ತಿಹೋಗಿರುವ ಬಾವಿಗಳು

ಭಟ್ಕಳ: ಭಟ್ಕಳ ತಾಲೂಕಿನಾದ್ಯಂತ ಈಗ ಸೂರ್ಯನ ಪ್ರಕೋಪ ಹೆಚ್ಚಾಗಿದ್ದು ಉರಿಯುವ ಧಗೆಯೊಂದಿಗೆ ಕುಡಿಯುವ ನೀರಿಗೂ ಹಹಾಕಾರ ಉಂಟಾಗಿದ್ದು ಇದ್ದ ಬಾವಿಗಳೆಲ್ಲಾ ಬತ್ತಿಹೋಗಿ ಜನ ಆಕಾಶ ನೋಡುವಂತಾಗಿದೆ. 
ಬೋರವೆಲ್ ಗಳ ಕೊರೆತದಿಂದಾಗಿ ಜಲಮೂಲಕ್ಕೆ ಧಕ್ಕೆಯುಂಟಾಗಿದ್ದು ಮೇ ತಿಂಗಳಲ್ಲಿ ಉಂಟಾಗುವ ಕುಡಿಯುವ ನೀರಿನ ಬವಣೆ ಈಗ ಎಪ್ರಿಲ್ ಆರಂಭದಲ್ಲಿ ಕಾಣಿಸಿಕೊಂಡು ಈಗ ತಾರಕ್ಕೇರಿದೆ. 
ತಾಲೂಕಿನ ಗ್ರಾಮೀಣ ಭಾಗದಲ್ಲಂತೋ ಪರಿಸ್ಥಿತಿ ತೀರ ಹದಗೆಟ್ಟಿದ್ದು ಸರ್ಕಾರದಿಂದ ಟ್ಯಾಂಕರ್ ಮೂಲಕ ನೀರು ಸರಬರಾಜು ಯಾವಾಗ ಮಾಡುತ್ತಾರೆ ಎಂದು ಕಾದುಕುಳಿತಿದ್ದು ಇದರಿಂದಾಗಿ ಗ್ರಾಮೀಣ ಭಾಗದಲ್ಲಿ ತಾಲೂಕಾಡಳಿತದ ವಿರುದ್ಧ ಅಸಮಧಾನದ ಹೊಗೆ ಕಂಡುಬಂದಿದೆ. 

