ಪಡುಶಿರಾಲಿಯಲ್ಲಿ  ಮದ್ಯದಂಗಡಿ ವಿರೋಧಿಸಿ ಮಹಿಳೆಯರಿಂದ ಪ್ರತಿಭಟನೆ

Source: S O News service | By Staff Correspondent | Published on 15th February 2017, 12:27 AM | Coastal News | State News | Incidents | Don't Miss |

ಭಟ್ಕಳ : ತಾಲ್ಲೂಕಿನ ಬೇಂಗ್ರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಶಿರಾಲಿಯಲ್ಲಿ ಎಂಎಸ್‌ಐ‌ಎಲ್ ಕಂಪೆನಿಯಿಂದ ಮದ್ಯದ ಅಂಗಡಿ  ತೆರೆಯುವುದಕ್ಕೆ ಅಲ್ಲಿನ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದು, ಗ್ರಾಮದಲ್ಲಿ ಯಾವುದೇ ಕಾರಣಕ್ಕೂ ಮದ್ಯದ ಅಂಗಡಿ ತೆರೆಯಬಾರದು ಎಂದು ಆಗ್ರಹಿಸಿ ರವಿವಾರ ಸಂಜೆ ಪ್ರತಿಭಟನೆ ನಡೆಸಿ ಗ್ರಾ.ಪಂ. ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು.

ಮನವಿಯಲ್ಲಿ ಬೇಂಗ್ರೆ ಗ್ರಾಮ ಪಂಚಾಯತ್ ವ್ಯಾಪ್ತಿಯ  ಪಡುಶಿರಾಲಿಯಲ್ಲಿ ಈ ಹಿಂದೆ ಎಮ್.ಎಸ್.ಐ.ಎಲ್. ಕಂಪನಿಯಿಂದ ಮಧ್ಯದಂಗಡಿ ತೆರೆಯುವ ಹುನ್ನಾರ ನಡೆದಿದ್ದರಿಂದ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿ ಅದನ್ನು ಸ್ಥಗಿತಗೊಳಿಸಿದ್ದರು. ಆದರೆ ಈಗ ಮತ್ತೆ ಮದ್ಯದ ಅಂಗಡಿ ಸ್ಥಾಪಿಸುವ ಮಾತುಗಳು ಕೇಳಿ ಬರುತ್ತಿದೆ. ಪಡುಶಿರಾಲಿಯಲ್ಲಿ  ಮದ್ಯದಂಗಡಿ ಸ್ಥಾಪಿಸಿದಲ್ಲಿ ಆಸು-ಪಾಸಿನ ಗ್ರಾಮಸ್ಥರಿಗೆ ತೀರಾ ತೊಂದರೆಯಾಗುತ್ತದೆ. ಅದರಲ್ಲೂ ಮಹಿಳೆಯರು, ಹೆಣ್ಣು ಮಕ್ಕಳು ಹತ್ತಿರದ ಫ್ಯಾಕ್ಟರಿಯಲ್ಲಿ ದುಡಿಯುತ್ತಿದ್ದು, ಈ ಮಾರ್ಗವಾಗಿ ಸಂಚರಿಸುತ್ತಾರೆ. 

ಇದರಿಂದ ಮಹಿಳೆಯರು ಹೆದರುವ ಸಾಧ್ಯತೆ ಇದೆ. ಮದ್ಯದಂಗಡಿ ಆರಂಭಿಸಿದರೆ ಯುವಕರೂ ಕೂಡ ಮಧ್ಯವ್ಯಸನ ಮಾಡಿ ದಾರಿ ತಪ್ಪುವ ಸಾಧ್ಯತೆ ಇದೆ. ಈ ಮಜಿರೆಯಲ್ಲಿ ಹೆಚ್ಚು ಬಡವರು, ಕೂಲಿಕಾರರು ವಾಸಿಸುತ್ತಿದ್ದಾರೆ. ಮದ್ಯದ ಅಂಗಡಿ ತೆರೆದಲ್ಲಿ ಎಲ್ಲರಿಗೂ ತೊಂದರೆಯಾಗಲಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಇಲ್ಲಿ ಮದ್ಯದ ಅಂಗಡಿಗೆ ಪರವಾನಿಗೆ ನೀಡಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಇದೇ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷರಿಗೆ ಗ್ರಾ.ಪಂ.ನಿಂದ ಎಮ್.ಎಸ್.ಐ.ಎಲ್. ಮಧ್ಯದಂಗಡಿ ತೆರೆಯಲು ಅವಕಾಶ ನೀಡಬಾರದು ಮತ್ತು ಯಾವುದೇ ಪರವಾನಿಗೆ, ಶಿಫಾರಸ್ಸು  ಮಾಡಬಾರದು ಎಂದು ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಸ್ವಸಹಾಯ ಸಂಘಗಳ ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.

Read These Next

ಜೂನ್ 29ರಿಂದ ಜುಲೈ 9 ರವರೆಗೆ  ಅಳ್ವೆಕೋಡಿ  ದುರ್ಗಾಪರಮೇಶ್ವರಿ ದೇವರ ಪುನರ್ ಪ್ರತಿಷ್ಟಾ ಸುವರ್ಣ ಮಹೋತ್ಸವ

ಭಟ್ಕಳ: ಜಿಲ್ಲೆಯ ಪ್ರಸಿದ್ಧ ಅಲ್ವೇಕೋಡಿ  ದುರ್ಗಾಪರಮೇಶ್ವರಿ ದೇವರ ಪುನರ್ ಪ್ರತಿಷ್ಟಾ ಸುವರ್ಣ ಮಹೋತ್ಸವ ಕಾರ್ಯಕ್ರಮ ಜೂನ್ 29ರಿಂದ ...

ಕಾಂಗ್ರೆಸ್‌ನ ಅಭೂತಪೂರ್ವ ಕಾರ್ಯಗಳಿಗೆ ಶುಭಾಶಯ ತಿಳಿಸಿದ ಹಿಂದುತ್ವ ನಾಯಕ ಚಕ್ರವರ್ತಿ ಸೂಲಿಬೆಲೆ

“ಕೆಲವು ವಿಚಾರ ನಾನು ಪ್ರಾಮಾಣಿಕವಾಗಿ ಒಪ್ಪಿಕೊಳ್ಳಬೇಕಾಗುತ್ತದೆ. ನಾನು ಕಾಂಗ್ರೆಸಿಗರಿಗೆ ಶುಭಾಶಯ ತಿಳಿಸುತ್ತೇನೆ. ನೀವು ...

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟ; ಬಾಲಕಿಯರೇ ಮೇಲುಗೈ; ಶೇ.73.40ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ರಾಜ್ಯಾದ್ಯಂತ 2023-24ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇ.73.40ರಷ್ಟು ಉತ್ತೀರ್ಣತೆ ದಾಖಲಾಗಿದೆ. ...

ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ; 76.91ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ, ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ

ಈ ವರ್ಷದ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಶೇ 94 ರಷ್ಟು ಪ್ರಥಮ ಹಾಗೂ ದಕ್ಷಿಣ ಕಾಂಡ ಶೇ 92.12 ರಷ್ಟು ಫಲಿತಾಂಶದೊಂದಿಗೆ ದ್ವಿತೀಯ ...