ಭಟ್ಕಳ: ಬೈಕ್ ಹಾಗೂ ಬಸ್ ನಡುವೆ ಮುಖಾಮುಖಿ ಢಿಕ್ಕಿ:ಬೈಕ್ ಸವಾರ ಗಂಭೀರ

Source: SO NEWS | By MV Bhatkal | Published on 17th October 2021, 12:37 AM | Coastal News | Don't Miss |

ಭಟ್ಕಳ: ತಾಲೂಕಿನ ಸಾಗರ ರಸ್ತೆಯ ಅಗ್ನಿಶಾಮಕ ದಳದ ಕಛೇರಿ ಮುಂಬಾಗ ಅಪಾಯಕಾರಿ ತಿರುವಿನಲ್ಲಿ ಬೈಕ್ ಹಾಗೂ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿರುವ ಘಟನೆ ಶನಿವಾರ ಸಂಜೆ ನಡೆದಿದೆ. 

ಕೊಲ್ಲಾಪುರದದಿಂದ ಭಟ್ಕಳಕ್ಕೆ ಬಂದ ಸರ್ಕಾರಿ ಬಸ್ ಪ್ರಯಾಣಿಕನ್ನು ಬಿಟ್ಟು ಭಟ್ಕಳದ ಸಾಗರ ರಸ್ತೆಯ ಡಿಪ್ಪೋಗೆ ತೆರಳುವ ವೇಳೆ ಇಲ್ಲಿನ ಅಗ್ನಿಶಾಮಕ ದಳದ ಕಛೇರಿ ಮುಂಬಾಗದ ತಿರುವಿನಲ್ಲಿ ಎದುರಿನಿಂದ ಬಂದ ಬೈಕ್ ನಡುವೆ ಅಪಘಾತದ ಸಂಬವಿಸಿದೆ.

ಬೈಕ್ ಸವಾರ  ಭಾಸ್ಕರ ಮಾಲು ಮರಾಠಿ ಹೇಬರೆ ನಿವಾಸಿ ಎಂದು ತಿಳಿದು ಬಂದಿದೆ.

ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡಿದ್ದು ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ  ಉಡುಪಿಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. 

ಸ್ಥಳಕ್ಕೆ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,ಅಫಘಾತಕ್ಕೆ ಮುಖ್ಯ ಕಾರಣ ಯಾರಿಂದ ತಪ್ಪಾಗಿದೆ ಎಂಬ ಹೆಚ್ಚಿನ ಮಾಹಿತಿ ಪೊಲೀಸ ತನಿಖೆಯಿಂದ ತಿಳಿದು ಬರಬೇಕಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...