ಭಟ್ಕಳ: ತಾಲೂಕಿನ ಸುಪ್ರಸಿದ್ಧ ಶಕ್ತಿ ಕ್ಷೇತ್ರಗಳಲ್ಲಿ ಒಂದಾದ ತಾಲೂಕಿನ ಸೋಡಿಗದ್ದೆ ಶ್ರೀ ಮಹಾಸತಿ ದೇವರ ಜಾತ್ರೆಯು ಮಂಗಳವಾರದಂದು ಹಾಲಹಬ್ಬದಿಂದ ಅದ್ದೂರಿಯಾಗಿ ಆರಂಭಗೊಂಡಿದ್ದು, ದೇವಸ್ಥಾನದ ಆಡಳಿತಾಧಿಕಾರಿ ಹಾಗೂ ತಹಸೀಲ್ದಾರ ತಿಪ್ಪೇಸ್ವಾಮಿ ಚಾಲನೆ ನೀಡಿದರು.
ಸತತ ಒಂಬತ್ತು ದಿನಗಳ ಕಾಲ ಅದ್ದೂರಿಯಾಗಿ ಸಂಭ್ರಮದಿಂದ ನಡೆಯುವ ಅತ್ಯಂತ ಮಹತ್ವದ ಜಾತ್ರೆಯಾಗಿದೆ. ಜಾತ್ರಾ ಮಹೋತ್ಸವಕ್ಕೆ ತಹಸೀಲ್ದಾರ್ ತಿಪ್ಪೇಸ್ವಾಮಿ ಮಧ್ಯಾಹ್ನ ವೇಳೆ ದೇವಸ್ಥಾನಕ್ಕೆ ತೆರಳಿ ಜಾತ್ರೆಗೆ ಚಾಲನೆಗೊಳಿಸಿ ವಿಶೇಷ ಪೂಜೆಯನ್ನು ಸಲ್ಲಿಸಿದರು.
ಮಂಗಳವಾರದಂದು ಬೆಳಿಗ್ಗೆಯಿಂದಲೇ ಭಕ್ತರು ಶ್ರೀ ದೇವರಿಗೆ ಹೂವಿನ ಪೂಜೆಯನ್ನು ಸಲ್ಲಿಸಿ ದೇವರ ದರ್ಶನ ಪಡೆದುಕೊಂಡರು. ಮುಂಜಾನೆಯಿಂದಲೇ ಭಕ್ತರು ಸಾಲುಗಟ್ಟಿ ನಿಂತಿದ್ದು ತಮ್ಮ ಹರಕೆಯನ್ನು ತಿರಿಸಿದರು. ದಕ್ಷಿಣೋತ್ತರ ಜಿಲ್ಲೆಯ ಅತ್ಯಂತ ದೊಡ್ಡ ಜಾತ್ರೆಯಾದ ಸೋಡಿಗದ್ದೆ ಶ್ರೀ ಮಹಾಸತಿ ಅಮ್ಮನವರ ಜಾತ್ರೆಗೆ ಊರ ಹಾಗೂ ಪರ ಊರಿನಿಂದ ಸಹಸ್ರಾರು ಭಕ್ತಾಧಿಗಳು ಆಗಮಿಸಿ ತಮ್ಮ ಹರಕೆಗಳನ್ನು ತೀರಿಸುವುದು ಸಂಪ್ರದಾಯ ರೂಢಿಯಲ್ಲಿದೆ. ಜಾತ್ರೆಯ ಇನ್ನೊಂದು ವಿಶೇಷ ಎಂದರೆ ದೇವಸ್ಥಾನವನ್ನು ವಿಶೇಷ ರೀತಿಯ ಬಗೆ ಬಗೆಯ ಹೂವಿನಿಂದ ದೇವಾಲಯ ಪ್ರಾಂಗಣವನ್ನು ಸುಂದರವಾಗಿ ಕಂಗೊಳಿಸುವಂತೆ ಅಲಂಕೃತಗೊಳಿಸಲಾಯಿತು.
ಮೊದಲ ದಿನದ ಜಾತ್ರಾ ಮಹೋತ್ಸವಕ್ಕೆ ದೇವರ ದರ್ಶನಕ್ಕೆ ಭಕ್ತಾದಿಗಳ ನೂಕೂನುಗ್ಗಲು ಅಷ್ಟಾಗಿ ಕಂಡ ಬರಲಿಲ್ಲ. ಎರಡನೇ ದಿನದ ವಿಶೇಷ ಕೆಂಡ ಸೇವೆ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಬರಲಿದ್ದು, ತಮ್ಮ ಹರಕೆಯನ್ನು ತಿರಿಸಿ ದೇವಿಗೆ ಪೂಜೆಯನ್ನು ಸಲ್ಲಿಸಲಿದ್ದಾರೆ.
