ಭಟ್ಕಳ: ತಾಲೂಕಿನ ಸುಪ್ರಸಿದ್ಧ ಶಕ್ತಿ ಕ್ಷೇತ್ರಗಳಲ್ಲಿ ಒಂದಾದ ತಾಲೂಕಿನ ಸೋಡಿಗದ್ದೆ ಶ್ರೀ ಮಹಾಸತಿ ದೇವರ ಜಾತ್ರೆಯು ಗುರುವಾರದಂದು ಹಾಲಹಬ್ಬದಿಂದ ಅದ್ದೂರಿಯಾಗಿ ಆರಂಭಗೊಂಡಿದ್ದು, ದೇವಸ್ಥಾನದ ಆಡಳಿತಾಧಿಕಾರಿ ಹಾಗೂ ತಹಸೀಲ್ದಾರ ವಿ.ಪಿ.ಕೊಟ್ರಳ್ಳಿ ಚಾಲನೆ ನೀಡಿದರು.
ಸತತ ಒಂಬತ್ತು ದಿನಗಳ ಕಾಲ ಅದ್ದೂರಿಯಾಗಿ ಸಂಭ್ರಮದಿಂದ ನಡೆಯುವ ಅತ್ಯಂತ ಮಹತ್ವದ ಜಾತ್ರೆಯಾಗಿದೆ. ಜಾತ್ರಾ ಮಹೋತ್ಸವಕ್ಕೆ ತಹಸೀಲ್ದಾರ್ ವಿ.ಪಿ.ಕೊಟ್ರಳ್ಳಿ ಮಧ್ಯಾಹ್ನ ವೇಳೆ ದೇವಸ್ಥಾನಕ್ಕೆ ತೆರಳಿ ಜಾತ್ರೆಗೆ ಚಾಲನೆಗೊಳಿಸಿ ವಿಶೇಷ ಪೂಜೆಯನ್ನು ಸಲ್ಲಿಸಿದರು.
ಗುರುವಾರದಂದು ಬೆಳಿಗ್ಗೆಯಿಂದಲೇ ಭಕ್ತರು ಶ್ರೀ ದೇವರಿಗೆ ಹೂವಿನ ಪೂಜೆಯನ್ನು ಸಲ್ಲಿಸಿ ದೇವರ ದರ್ಶನ ಪಡೆದುಕೊಂಡರು. ಮುಂಜಾನೆಯಿಂದಲೇ ಭಕ್ತರು ಸಾಲುಗಟ್ಟಿ ನಿಂತಿದ್ದು ತಮ್ಮ ಹರಕೆಯನ್ನು ತಿರಿಸಿದರು. ದಕ್ಷಿಣೋತ್ತರ ಜಿಲ್ಲೆಯ ಅತ್ಯಂತ ದೊಡ್ಡ ಜಾತ್ರೆಯಾದ ಸೋಡಿಗದ್ದೆ ಶ್ರೀ ಮಹಾಸತಿ ಅಮ್ಮನವರ ಜಾತ್ರೆಗೆ ಊರ ಹಾಗೂ ಪರ ಊರಿನಿಂದ ಸಹಸ್ರಾರು ಭಕ್ತಾಧಿಗಳು ಆಗಮಿಸಿ ತಮ್ಮ ಹರಕೆಗಳನ್ನು ತೀರಿಸುವುದು ಸಂಪ್ರದಾಯ ರೂಢಿಯಲ್ಲಿದೆ. ಜಾತ್ರೆಯ ಇನ್ನೊಂದು ವಿಶೇಷ ಎಂದರೆ ದೇವಸ್ಥಾನವನ್ನು ವಿಶೇಷ ರೀತಿಯ ಬಗೆ ಬಗೆಯ ಹೂವಿನಿಂದ ದೇವಾಲಯ ಪ್ರಾಂಗಣವನ್ನು ಸುಂದರವಾಗಿ ಕಂಗೊಳಿಸುವಂತೆ ಅಲಂಕೃತಗೊಳಿಸಲಾಯಿತು.
ಮೊದಲ ದಿನದ ಜಾತ್ರಾ ಮಹೋತ್ಸವಕ್ಕೆ ದೇವರ ದರ್ಶನಕ್ಕೆ ಭಕ್ತಾದಿಗಳ ನೂಕೂನುಗ್ಗಲು ಅಷ್ಟಾಗಿ ಕಂಡ ಬರಲಿಲ್ಲ. ಎರಡನೇ ದಿನದ ವಿಶೇಷ ಕೆಂಡ ಸೇವೆ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಬರಲಿದ್ದು, ತಮ್ಮ ಹರಕೆಯನ್ನು ತಿರಿಸಿ ದೇವಿಗೆ ಪೂಜೆಯನ್ನು ಸಲ್ಲಿಸಲಿದ್ದಾರೆ.
