ಭಟ್ಕಳ: ಇತ್ತಿಚೆಗೆ ಭಟ್ಕಳದ ಖಾಸಗಿ ಶಾಲೆಯೊಂದರ ಪ್ರಾಂಶುಪಾಲ, ಶಿಕ್ಷಕ ಹಾಗೂ ಕಾರು ಚಾಲಕ ಮೂವರು ಸೇರಿ ಎಸ್.ಎಸ್.ಎಲ್.ಸಿ ಯ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣ ಹಸಿ ಇರುವಾಗಲೇ ರವಿವಾರ ಮತ್ತೊಂದು ಅಪ್ರಾಪ್ತ ಬಾಲಕೀಯ ಮೇಲೆ ಅತ್ಯಾಚಾರ ಲೈಂಗೀಕ ದೌರ್ಜನ್ಯ ಪ್ರಕರಣ ದಾಖಲಾಗಿದ್ದು ಸಾರ್ವಜನಿಕರು ತಮ್ಮ ಅಪ್ರಾಪ್ತ ಮಕ್ಕಳನ್ನು ಮನೆಯಿಂದ ಹೊರಗಡೆ ಕಳುಹಿಸಲು ಹೆದರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ದೌರ್ಜನ್ಯ ವೆಸಗಿದ ಆರೋದಡಿ ಓರ್ವನನ್ನು ಬಂಧಿಸಿದ ನಗರಠಾಣೆಯ ಪೋಲಿಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು ಗುಳ್ಮಿಯ ಮೊಹಮ್ಮದ್ ಅಲ್ತಾಫ್ ಅರ್ಮಾರ್ ಎಂದು ಗುರುತಿಸಲಾಗಿದೆ.
ಈತನು ಚೌಥನಿಯ ಮುಖ್ಯ ರಸ್ತೆಯ ಅಪ್ರಾಪ್ತ ಬಾಲಕಿಯೋರ್ವಳನ್ನು ಪರಿಚಯ ಮಾಡಿಕೊಂಡು ಆಕೆಯನ್ನು ಪುಸಲಾಯಿಸಿ ಎಕಾಂತ ಸ್ಥಳಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ, ಕಾರಿನಲ್ಲಿ ಮುರ್ಡೇಶ್ವರಕ್ಕೆ ಕರೆದೊಯ್ದು ಅಲ್ಲಿನ ವಸತಿ ಗೃಹವೊಂದರಲ್ಲಿ ಕೂಡಾ ಲೈಂಗಿಕ ಅಪರಾಧವನ್ನು ಎಸಗಿ ದೈಹಿಕ ಸಂಪರ್ಕ ಮಾಡಿದ್ದಾನೆ ಎಂದು ಬಾಲಕಿಯ ತಾಯಿ ನಗರ ಠಾಣೆಯಲ್ಲಿ ದೂರು ನೀಡಿದ್ದಳು. ದೂರಿನನ್ವಯ ಪ್ರಕರಣವನ್ನು ದಾಖಲಿಸಿಕೊಂಡ ನಗರ ಠಾಣೆಯ ಪಿಎಸೈ ಹೆಚ್. ಬಿ. ಕುಡಕುಂಟಿ ಆರೋಪಿಯನ್ನು ಬಂಧಿಸಿ ಕಾರವಾರದ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.