ಸೋಡಿಗದ್ದೆ ಶ್ರೀ ಮಹಾಸತಿ ಜಾತ್ರೆಯ ವಿಶೇಷವೆಂದರೆ ದೇವರಿಗೆ ಗೊಂಬೆಗಳನ್ನು ಅರ್ಪಿಸುವುದು ಪ್ರಮುಖ ಹರಕೆಗಳಲ್ಲಿ ಒಂದಾಗಿದೆ. ಗೊಂಬೆಗಳಲ್ಲಿಯೂ ಕೂಡಾ ಮೂರು ವಿವಿಧ ಗಾತ್ರದ ಗೊಂಬೆಗಳನ್ನು ಅರ್ಪಿಸಲಿದ್ದು, ಭಕ್ತರು ತಮ್ಮ ತಮ್ಮ ಶಕ್ತ್ಯಾನುಸಾರ ಹರಕೆಯ ಗೊಂಬೆಗಳನ್ನು ನೀಡುತ್ತಾರೆ. ಗೊಂಬೆಗಳಲ್ಲಿ ಮಹಾಸತಿ, ಜಟ್ಟಿಗರಾಯ, ಮರದ ಹುಲಿರಾಯ, ನಾಗರಕಲ್ಲು, ಹಾಯ್ ಗೂಳಿ ಗೊಂಬೆಗಳನ್ನು ಹರಕೆಯ ರೂಪದಲ್ಲಿ ಸಲ್ಲಿಸಲಾಯಿತು. ಜಾತ್ರಾ ಸಮಯದಲ್ಲಿ ಪ್ರತಿ ನಿತ್ಯ ಭಕ್ತರು ಹೂವಿನ ಪೂಜೆ, ತೊಟ್ಟಿಲು ಸಮರ್ಪಣೆ, ಕಣ್ಣು, ಇತ್ಯಾದಿಗಳನ್ನು ಸಮರ್ಪಿಸಿ ತಮ್ಮ ಹರಕೆಯನ್ನು ತೀರಿಸಿದ್ದಾರೆ. ಈ ಬಾರಿ ಜಾತ್ರೆಯ ಸಂದರ್ಭದಲ್ಲಿ ಎಂಟು ದಿನಗಳ ಕಾಲ ಪ್ರಸಾದ ಭೋಜನದ ವ್ಯವಸ್ಥೆಯನ್ನು ಏರ್ಪಡಿಸಲಾಗಿದೆ. ಮಂಗಳವಾರದಿಂದಲೇ ಪ್ರಸಾದ ಭೋಜನ ಆರಂಭಗೊಂಡು ಸಾವಿರಾರು ಭಕ್ತರ ಪ್ರಸಾದ ರೂಪದಲ್ಲಿ ಭೋಜನವನ್ನು ಮಾಡಿದರು. ದೇವಾಲಯದ ಸುತ್ತಲು ಜಾತ್ರಾ ಮಹೋತ್ಸವದ ಅಂಗಡಿ-ಮುಂಗಟ್ಟುಗಳು ಜಾತ್ರೆಯ ವೈಭವವನ್ನು ಇನ್ನಷ್ಟು ಹೆಚ್ಚಿಸಿದವು.
ಈ ಸಂದರ್ಭದಲ್ಲಿ ಕಮಿಟಿಯ ಅಧ್ಯಕ್ಷ ಭಾಸ್ಕರ ಮೊಗೇರ,ಆಡಳಿತ ಕಮಿಟಿಯ ಲಕ್ಷ್ಮೀ ನಾರಾಯಣ ನಾಯ್ಕ, ದೇವಾನಂದ ಮೊಗೇರ, ನಾಗರಾಜ ನಾಯ್ಕ, ಗೋವಿಂದ ನಾಯ್ಕ, ರಮೇಶ ದೇವಾಡಿಗ, ತಿಮ್ನಪ್ಪ ನಾಯ್ಕ, ಮಾದೇವ ನಾಯ್ಕ, ರಘು ನಾಯ್ಕ, ದಿವಾಕರ ಮೊಗೇರ ಇತರರು ಇದ್ದರು.
Read These Next
ಕಾರವಾರ: ಮಾದರಿ ನೀತಿ ಸಂಹಿತೆ ಉಲ್ಲಂಘನೆ : ವಸ್ತುಗಳ ವಶ
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ ಜಿಲ್ಲೆಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಏಪ್ರಿಲ್ 27 ರ ...
ಕಾರವಾರ: ಮನೆಯಿಂದ ಮತದಾನ ವೀಕ್ಷಿಸಿದ ಜಿಲ್ಲಾಧಿಕಾರಿಗಳು
ಜಿಲ್ಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಮತ್ತು ವಿಕಲಚೇತನರಿಗಾಗಿ ನಡೆಯುತ್ತಿರುವ ಮನೆಯಿಂದ ಮತದಾನ ಕಾರ್ಯವನ್ನು ಜಿಲ್ಲಾ ...
