ರಜೆ ಅಮಾನ್ಯಗೊಂಡಿದ್ದರಿಂದ ಸಿಐಎಸ್‌ಎಫ್ ಯೋಧನಿಂದ ನಾಲ್ವರು ಯೋಧರ ಗುಂಡಿಟ್ಟು ಕೊಲೆ

Source: S O News service | By Staff Correspondent | Published on 12th January 2017, 11:31 PM | National News | Incidents | Don't Miss |

ಬಹಾರ್ : ರಜೆಯ ವಿಚಾರಕ್ಕೆ ಸಂಬಂದಿಸಿ ಸಿಐಎಸ್‌ಎಫ್ ಜವಾನನೊಬ್ಬ ಇತರ ನಾಲ್ವರು ಯೋಧರನ್ನು  ಗುಂಡು ಹಾರಿಸಿ ಕೊಂದ ಘಟನೆ ಬಿಹಾರದ ಔರಂಗಬಾದಿನಲ್ಲಿ ನಡೆದಿದೆ. ಆರೋಪಿಯನ್ನು ಬಲಬೀರ್ ಎಂದು ಗುರುತಿಸಲಾಗಿದೆ.

 ಈ ಘಟನೆಯು ನಬಿನಗರ್ ಪವರ್ ಜೆನೆರೇಟಿಂಗ್ ಕಂಪೆನಿಯಲ್ಲಿ ನಡೆದಿದ್ದು ಆರೋಪಿಯನ್ನು ಬಂಧಿಸಲಾಗಿದೆ  ಎಂದು ಪೊಲೀಸ್ ಅಧೀಕ್ಷ ಡಾ.ಸತ್ಯಪ್ರಕಾಶ್ ತಿಳಿಸಿದ್ದಾರೆ.

 ಬಲಬೀರ್ ರಜೆಗಾಗಿ ಅರ್ಜಿ ಸಲ್ಲಿಸಿದ್ದ, ಆದರೆ ರಜೆ ಮಂಜೂರಾಗಲಿಲ್ಲ. ಈ ಸಂದರ್ಭದಲ್ಲಿ ಇನ್ನೋರ್ವ ಸಹೋದ್ಯೋಗಿ ಈ ಬಗ್ಗೆ ಅಪಹಾಸ್ಯ ಮಾಡಿದ್ದ. ಇದರಿಂದ ಸಿಟ್ಟಿಗೆದ್ದ ಬಲಬೀರ್ ಗುಂಡು ಹಾರಿಸಿದ್ದಾನೆ  ದಾಳಿಯಿಂದ ಬಚ್ಚಾ ಶರ್ಮಾ ಹಾಗೂ ಎನ್.ಮಿಶ್ರಾ ಇಬ್ಬರು ಯೋಧರು ಸ್ಥಳದಲ್ಲೇ ಮೃತ ಪಟ್ಟರೆ ಅರವಿಂದ್ ಕುಮಾರ್ ಮತ್ತು ಜಿ.ಎಸ್.ರಾಮ್ ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ ಎಂದು ಡಾ.ಸತ್ಯಪ್ರಕಾಶ್ ತಿಳಿಸಿದ್ದಾರೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...