ಸೋಡಿಗದ್ದೆ ಶ್ರೀ ಮಹಾಸತಿ ಜಾತ್ರೆಯ ವಿಶೇಷವೆಂದರೆ ದೇವರಿಗೆ ಗೊಂಬೆಗಳನ್ನು ಅರ್ಪಿಸುವುದು ಪ್ರಮುಖ ಹರಕೆಗಳಲ್ಲಿ ಒಂದಾಗಿದೆ. ಗೊಂಬೆಗಳಲ್ಲಿಯೂ ಕೂಡಾ ಮೂರು ವಿವಿಧ ಗಾತ್ರದ ಗೊಂಬೆಗಳನ್ನು ಅರ್ಪಿಸಲಿದ್ದು, ಭಕ್ತರು ತಮ್ಮ ತಮ್ಮ ಶಕ್ತ್ಯಾನುಸಾರ ಹರಕೆಯ ಗೊಂಬೆಗಳನ್ನು ನೀಡುತ್ತಾರೆ. ಗೊಂಬೆಗಳಲ್ಲಿ ಮಹಾಸತಿ, ಜಟ್ಟಿಗರಾಯ, ಮರದ ಹುಲಿರಾಯ, ನಾಗರಕಲ್ಲು, ಹಾಯ್ ಗೂಳಿ ಗೊಂಬೆಗಳನ್ನು ಹರಕೆಯ ರೂಪದಲ್ಲಿ ಸಲ್ಲಿಸಲಾಯಿತು. ಜಾತ್ರಾ ಸಮಯದಲ್ಲಿ ಪ್ರತಿ ನಿತ್ಯ ಭಕ್ತರು ಹೂವಿನ ಪೂಜೆ, ತೊಟ್ಟಿಲು ಸಮರ್ಪಣೆ, ಕಣ್ಣು, ಇತ್ಯಾದಿಗಳನ್ನು ಸಮರ್ಪಿಸಿ ತಮ್ಮ ಹರಕೆಯನ್ನು ತೀರಿಸಿದ್ದಾರೆ. ಈ ಬಾರಿ ಜಾತ್ರೆಯ ಸಂದರ್ಭದಲ್ಲಿ ಎಂಟು ದಿನಗಳ ಕಾಲ ಪ್ರಸಾದ ಭೋಜನದ ವ್ಯವಸ್ಥೆಯನ್ನು ಏರ್ಪಡಿಸಲಾಗಿದೆ. ಗುರುವಾರದಿಂದಲೇ ಪ್ರಸಾದ ಭೋಜನ ಆರಂಭಗೊಂಡು ಸಾವಿರಾರು ಭಕ್ತರ ಪ್ರಸಾದ ರೂಪದಲ್ಲಿ ಭೋಜನವನ್ನು ಮಾಡಿದರು. ದೇವಾಲಯದ ಸುತ್ತಲು ಜಾತ್ರಾ ಮಹೋತ್ಸವದ ಅಂಗಡಿ-ಮುಂಗಟ್ಟುಗಳು ಜಾತ್ರೆಯ ವೈಭವವನ್ನು ಇನ್ನಷ್ಟು ಹೆಚ್ಚಿಸಿದವು.
ಪೂಜೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಸುನೀಲ ನಾಯ್ಕ ಈ ಜಾತ್ರೆಯೂ ತಾಲೂಕಿಗೆ ಮಾತ್ರ ಸೀಮಿತವಾಗಿಲ್ಲ. ಕರಾವಳಿ ಸೇರಿದಂತೆ ಮಲೆನಾಡಿನಲ್ಲಿನ ಜಾತ್ರೆಯಲ್ಲಿ ವಿಶೇಷತೆಯನ್ನು ಹೊಂದಿರುವ ಜಾತ್ರೆ. ಈ ಜಾತ್ರೆಗೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಹಾಗೂ ರಾಜ್ಯದ ಹಲವು ಕಡೆಯಿಂದ ಭಕ್ತಾದಿಗಳು ಬಂದು ಮಹಾಸತಿ ದೇವಿಗೆ ಪೂಜೆ ಸಲ್ಲಿಸುತ್ತಾರೆ. ಒಂದು ಶಾಲೆ ಹಾಗೂ ದೇವಸ್ಥಾನ ಅಭಿವೃದ್ಧಿಯಾದರೆ ಗ್ರಾಮವೂ ಅಭಿವೃದ್ಧಿಯಾಗುತ್ತದೆ ಎಂಬ ನಿಟ್ಟಿನಲ್ಲಿ ಹಾಗೆ ಈ ದೇವಸ್ಥಾನದ ಅಭಿವೃದ್ಧಿಗಾಗಿ ಈಗಾಗಲೇ 25 ಲಕ್ಷ ರೂಪಾಯಿ ವೆಚ್ಚದಲ್ಲಿ ಯಾತ್ರಿ ನಿವಾಸ ನಿರ್ಮಿಸಲು ಮತ್ತು 49.71 ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಅನುದಾನವನ್ನು ಬಿಡುಗಡೆ ಮಾಡಲಾಗಿದ್ದು ಇನ್ನೂ ಕೆಲವೇ ದಿನಗಳಲ್ಲಿ ಕಾಮಗಾರಿಯು ಪ್ರಾರಂಭಗೊಳ್ಳಲಿದೆ. ಮುಂದಿನ ದಿನದಲ್ಲಿ ದೇವಸ್ಥಾನದ ಅಭಿವೃದ್ಧಿಗೆ ಶ್ರಮಿಸಲು ಸಿದ್ದನಿದ್ದೇನೆ.
ಈ ಸಂದರ್ಭದಲ್ಲಿ ಶಾಸಕ ಸುನೀಲ ನಾಯ್ಕ, ತಹಸೀಲ್ದಾರ್ ವಿ.ಪಿ.ಕೊಟ್ರಳಿ, ಗ್ರಾಮ ಪಂಚಾಯತ, ತಾಲೂಕಾ ಪಂಚಾಯತ ಜನಪ್ರತಿನಿಧಿಗಳು ಸೇರಿದಂತೆ ಊರಿನ ಪರ ಊರಿನ ಭಕ್ತರು ಬಂದು ದೇವಿಯ ದರ್ಶನ ಪಡೆದರು.
Read These Next
ಅಂಕೋಲದಲ್ಲಿ ಬೈಕ್ ಮತ್ತು ಟ್ರಾಕ್ಸ್ ನಡುವೆ ಅಪಘಾತ. ಸವಾರ ಸಾವು. ಇಬ್ಬರು ಗಂಭೀರ.
ಅಂಕೋಲಾ : ಬೈಕ್ ಮತ್ತು ಟ್ರಾಕ್ಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಅಕೋಲಾ ತಾಲೂಕಿನ ಹಟ್ಟಿಕೇರಿ ...
ಕಾರವಾರ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು
ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ , ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಯಾವುದೇ ಅಭ್ಯರ್ಥಿಗಳು ತಮ್ಮ ...
ಭಟ್ಕಳ: ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕ ಮೃತ್ಯು; ಯುವಕ ನಾಪತ್ತೆ
ಅರಬ್ಬಿ ಸಮುದ್ರದಲ್ಲಿ ಮುಳುಗಿ ಬಾಲಕನೋರ್ವ ಮೃತಪಟ್ಟಿದ್ದು, ಮತ್ತೋರ್ವ ಯುವಕ ನಾಪತ್ತೆಯಾದ ಘಟನೆ ಸೋಡಿಗದ್ದೆ ಬಳಿಯ ಹಡಿನ ಮುಲ್ಲಿ ...
ದಾಂಡೇಲಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರ ದುರ್ಮರಣ
ದಾಂಡೇಲಿ : ತಾಲೂಕಿನ ಅಕೋಡಾ ಗ್ರಾಮದ ಬಿರಿಯಂಪಲ್ಲಿ ಕಾಳಿ ನದಿಯಲ್ಲಿ ಮುಳುಗಿ ಆರು ಪ್ರವಾಸಿಗರು ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ.
ಭಟ್ಕಳ ಸಮೀಪದ ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ
ಭಟ್ಕಳ : ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಬೋಟ್ ಸಮುದ್ರದಲ್ಲಿ ಮುಳುಗಿದ ಘಟನೆ ಶನಿವಾರ ಭಟ್ಕಳ ಸಮೀಪ ನಡೆದಿದೆ. ...
ಕಾರವಾರ: ಮತದಾನ ಜಾಗೃತಿ ಜಾಥಾ
ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...