ಅಭಿಯಾನದ ಅಂಗವಾಗಿ ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯಿಂದ ಸಿಹಿ ವಿತರಣೆ

Source: sonews | By Staff Correspondent | Published on 20th November 2018, 4:06 PM | Coastal News | Don't Miss |

ಭಟ್ಕಳ: ಮಾನವ ಕುಲದ ಶ್ರೇಷ್ಠ ಮಾರ್ಗದರ್ಶಕ ಪ್ರವಾದಿ ಮುಹಮ್ಮದ್(ಸ) ರ ಜೀವನ ಮತ್ತು ಸಂದೇಶವನ್ನು ಅರಿಯಲು ಮತ್ತು ಹಿಂದೂ ಮುಸ್ಲಿಮರಲ್ಲಿ ಪರಸ್ಪರ ಸೌಹಾರ್ದತೆಯನ್ನುಂಟು ಮಾಡಲು ಆಯೋಜಿಸಿರುವ ರಾಜ್ಯವ್ಯಾಪಿ ಸೀರತ್ ಅಭಿಯಾನದ ಅಂಗವಾಗಿ ‘ಮೀಲಾದುನ್ನಬಿ’ ದಿನವಾಗಿರುವ ಮಂಗಳವಾರದಂದು ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯ ವತಿಯಿಂದ ಪರಿಚಯ ಪುಸ್ತಿಕೆ ಮತ್ತು ಸಿಹಿಯನ್ನು ವಿತರಿಸಲಾಯಿತು. 

ಇಲ್ಲಿನ ಶಮ್ಸುದ್ದೀನ್ ವೃತ್ತದಲ್ಲಿ ‘ಲೋಕನಾಯಕ ಪ್ರವಾದಿ ಮುಹಮ್ಮದ್(ಸ)  ’ಎಂಬ ಪುಸ್ತಿಕೆ ವಿತರಣಾ ಕಾರ್ಯಕ್ರಮವು ಗಿತ್ರಿಫ್ ರಿದಾ ಮಾನ್ವಿಯ ಕುರ್‍ಆನ್ ಪಠಣದೊಂದಿಗೆ  ಉದ್ಘಾಟನೆಗೊಂಡಿತು. 

ಈ ಸಂದರ್ಭದಲ್ಲಿ ಮಾತನಾಡಿದ ಅಭಿಯಾನದ ಸಂಚಾಲಕ ಮೌಲಾನ ಎಸ್.ಎಂ. ಸೈಯ್ಯದ್ ಝುಬೇರ್ ನಾವು ಪ್ರತಿಯೊಬ್ಬರು ಪ್ರೀತಿ ಪ್ರೇಮದಿಂದ ಬದುಕುವಂತಾಗಬೇಕು ಎಂಬ ಸಂದೇಶವನ್ನು ಪ್ರವಾದಿ ಮುಹಮ್ಮದ್(ಸ) ಸಾರಿದ್ದರು. ಅವರು ಮಾನವ ಕುಲಕ್ಕೆ ಕರುಣೆಯಾಗಿದ್ದರು. ಗಾಳಿ,ಬೆಳಕು ಹೇಗೆ ಎಲ್ಲರಿಗಾಗಿದೆಯೂ ಪ್ರವಾದಿ ಸಂದೇಶವು ಕೂಡು ಎಲ್ಲ ಸಮುದಾಯದವರಿಗಾಗಿದೆ ಎಂದ ಅವರು ಪ್ರೀತಿಯ, ಮಾನವೀಯ, ಸೌಹಾರ್ದದ ಸಂದೇಶಗಳನ್ನು ನಾವೆಲ್ಲರು ಅರಿತುಕೊಳ್ಳಬೇಕು ಎಂದು ಕರೆ ನೀಡಿದರು. 

ಪತ್ರಕರ್ತ ಎಂ.ಆರ್.ಮಾನ್ವಿ  ಮಾತನಾಡಿ, ಒಬ್ಬರು ಇನ್ನೊಬ್ಬರನ್ನು ತಿಳಿಯುವ ಮತ್ತು ತಿಳಿಸುವ ಪ್ರಕ್ರಿಯೆ ನಿರಂತರವಾಗಿ ನಡೆದಾಗ ಮಾತ್ರ ಸಮಾಜದಲ್ಲಿ ಶಾಂತಿ ಸೌಹಾರ್ದತೆಯುಂಟಾಗುತ್ತದೆ. ಜಮಾಅತೆ ಇಸ್ಲಾಮಿ ಹಿಂದ್ ಸಂಘಟನೆ ಆಯೋಜಿಸಿರುವ ಈ ಅಭಿಯಾನದ ಮೂಲಕ ಜಗತ್ಪ್ರಸಿದ್ಧ ದಾರ್ಶನಿಕ ಪ್ರವಾದಿ ಮುಹಮ್ಮದ್ ರನ್ನು ಸುಲಭವಾಗಿ ಅರಿಯುವಂತಾಗುತ್ತದೆ. ನಾವು ಒಬ್ಬರು ಇನ್ನೊಬ್ಬರನ್ನು ಸಹಿಸಿಕೊಳ್ಳುವಂತಹ ಗುಣವನ್ನು ಬೆಳೆಸಿಕೊಳ್ಳಬೇಕು, ಧರ್ಮ ನಮಗೆ ಇದನ್ನೆ ಕಲಿಸಿಕೊಡುತ್ತದೆ ಎಂದರು. 

ಈ ಸಂದರ್ಭದಲ್ಲಿ ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯ ಅಧ್ಯಕ್ಷ ಮುಜಾಹಿದ್ ಮುಸ್ತಫಾ, ಉತ್ತರಕನ್ನಡ ಜಿಲ್ಲಾ ಸಂಚಾಲಕ ತಲ್ಹಾ ಸಿದ್ದಿಬಾಪ, ಮೌಲಾನ ಯಾಸಿರ್ ನದ್ವಿ ಬರ್ಮಾವರ್, ಖಮರುದ್ದೀನ್ ಮಷಾಯಿಕ್, ಶೌಕತ್ ಖತೀಬ್, ಅಬ್ದುಲ್ ಜಬ್ಬಾರ್ ಅಸದಿ, ಸೈಫುಲ್ಲಾ ಅಕ್ರಮಿ, ಸನಾವುಲ್ಲಾ ಅಸದಿ, ಸಲಾಹುದ್ದೀನ್ ಎಸ್.ಕೆ. ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದು. ಜಾಮಿಯಾ ಇಸ್ಲಾಮಿಯಾ ಪ್ರಾಧ್ಯಾಪಕ ಮೌಲಾನ ಇಕ್ಬಾಲ್ ನದ್ವಿ ನಾಯ್ತೆ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.  

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...