ತಾಲ್ಲೂಕಿನಲ್ಲಿ ಬಿಸಿಲ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಹೊಳೆ,ಕೆರೆ, ಬಾವಿಗಳಲ್ಲಿ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಕುಸಿಯ ತೊಡಗಿದೆ.
ಕಳೆದ ವರ್ಷಕ್ಕಿಂತ ತಾಲ್ಲೂಕಿನಲ್ಲಿ ಈ ಬಾರಿ ಬಿಸಿಲ ತಾಪಮಾನ ಏರಿಕೆ ಕಂಡಿದೆ. ತಾಲ್ಲೂಕಿನಲ್ಲಿ ಗರಿಷ್ಟ ೩೩-೩೫ ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇದೆ. ಬೆಳಗಿನ ಸಂದರ್ಭಲ್ಲಿ ಮನೆಯಿಂದ ಹೊರಬರುವುದೇ ಬೇಡ ಎನ್ನುವ ಸ್ಥಿತಿ ಉಂಟಾಗಿದೆ. ನೀರಿನ ಅಭಾವ ತೀವ್ರಗೊಂಡಿದ್ದರಿಂದ  ಕೆಲವು ಪ್ರದೇಶದಲ್ಲಿ ಜನರು ಒಂದು ಕೊಡ ನೀರಿಗೂ ಪರದಾಡುವ ಸ್ಥಿತಿ ಉಂಟಾಗಿದೆ. ತಾಲ್ಲೂಕಿನಲ್ಲಿ  ಕೆಲವು ಕಡೆ ಸರಕಾರಿ ಬಾವಿಗಳಿದ್ದು, ಅದರಲ್ಲಿ ನೀರಿನ ಪ್ರಮಾಣ ಇದ್ದರೂ ಸಮರ್ಪಕ ನಿರ್ವಹಣೆಯ ಕೊರತೆಯಿಂದ ನೀರು ಕಲುಶಿತವಾಗಿಯೋ ಅಥವಾ ಉಪ್ಪು ನೀರು ಮಿಶ್ರಿತವಾಗಿಯೋ ಕುಡಿಯಲು ಅಯೋಗ್ಯವಾಗಿದೆ. ಇನ್ನೂ ಕೆಲವು ಕಡೆ ನೀರು ಒಣಗಿ ತಿಂಗಳುಗಳೇ ಕಳೆದಿವೆ. ಗ್ರಾಮೀಣ ಹಾಗೂ ಪಟ್ಟಣದ ಸರಕಾರಿ ಬಾವಿಗಳಲ್ಲಿ ತುಂಬಿರುವ ಹೂಳನ್ನು ತೆಗೆಯಿಸಿದಲ್ಲಿ ಬೇಸಿಗೆಯಲ್ಲಿ ಸ್ವಲ್ಪ ಮಟ್ಟಿಗಾದರೂ ನೀರು ಇರುವುದರಿಂದ ಸಂಬಂಧಪಟ್ಟ ಇಲಾಖೆ ಈ ಕಾರ್ಯವನ್ನು ಮಾಡಲು ಮುಂದಾಗಬೇಕಿದೆ. ತಾಲ್ಲೂಕಿನಲ್ಲಿ  ಅಂತರಜಲ ಮಟ್ಟ ತೀವ್ರ ಕುಸಿದಿದ್ದರಿಂದ ಕುಡಿಯುವ ನೀರಿಗೆ ಭಾರೀ ಅಭಾವ ಉಂಟಾಗಿದೆ. ಕಳೆದ ವರ್ಷ ಇಷ್ಟೊತ್ತಿಗಾಗಲೇ ತಾಲ್ಲೂಕು ಆಡಳಿತ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಮುಂದಾಗಿತ್ತು. ಆದರೆ ಈ ಸಲ ಇನ್ನೂ ಟ್ಯಾಂಕರ್ ನೀರು ಪೂರೈಕೆ ಆರಂಭಿಸದೇ ಇರುವುದು ಜನರಿಗೆ ತೊಂದರೆಯಾಗಿದೆ. ಮಾವಳ್ಳಿ, ಬೈಲೂರು, ಮಾವಿನಕುರ್ವೆ, ಕಾಯ್ಕಿಣಿ, ಮಾವಳ್ಳಿ-೨, ಹೆಬಳೆ ಹನೀಪಾಬಾದ್, ಮುಟ್ಟಳ್ಳಿ, ಬೆಳಕೆ ಮುಂತಾದವ ನೀರಿನ ಅಭಾವ ತೀವ್ರ ಇರುವುದರಿಂದ ಈ ಭಾಗಕ್ಕೆ ಹೆಚ್ಚಿನ ನೀರು ಪೂರೈಕೆ ಮಾಡಬೇಕೆಂಬ ಆಗ್ರಹ ಕೇಳಿ ಬಂದಿದೆ. ಈ ಸಲ ಗ್ರಾಮೀಣ ಭಾಗದಲ್ಲೂ ನೀರಿನ ಅಭಾವ ಉಂಟಾಗಿದ್ದು, ಬಾವಿ, ಹೊಳೆ, ಕೆರೆಗಳು ಒಣಗಿರುವುದರಿಂದ ತೋಟಕ್ಕೆ ನೀರು ಹಾಯಿಸುವುದು ಹೇಗೆ ಎನ್ನುವ ಚಿಂತೆಯಲ್ಲಿ ರೈತರಿದ್ದಾರೆ. 
ಪೂರ್ಣಗೊಳ್ಳದ ಕಾಮಗಾರಿ........
ಕೆಲವು ಕಡೆ ನೀರಿನ ಅಭಾವ ಶಾಶ್ವತವಾಗಿ ನೀಗಿಸಲು ಸರಕಾರದಿಂದ ಕುಡಿಯುವ ನೀರಿನ ಯೋಜನೆ ಜ್ಯಾರಿಗೊಳಿಸಿದ್ದರೂ ಕಾಮಗಾರಿ ಮಾತ್ರ ಇನ್ನೂ ಪೂರ್ಣಗೊಂಡಿಲ್ಲ. 
ಹೆಚ್ಚಿನ ಕಡೆ ಒಂದಲ್ಲೊಂದು ಕಾರಣಕ್ಕೆ ಕಾಮಗಾರಿ ಕುಂಟುತ್ತಾ ಸಾಗಿದೆ. ಕೆಲವು ಕಡೆ ಬಾವಿ ತೆಗೆದು, ಟ್ಯಾಂಕ್ ನಿರ್ಮಿಸಿ, ಪೈಪ್ ಲೈನ್ ಅಳವಡಿಸಲಾಗಿದ್ದರೂ ಕೂಡ ನೀರಿನ ಕನೆಕ್ಸನ್ ಮಾತ್ರ ನೀಡಿಲ್ಲ. ಇನ್ನೂ ಕೆಲವು ಕಡೆ ಶೇ. ೮೦ ರಷ್ಟು ಕಾಮಗಾರಿ ಮುಗಿದಿದ್ದರೂ ಬಾವಿಯಲ್ಲಿ ನೀರಿನ ಸೆಲೆ ಕಡಿಮೆಯಾಗಿರುವುದು ಯೋಜನೆ ಪೂರ್ಣಗೊಳ್ಳುವಿಕೆಗೆ ಹಿನ್ನಡೆಯಾದರೆ,  ಮತ್ತೆ ಕೆಲವು ಕಡೆ ಬಾವಿ ತೆಗೆಯಲು ಜಾಗದ ಸಮಸ್ಯೆ ಇದೆ ಎನ್ನಲಾಗಿದೆ. ಸರಕಾರದಿಂದ ಮಂಜೂರಾದ  ಈ ಕಾಮಗಾರಿಗಳು ಪೂರ್ಣ ಪ್ರಮಾಣದಲ್ಲಿ ಮುಗಿದಿದ್ದರೆ ನೀರಿನ ಅಭಾವ ಸ್ವಲ್ಪ ಮಟ್ಟಿಗಾದರೂ ಕಡಿಮೆಯಾಗುತ್ತಿತ್ತು. ನೀರಿನ ಅಭಾವ ಇರುವ ಕಡೆ ಟ್ಯಾಂಕರ್ ನೀರು ಯಾವಾಗ ಬರುತ್ತದೆ ಎಂದು ಕಾಯುವಂತಾಗಿದೆ. ಈಗಾಗಲೇ ಹೆಬಳೆಯ ಹನೀಪಾದ್‌ನಲ್ಲಿ ಕುಡಿಯುವ ನೀರಿನ ಅಭಾವಕ್ಕೆ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ಕೂಡ ನಡೆಸಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ತೆರಳಿ ಟ್ಯಾಂಕರ್ ಮೂಲಕ ನೀರು ಪೂರೈಸುವ ಭರವಸೆ ನೀಡಿದ್ದಾರೆ.  ಇದೇ ರೀತಿ ಬಿಸಿಲ ತಾಪಮಾನ ಜಾಸ್ತಿಯಾದರೆ ತಾಲ್ಲೂಕಿನಲ್ಲಿ ಕುಡಿಯುವ  ನೀರಿನ ಸಮಸ್ಯೆ ಮತ್ತಷ್ಟು ಉಲ್ಬಣವಾಗುವ ಸಾಧ್ಯತೆ ಇದೆ. 

