ಭಟ್ಕಳ: ತರಬಿಯತ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಸೈಯ್ಯದ್ ಅಶ್ರಫ್ ಬರ್ಮಾವರ್ ನಿಧನ

Source: sonews | By Staff Correspondent | Published on 7th April 2018, 2:59 PM | Coastal News | Don't Miss |

ಭಟ್ಕಳ: ಇಲ್ಲಿನ ಹಲವು ಪ್ರಮುಖ ಶಿಕ್ಷಣ ಹಾಗೂ ಸಮಾಜಿಕ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದ ತರಬಿಯತ್ ಎಜ್ಯುಕೇಶನ್ ಸೂಸೈಟಿಯ ಶಮ್ಸ್ ಆಂಗ್ಲ ಮಾಧ್ಯಮ ಶಾಲೆಯ ಉಪಾಧ್ಯಕ್ಷ ಸೈಯ್ಯದ್ ಮುಹಮ್ಮದ್ ಅಶ್ರಫ್ ಬರ್ಮಾವರ್(72) ಶನಿವಾರ ಬೆಳಿಗ್ಗೆ ಜಾಲಿ ಪ.ಪಂ. ವ್ಯಾಪ್ತಿಯ ನೂರ್‍ಬಾಗ್ ನಲ್ಲಿ ಹೃದಯಘಾತದಿಂದ ನಿಧನರಾದರು.

ಮೃತರು ಪತ್ನಿ, ಇಬ್ಬರು ಹೆಣ್ಣು ಹಾಗೂ ಮೂವರು ಗಂಡುಮಕ್ಕಳು ಸೇರಿದಂತೆ ಅಪಾರ ಹಿತೈಷಿಗಳನ್ನು ಅಗಲಿದ್ದಾರೆ. 

ವೆಲ್ಫೇರ್ ಆಸ್ಪತ್ರೆ, ಇಸ್ಲಾಮಿಕ್ ವೆಲ್ಫೇರ್ ಸೂಸೈಟಿ, ಜಮಾಅತೆ ಇಸ್ಲಾಮಿ ಹಿಂದ್, ಅಲ್ ಕೌಸರ್ ಗಲ್ರ್ಸ್ ಕಾಲೇಜ್, ಶಮ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ನ್ಯೂಶಮ್ಸ್ ಸ್ಕೂಲ್, ಅಂಜುಮನ್ ಶಿಕ್ಷಣ ಸಂಸ್ಥೆ, ಇದಾರೆ ಅದಬೆ ಇಸ್ಲಾಮಿ ಹಿಂದ್ ಹಾಗೂ ಎಪಿಸಿಆರ್ ಸಂಸ್ಥೆಯಲ್ಲಿ ತಮ್ಮನ್ನು ಸಕ್ರೀಯವಾಗಿ ತೊಡಗಿಸಿಕೊಂಡು ಸಾಮಾಜಿಕ ಕಾರ್ಯದಲ್ಲಿ ಕ್ರಿಯಾಶೀಲರಾಗಿದ್ದು.
ಮೃತರು ಉತ್ತಮ ಸಾಮಾಜಿಕ ಕಳಕಳಿಯನ್ನು ಹೊಂದಿದ್ದು ನವಾಯತಿ ಹಾಗೂ ಉರ್ದು ಭಾಷೆಗಳಲ್ಲಿ ನೂರಾರು ಕವಿತೆಗಳನ್ನು ಬರೆದಿದ್ದಾರೆ. ಇವರ ನಿಧನಕ್ಕೆ ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯ ಅಧ್ಯಕ್ಷ ಮುಜಾಹಿದ್ ಮುಸ್ತಫಾ, ತರಬಿಯತ್ ಎಜ್ಯುಕೇಶನ್ ಸೂಸೈಟಿಯ ಅಧ್ಯಕ್ಷ ಅಬ್ದುಲ್ ಕಾದಿರ್ ಬಾಷಾ ರುಕ್ನುದ್ದೀನ್, ಕಾರ್ಯದರ್ಶಿ ಮುಹಮ್ಮದ್ ತಲ್ಹಾ ಸಿದ್ದಿಬಾಪ ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಯ ಮುಖಂಡರು ಸಂತಾಪವನ್ನು ಸೂಚಿಸಿದ್ದಾರೆ. 

Read These Next

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...