ಭಟ್ಕಳ ತಾಲೂಕಾಸ್ಪತ್ರೆ ವೈದ್ಯರನ್ನು ತರಾಟೆಗೆ ತೆಗೆದುಕೊಂಡ ಡಿ‌ಎಚ್‌ಒ ;ಮಾಧ್ಯಮ ವರದಿ ಫಲಶ್ರುತಿ

Source: S O News service | By Staff Correspondent | Published on 18th April 2017, 7:26 PM | Coastal News | State News | Special Report | Public Voice | Don't Miss |

ಭಟ್ಕಳ:  ಹೆರಿಗೆ ಮಾಡಿಸಲು ಇಲ್ಲಿ ವೈದ್ಯರೇ ಇಲ್ಲ; ಇದು ಭಟ್ಕಳ ಸರ್ಕಾರಿ ಆಸ್ಪತ್ರೆಯ ಕರ್ಮಕಾಂಡ ಎಂಬ ಶೀರ್ಷಿಕೆಯಡಿ ಸಾಹಿಲ್‌ಆನ್‌ಲೈನ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಪ್ರಕಟಗೊಂಡ ವರದಿಗೆ ಕೂಡಲೇ ಸ್ಪಂಧಿಸಿದ ಜಿಲ್ಲಾ ಅರೋಗ್ಯಾಧಿಕಾರಿ  ಡಾ.ಅಶೋಕ ಕುಮಾರ್ ಸೋಮವಾರ ಭಟ್ಕಳ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ತಾಲೂಕಾಸ್ಪತ್ರೆ ವೈದ್ಯಾಧಿಕಾರಿ ಡಾ.ಮಂಜುನಾಥ್ ಶೆಟ್ಟಿ ಸೇರಿದಂತೆ ಹಿರಿಯ,  ಕಿರಿಯ ವೈದ್ಯರು, ದಾದಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡು ಸರಿಯಾಗಿ ಕೆಲಸ ಮಾಡಿ ಎಂದು ಆದೇಶಿಸಿದ್ದಾರೆ. 
ಸಾರ್ವಜನಿಕರ ಬೇಡಿಕೆಗನುಗುನವಾಗಿ ಕೆಲಸ ಮಾಡಿ, ಜನರ ಸಮಸ್ಯೆಗಳಿಗೆ ಸರಿಯಾದ ರೀತಿಯಲ್ಲಿ ಸ್ಪಂಧಿಸಿ, ರಜೆಗೆ ಹೋಗಬೇಕಾದರೆ ಒಂದು ವಾರ ಮುಂಚೆ ಮೇಲಾಧಿಕಾರಿಗಳ ಅನುಮತಿ ಪಡೆಯಿರಿ ಎಂದು ಆಸ್ಪತ್ರೆಯ ಸಿಬಂಧಿಗಳಿಗೆ ಬಹಳ ಖಡಕ್ ಆಗಿ ಆದೇಶಿಸಿದರು. 
