ಭಟ್ಕಳ ತಾಲೂಕು ಸರ್ಕಾರಿ ನೌಕರರ ಕ್ರಿಕೆಟ್ ಪಂದ್ಯಾವಳಿ

Source: sonews | By Staff Correspondent | Published on 14th January 2018, 6:46 PM | Coastal News | Don't Miss |

ಭಟ್ಕಳ:  ತಾಲೂಕಿನ ಸರ್ಕಾರಿ ನೌಕರರ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟ ಜಾಲಿ ರಸ್ತೆಯ ಕೋಲಾ ಮೈದಾನದಲ್ಲಿ ಭಾನುವಾರ ನಡೆಯಿತು.

ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದ ಬಿಜೆಪಿ ಯುವ ಮುಖಂಡ ಸುನೀಲ್ ನಾಯ್ಕ, ಸರ್ಕಾರಿ ನೌಕರರು ತಮ್ಮ ಕೆಲಸಗಳಲ್ಲಿ ಒತ್ತಡವನ್ನು ಎದುರಿಸುತ್ತಿದ್ದು ಇಂತಹ ಕ್ರೀಡೆಗಳನ್ನು ಆಯೋಜಿಸುವುದರಿಂದ ಒತ್ತಡದಿಂದ ಹೊರಬರಲು ಸಾಧ್ಯವಾಗುತ್ತದೆ,  ಯುವ ಪೀಳಿಗೆಗೆ ಹಾಗೆ ಮುಂದಿನ‌ ಭವಿಷ್ಯದ ದೃಷ್ಟಿಯಿಂದ ನೌಕರರ ಮಾರ್ಗದರ್ಶನ ಅಮೂಲ್ಯವಾದುದು, ಮುಂದಿನ ದಿನಗಳಲ್ಲಿ ಸಮಾಜದ ಒಳಿತಿಗೆ ಬಹುಮುಖ್ಯ ಪಾತ್ರ ವಹಿಸುವ ನೌಕರರು ಕ್ರೀಡೆಗಳ ಜೊತೆಗೆ, ಸಾಂಸ್ಕೃತಿಕವಾಗಿ, ಧಾರ್ಮಿಕವಾಗಿ ಇನ್ನಿತರ ಸಮಾಜ ಮುಖಿ ಕಾರ್ಯಕ್ರಮವನ್ನು ನಡೆಸಿಕೊಂಡು ಬರಬೇಕೆಂದು ಹೇಳಿದರು.

ಉದ್ಘಾನಾ ಸಮಾರಂಭದ ಅಧ್ಯಕ್ಷತೆಯನ್ನು ತಹಸಿಲ್ದಾರ್ ವಿ.ಎನ್.ಬಾಡ್ಕರ್ ವಹಿಸಿದ್ದರು.

ಈ ಸಂದರ್ಭದಲ್ಲಿ ವೆಂಕಟೇಶ ನಾಯ್ಕ, ಮೋಹನ ನಾಯ್ಕ, ವಾಸು ಮೋಗೆರ, ಶೇಕರ್ ಪೂಜಾರಿ, ವಿನಾಯಕ ಥಾಮ್ಸನ್, ರಾಮ ಪೂಜಾರಿ ಮುಂತಾದವರು ಉಪಸ್ಥಿತಿದ್ದರು.  

ಸಿ.ಡಿ. ಪಡುಕೋಣೆ ಕಾರ್ಯಕ್ರಮ ನಿರೂಪಿಸಿದರು.ಗಣೇಶ ಹೆಗಡೆ ಧನ್ಯವಾದ ಅರ್ಪಿಸಿದರು.

Read These Next

ಕಾರವಾರ: ಹಣ, ಉಡುಗೊರೆ ಹಂಚಿಕೆ ಬಗ್ಗೆ ಹೆಚ್ಚಿನ ನಿಗಾ ವಹಿಸಿ : ವಿಶೇಷ ವೆಚ್ಚ ವೀಕ್ಷಕ ಬಿ.ಮುರಳಿ ಕುಮಾರ್

ಮತದಾರರಿಗೆ ಹಣ, ಉಡುಗೊರೆ ಮತ್ತಿತರ ಆಮಿಷಗಳನ್ನು ಒಡ್ಡುವುದರ ಕುರಿತಂತೆ ತೀವ್ರ ನಿಗಾ ವಹಿಸಬೇಕು, ಈ ಕುರಿತಂತೆ ದೂರುಗಳು ಬಂದ ...

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...