ಕಾರವಾರ: ಚುನಾವಣಾ ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿಗಳು
ಭಾರತ ಚುನಾವಣಾ ಆಯೋಗದ ನಿರ್ದೇಶನದ ಮೆರೆಗೆ , ಜಿಲ್ಲಾಡಳಿತ, ಜಿಲ್ಲಾ ಸ್ವಿಪ್ ಸಮಿತಿವತಿಯಿಂದ ಮತದಾರಿಗೆ ಜಾಗೃತಿ ಹಾಗೂ ಮತದಾರರಿಗೆ ...
ಕಾರು ಮರಕ್ಕೆ ಡಿಕ್ಕಿ:ಯುವತಿ ಸ್ಥಳದಲ್ಲಿ ಸಾವು,ನಾಲ್ವರಗೆ ಗಂಭೀರ ಗಾಯ
ಕಾರು ಮರಕ್ಕೆ ಡಿಕ್ಕಿ:ಯುವತಿ ಸ್ಥಳದಲ್ಲಿ ಸಾವು,ನಾಲ್ವರಗೆ ಗಂಭೀರ ಗಾಯ
ಕೇರಳದಲ್ಲಿ ಹೆಚ್ಚಿದ ಹಕ್ಕಿಜ್ವರ; ಗಡಿಯಲ್ಲಿ ತೀವ್ರ ಕಟ್ಟೆಚ್ಚರ
ಕೇರಳದಲ್ಲಿ ಹೆಚ್ಚಿದ ಹಕ್ಕಿಜ್ವರ; ಗಡಿಯಲ್ಲಿ ತೀವ್ರ ಕಟ್ಟೆಚ್ಚರ
ಕರ್ನಾಟಕದಾದ್ಯಂತ ಗ್ಯಾರಂಟಿ ಅಲೆ- ರವೀಂದ್ರ ನಾಯ್ಕ.
ಕರ್ನಾಟಕದಾದ್ಯಂತ ಗ್ಯಾರಂಟಿ ಅಲೆ- ರವೀಂದ್ರ ನಾಯ್ಕ.
ಕಾರು ಮರಕ್ಕೆ ಡಿಕ್ಕಿ:ಯುವತಿ ಸ್ಥಳದಲ್ಲಿ ಸಾವು,ನಾಲ್ವರಗೆ ಗಂಭೀರ ಗಾಯ
ಕಾರು ಮರಕ್ಕೆ ಡಿಕ್ಕಿ:ಯುವತಿ ಸ್ಥಳದಲ್ಲಿ ಸಾವು,ನಾಲ್ವರಗೆ ಗಂಭೀರ ಗಾಯ
ಅರಣ್ಯ ಭೂಮಿ ಹಕ್ಕು ನೀಡುವುದು ಜನಪ್ರತಿನಿಧಿಗಳ ಧರ್ಮ- ರಂಜಿತಾ ರವೀಂದ್ರ.
ಅರಣ್ಯ ಭೂಮಿ ಹಕ್ಕು ನೀಡುವುದು ಜನಪ್ರತಿನಿಧಿಗಳ ಧರ್ಮ- ರಂಜಿತಾ ರವೀಂದ್ರ.
ರಸ್ತೆ ಅಪಘಾತ: ಗಾಯಾಳುವನ್ನ ಆಸ್ಪತ್ರೆಗೆ ಕರೆದೊಯ್ದು ವೈದ್ಯೋಪಚಾರ ನೀಡಿದ ಡಾ.ಅಂಜಲಿ.
ಯಲ್ಲಾಪುರ: ತಾಲೂಕಿನ ಹೆದ್ದಾರಿಯಲ್ಲಿ ಸ್ಕಿಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರನನ್ನ ತಮ್ಮದೇ ಕಾರಿನಲ್ಲಿ ...
ಮನೆಯಿಂದ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ
ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...
ಚಿಂಚೋಳಿಯಲ್ಲಿ ಬೈಕ್ ಜಾಥಾದ ಮೂಲಕ ಮತದಾನದ ಜಾಗೃತಿ
ಕಲಬುರಗಿ : ಚಿಂಚೋಳಿ ತಾಲೂಕು ಆಡಳಿತ, ತಾಲೂಕು ಸ್ವೀಪ್ ಸಮಿತಿ ಹಾಗೂ ತಾಲೂಕು ಪಂಚಾಯತ ವತಿಯಿಂದ ಹಮ್ಮಿಕೊಳ್ಳಲಾದ "ಮತದಾನ ಜಾಗೃತಿ ಜಾಥಾ ...
ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್
ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...