ಇದೇ ಸಂಧರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳ ಮುಂದೆ ಆಸ್ಪತ್ರೆಯಲ್ಲಿನ ಸಮಸ್ಯೆಯ ಬಗ್ಗೆ ಸಾರ್ವಜನಿಕರು ಅಹವಾಲುಗಳನ್ನು ಮುಂದಿಟ್ಟರು. ಆಸ್ಪತ್ರೆಯಲ್ಲಿ ತೀರಾ ಅಮಾನವೀಯ ರೀತಿಯಲ್ಲಿ ನರ್ಸಗಳು ವರ್ತಿಸುತ್ತಿದ್ದಾರೆ. ಇನ್ನು ವೈದ್ಯರು ಆಸ್ಪತ್ರೆಗೆ ಅಚಾನಕ ರೋಗಿಗಳು ಬಂದರೆ ತಪಾಸಣೆ ಮಾಡಲು ಯಾವೊಬ್ಬ ವೈದ್ಯರು ಇರುವುದಿಲ್ಲ. ಆಸ್ಪತ್ರೆಯಲ್ಲಿ ವೈದ್ಯರಿಗೂ ಹಾಗೂ ನರ್ಸಗಳ ಮಧ್ಯೆ sಸಂವಹನದ ಅಂತರ ತೀರಾ ಇದ್ದು, ಇದು ರೋಗಿಗಳ ಮೇಲೆ ಪರಿಣಾಮ ಬೀಳುತ್ತಿದೆ. ಈ ಬಗ್ಗೆ ನಿಮ್ಮ ಗಮನಕ್ಕೆ ತಂದರೆ ನೀವು ಸಹ ಯಾವುದೇ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳದೇ ಪೊಳ್ಳು ಭರವಸೆಯನ್ನು ನೀಡುತ್ತಿರಿ. ಈ ಹಿಂದೆ ಆಸ್ಪತ್ರೆಗೆ ಬೇಟಿ ನೀಡಿದಾಗಲು ಸಹ ಆಸ್ಪತ್ರೆಯ ಸಮಸ್ಯೆಯ ಬಗ್ಗೆ ಸವಿವರವಾಗಿ ತಿಳಿಸಿದಾಗಲು ಎಲ್ಲಾ ಸಮಸ್ಯೆಯನ್ನ ಶೀಘ್ರದಲ್ಲಿ ಪರಿಹರಿಸುವುದಾಗಿ ಹೇಳಿ ಹೋಗಿದ್ದೀರಿ. ಈಗಲು ಸಹ ಇಷ್ಟೆಲ್ಲಾ ಸಮಸ್ಯೆ ಇದ್ದರು ಸರಿಯಾದ ಕ್ರಮ ತೆಗೆದುಕೊಳ್ಳುವ ಬದಲು ಸಮಯಾವಕಾಶ ಕೇಳುತ್ತಿರುವಿರಿ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದು, ಸಮಸ್ಯೆ ಪರಿಹಾರವಾಗದಿದ್ದಲ್ಲಿ  ಪ್ರಧಾನಿ ನರೇಂದ್ರ ಮೋದಿಯವರಿಗೆ ಟ್ವೀಟ್ ಮಾಡಲಾಗುವುದು ಎಂದು ಸಾರ್ವಜನಿಕರು ತಿಳಿಸಿದರು. ಉಗ್ರ ಪ್ರತಿಭಟನೆ ನಡೆಸುವುದಾಗಿಯು ಎಚ್ಚರಿಕೆಯನ್ನು ನೀಡಲಾಯಿತು. ಹಾಗೂ ಮನಸ್ಸಿಗೆ ಬಂದ ಸಮಯಕ್ಕೆ ಆಸ್ಪತ್ರೆಗೆ ಬರುತ್ತಾರೆಂದು  ಆಸ್ಪತ್ರೆಯ ದಂತ ವೈದ್ಯೆಯ ಬಗ್ಗೆ ಸಾರ್ವಜನಿಕರಿಂದ ಆರೋಪಗಳು ಕೇಳಿ ಬಂತು. ಸಾರ್ವಜನಿಕರ ದೂರಿಗೆ ಒಂದು ಸಲಕ್ಕೆ ದಂತ ವೈದ್ಯೆ ಸಮರ್ಥನೆ ಮಾಡಿಕೊಂಡರು ಜಿಲ್ಲಾ ಆರೋಗ್ಯಾಧಿಕಾರಿ ಎಲ್ಲಾ ದೂರುಗಳನ್ನು ಪಡೆದುಕೊಂಡಿದ್ದು ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. 