ತಹಸಿಲ್ದಾರ್ ವಿ.ಎನ್. ಬಾಡಕ್ಕರ್ ಸೇರಿದಂತೆ ತಾಲೂಕಿನ ಅಧಿಕಾರಿಗಳು ಈಗಾಗಲೆ ಕುಡಿಯುವ ನೀರಿನ ಆಭಾವವಿರುವ ಗ್ರಾಮಗಳನ್ನು ಗುರುತಿಸಿದ್ದು ಟ್ಯಾಂಕರ್ ಮೂಲಕ ಅಲ್ಲಿ ನೀರು ಸರಬರಾಜು ಮಾಡುವ ವವಸ್ಯೇ ಮಾಡುವುದಾಗಿ ತಿಳಿಸಿದ್ದಾರೆ.

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

“ಬೋಧನಾ ಪ್ರಬುದ್ಧತೆ, ಪ್ರತಿಭಾ ಪೋಷಣೆ, ಸಮಾಜಿಕ ಬದಲಾವಣೆ”-ಐಟಾ ದಿಂದ ರಾಷ್ಟ್ರೀಯ ಶೈಕ್ಷಣಿಕ ಅಭಿಯಾನ

ಬೋಧನಾ ಪ್ರಬುದ್ಧತೆ, ಪ್ರತಿಭಾ ಪೋಷಣೆ ಮತ್ತು ಸಮಾಜಿಕ ಬದಲಾವಣೆ ಈ ಮೂರು ಅಂಶಗಳು ಪರಸ್ಪರ ಸಂಬಂಧ ಹೊಂದಿವೆ. ಬೋಧನಾ ಪ್ರಬುದ್ಧತೆಯು ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...