ಈಜು ಕ್ರೀಡಾಕೂಟದಲ್ಲಿ ಗೆದ್ದ ಭಟ್ಕಳ ಅಂಜುಮನ್ ಕಾಲೇಜು ತಂಡ

Source: SO News | By Laxmi Tanaya | Published on 5th December 2022, 10:43 PM | Coastal News | Don't Miss |

ಭಟ್ಕಳ: ಕರ್ನಾಟಕ ವಿಶ್ವವಿದ್ಯಾಲಯ ಏಕ ವಲಯ ಅಂತರ್ ಕಾಲೇಜು ಈಜು ಕ್ರೀಡಾಕೂಟದಲ್ಲಿ ಭಟ್ಕಳ ಅಂಜುಮನ್ ಇನ್‍ಸ್ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್ ಆ್ಯಂಡ್ ಕಂಪ್ಯೂಟರ್ ಎಪ್ಲಿಕೇಶನ್ ಕಾಲೇಜು ಅತ್ಯುತ್ತಮ ಸಾಧನೆ ಮರೆದು ಚಾಂಪಿಯನ್ ಆಗಿ ಹೊರ ಹೊಮ್ಮಿದೆ.

  ಧಾರವಾಡ ಜೆಎಸ್‍ಎಸ್ ಕಾಲೇಜಿನಲ್ಲಿ ನಡೆದ ಪಂದ್ಯಾವಳಿಯಲ್ಲಿ ಭಟ್ಕಳ ಅಂಜುಮನ್ ಬಿಸಿಎ ತೃತೀಯ ವರ್ಷದ ವಿದ್ಯಾರ್ಥಿ ಖಾಶ್ಫಿ ಫರಿದಾ 200 ಮೀಟರ್ ಬ್ಯಾಕ್‍ಸ್ಟ್ರೋಕ್‍ನಲ್ಲಿ ದ್ವಿತೀಯ, 100ಮೀ ಬ್ಯಾಕ್‍ಸ್ಟ್ರೋಕ್‍ನಲ್ಲಿ ತೃತೀಯ, 50 ಮೀಟರ್ ಬ್ಯಾಕ್ ಸ್ಟ್ರೋಕ್‍ನಲ್ಲಿ ತೃತೀಯ, ಬಿಬಿಎ ಪ್ರಥಮ ವರ್ಷದ ವಿದ್ಯಾರ್ಥಿ ನವಾಫ್ ಸಿದ್ದಿಕಾ 100ಮೀ. ಬಟರ್‍ಫ್ಲೈ ಸ್ಟ್ರೋಕ್‍ನಲ್ಲಿ ಪ್ರಥಮ, 50ಮೀ. ಬಟರ್‍ಫ್ಲೈ ಸ್ಟ್ರೋಕ್‍ನಲ್ಲಿ ದ್ವಿತೀಯ, ಬಿಸಿಎ ಪ್ರಥಮ ವರ್ಷದ ವಿದ್ಯಾರ್ಥಿ ಕಾಬ್ ಜಬಾಲಿ 100ಮೀ. ಬಟರ್‍ಫ್ಲೈ ಸ್ಟ್ರೋಕ್‍ನಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. 

ಈಜು ಪಟುಗಳಾದ ಕಾಶ್ಫಿ ಫರಿದಾ, ನವಾಫ್ ಸಿದ್ದಿಕಾ, ಕಾಬ್ ಜಬಾಲಿ, ಹಾಶೀಮ್ ಮುಸ್ಬಾ, ಮೊಹಿದ್ದೀನ್ ಸಿದ್ದಿ ಅಹ್ಮೆದಾ ಅವರನ್ನು ಒಳಗೊಂಡ ಭಟ್ಕಳ ಅಂಜುಮನ್ ತಂಡವು 4*100 ಮೆಡ್ಲೆ ರಿಲೇಯಲ್ಲಿ ಪ್ರಥಮ, 4*100 ಫ್ರೀ ಸ್ಟೈಲ್ ರಿಲೇಯಲ್ಲಿ ದ್ವಿತೀಯ ಸ್ಥಾನ ಪಡೆದು ಅಗ್ರ ಸ್ಥಾನಕ್ಕೆ ಏರಿತು. ಪ್ರಶಸ್ತಿ ಪಡೆದ ಈಜುಪಟುಗಳು ಹಾಗೂ ತರಬೇತಿ ನೀಡಿದ ಭಟ್ಕಳ ಅಂಜುಮನ್ ದೈಹಿಕ ಶಿಕ್ಷಣ ನಿರ್ದೇಶಕ ಮೋಹನ ಮೇಸ್ತ, ಮಾಜಿ ಕ್ರೀಡಾ ಕಾರ್ಯದರ್ಶಿ ಮಹ್ಮದ್ ಸಕೀಬ್ ವರಿಗೆ ಭಟ್ಕಳ ಅಂಜುಮನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮುಝಾಮಿಲ್ ಖಾಜಿಯಾ, ಪ್ರಧಾನ ಕಾರ್ಯದರ್ಶಿ ಸಿದ್ದಿಕ್ ಇಸ್ಮೈಲ್, ಕಾಲೇಜ್ ಬೋರ್ಡ ಕಾರ್ಯದರ್ಶಿ ಆಫ್ತಾಬ್, ಸಂಸ್ಥೆಯ ಸದಸ್ಯರು, ಪ್ರಾಚಾರ್ಯ ಮಹ್ಮದ್ ಮೊಸೀನ್, ಉಪನ್ಯಾಸಕರು, ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...