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಭಟ್ಕಳದ ಗರ್ಭಿನಿ ಮಹಿಳೆಯರಿಗೆ  ವೈದ್ಯರಿಲ್ಲ ಎಂಬ ಕಾರನ ನೀಡಿ ಚಿಕಿತ್ಸೆಗೆ ಹೆರಿಗೆ ಮಾಡದೆ ಬೇರೆ ಆಸ್ಪತ್ರೆಗೆ ಹೋಗುವಂತೆ ಮಾಡಿದ್ದು ಇದು ವೈದ್ಯರ  ನಿರ್ಲಕ್ಷ್ಯತನವಾಗಿದೆ. ಮುಂದೇ ಹೀಗಾಗದಂತೆ ಜಾಗೃತೆ ವಹಿಸಲು  ಸೂಚಿಸಿದ್ದೇನೆ. ಸರ್ಕಾರದ ನಿಯಮಾವಳಿಗಳಂತೆ ನಿರ್ಲಕ್ಷ್ಯ ತೋರಿದ  ವೈದ್ಯರ ಮೇಲೆ ಕ್ರಮ ಜರಗಿಸಲಾಗುವುದು ಎಂದು ತಿಳಿಸಿದ ಅವರು, ಉತ್ತರಕನ್ನಡ ಜಿಲ್ಲೆಯಲ್ಲಿ ಭಟ್ಕಳದ ಸರ್ಕಾರಿ  ಆಸ್ಪತ್ರೆಯ ಎಲ್ಲ ಹುದ್ದೆಗಳು ಭರ್ತಿಯಾಗಿವೆ. ಒಂದು ಹುದ್ದೆ ಮಾತ್ರ ಖಾಲಿ  ಉಳಿದಿದ್ದು  ಅದನ್ನು  ಭರ್ತಿ ಮಾಡಲು  ಕ್ರಮ ಜರಗಿಸುತ್ತೇನೆ. ಇಷ್ಟಾದರೂ ಇಲ್ಲಿನ ವೈದ್ಯರ  ನಿರ್ಲಕ್ಷ್ಯತನದಿಂದಾಗಿ ಹಲವಾರು  ಸಮಸ್ಯೆಗಳು  ಆಗಾಗ ಉದ್ಭವಿಸುತ್ತಲೇ ಇರುತ್ತದೆ. ಇಲ್ಲಿ ಸಾಕಷ್ಟು ನರ್ಸ್‌ಗಳು ಇದ್ದಾರೆ ಯಾವುದಕ್ಕೂ ಕೊರತೆಯಿಲ್ಲ ಎಂದರು. ಇಲ್ಲಿನ ಆಸ್ಪತ್ರೆಯಲ್ಲಿ ಬಿಪಿ‌ಎಲ್ ಕಾರ್ಡುದಾರರಿಗೂ ರಕ್ತ ತಪಾಸನೆ ಮತ್ತಿತರ ವೈದ್ಯಕೀಯ ತಪಾಸನೆಗೆಂದು ವೈದ್ಯರು ಬಡಜನರಿಂದ ದುಡ್ಡು ಕೀಳುತ್ತಾರೆ ಇದು ನಿಲ್ಲಬೇಕು ಎಂಬ ವರದಿಗಾರರ ಪ್ರಶ್ನೆಗೆ ಮಾಧ್ಯಮದವರ  ಮುಂದೇ ವೈದ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು  ಏನ್ರಿ  ಇದೆಲ್ಲ? ಬಿಪಿ‌ಎಲ್ ಕಾರ್ಡುದಾರರಿಗೆ ದುಡ್ಡು ತೆಗೆದುಕೊಳ್ಳಲು  ಸರ್ಕಾರ ನಿಮಗೆ ಆದೇಶ ನೀಡಿದೆಯೇನ್ರಿ ಎಂದು ರೇಗಿದರು.. ಇದಕ್ಕೆ ವೈದ್ಯಾಧಿಕಾರಿಯಿಂದ ಯಾವುದೇ ಉತ್ತರ ಬರದೆ ಮೌನಕ್ಕೆ ಜಾರಿಕೊಂಡರು.. 

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

“ಬೋಧನಾ ಪ್ರಬುದ್ಧತೆ, ಪ್ರತಿಭಾ ಪೋಷಣೆ, ಸಮಾಜಿಕ ಬದಲಾವಣೆ”-ಐಟಾ ದಿಂದ ರಾಷ್ಟ್ರೀಯ ಶೈಕ್ಷಣಿಕ ಅಭಿಯಾನ

ಬೋಧನಾ ಪ್ರಬುದ್ಧತೆ, ಪ್ರತಿಭಾ ಪೋಷಣೆ ಮತ್ತು ಸಮಾಜಿಕ ಬದಲಾವಣೆ ಈ ಮೂರು ಅಂಶಗಳು ಪರಸ್ಪರ ಸಂಬಂಧ ಹೊಂದಿವೆ. ಬೋಧನಾ ಪ್ರಬುದ್ಧತೆಯು ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...