ದಲಿತ ಮಹಿಳೆಯ ವಿವಸ್ತಗೊಳಿಸಿ ಬಾಯಿಗೆ ಮೂತ್ರ ವಿಸರ್ಜನೆ; ಬಿಹಾರದಲ್ಲಿ ನಡೆದ ಅಮಾನವೀಯ ಕೃತ್ಯ

Source: Vb | By I.G. Bhatkali | Published on 26th September 2023, 6:27 PM | National News |

ಪಟ್ನಾ: ಸಾಲ ಸಂಪೂರ್ಣ ಮರು ಪಾವತಿಸಿದ ಬಳಿಕ ಹೆಚ್ಚುವರಿ 1,500 ರೂ. ಪಾವತಿಸಲು ನಿರಾಕರಿಸಿದ ದಲಿತ ಮಹಿಳೆಯೊಬ್ಬರನ್ನು ಲೇವಾದೇವಿಗಾರ ಹಾಗೂ ಆತನ ಸಹಚರರು ವಿವಸ್ತ್ರಗೊಳಿಸಿ ಥಳಿಸಿದ ಹಾಗೂ ಬಾಯಿಗೆ ಮೂತ್ರ ವಿಸರ್ಜನೆ ಮಾಡಿದ ಅಮಾನವೀಯ ಘಟನೆ ಪಟ್ನಾದಲ್ಲಿ ನಡೆದಿದೆ.

ಪಟ್ನಾದ ಖುಸ್ರುಪುರ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ. ಘಟನೆ ಬಳಿಕ ಪ್ರಮುಖ ಆರೋಪಿಗಳಾದ ಲೇವಾದೇವಿಗಾರ ಪ್ರಮೋದ್ ಸಿಂಗ್ ಹಾಗೂ ಆತನ ಪುತ್ರ ಅಂಶು ಸಿಂಗ್ ತಲೆಮರೆಸಿಕೊಂಡಿದ್ದಾರೆ. ಅವರನ್ನು ಬಂಧಿಸಲು ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

“ನನ್ನ ಪತಿ ಕೆಲವು ತಿಂಗಳ ಹಿಂದೆ ಪ್ರಮೋದ್ ಸಿಂಗ್‌ನಿಂದ 1,500 ರೂ. ಸಾಲ ತೆಗೆದುಕೊಂಡಿದ್ದರು. ಆ ಹಣವನ್ನು ಬಡ್ಡಿಯೊಂದಿಗೆ ಹಿಂದಿರುಗಿಸಿದ್ದರು. ಆದರೆ, ಆತ ಇನ್ನಷ್ಟು ಹಣ ನೀಡುವಂತೆ ಪೀಡಿಸುತ್ತಿದ್ದ. ಆದರೆ, ನಾವು ಈ ಬೇಡಿಕೆಯನ್ನು ತಿರಸ್ಕರಿಸಿದೆವು. ಹೆಚ್ಚುವರಿ ಹಣ ಪಾವತಿಸದೇ ಇದ್ದರೆ, ಗ್ರಾಮದಲ್ಲಿ ಬೆತ್ತಲೆ ಮೆರವಣಿಗೆ ಮಾಡಿಸುವುದಾಗಿ ಪ್ರಮೋದ್ ಸಿಂಗ್ ಫೋನ್ ಮಾಡಿ ಬೆದರಿಕೆ ಒಡ್ಡಿದ್ದ' ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ. “ಸಾಲದ ಕುರಿತು ಮಹಿಳೆ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರ ತಂಡ ಶನಿವಾರ ಗ್ರಾಮಕ್ಕೆ ಭೇಟಿ ನೀಡಿತ್ತು. ಇದರಿಂದ ಪ್ರಮೋದ್ ಆಕ್ರೋಶಿತನಾಗಿದ್ದನು. ಆತ ಅದೇ ದಿನ ರಾತ್ರಿ ಸಹಚರರನ್ನು ಕಳುಹಿಸಿ ಆಕೆಯನ್ನು ತನ್ನ ಮನೆಗೆ ಕರೆದುಕೊಂಡು ಬರುವಂತೆ ಸೂಚಿಸಿದ್ದನು.

ಸಹಚರರು ಬಂದು ಆಕೆಯನ್ನು ಬಲವಂತವಾಗಿ ಎಳೆದೊಯ್ದಿದ್ದರು ಎಂದು ಕುಟುಂಬದ ಸದಸ್ಯರು ಸುದ್ದಿಗಾರರಿಗೆ ತಿಳಿಸಿದ್ದಾರೆ. “ಅವರು ನನಗೆ ಬೆತ್ತ ಹಾಗೂ ಕೈಯಿಂದ ಥಳಿಸಿದ್ದಾರೆ. ಪ್ರಮೋದ್ ತನ್ನ ಮಗನಲ್ಲಿ ನನ್ನ ಬಾಯಿಗೆ ಮೂತ್ರ ವಿಸರ್ಜಿಸುವಂತೆ ಹೇಳಿದ್ದ. ಆತ ಅದೇ ರೀತಿ ಮಾಡಿದ. ನಾನು ಹೇಗೋ ಅಲ್ಲಿಂದ ತಪ್ಪಿಸಿಕೊಂಡು ಬಂದು ಮನೆ ಸೇರಿದೆ'' ಎಂದು ಮಹಿಳೆ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...