ಭಟ್ಕಳದಲ್ಲಿ ಬಿಜೆಪಿ ಅಭ್ಯರ್ಥಿ ಅನಂತಕುಮಾರ ಹೆಗಡೆ ರೋಡ್‍ಶೋ

Source: S.O. News Service | By I.G. Bhatkali | Published on 22nd April 2019, 1:23 AM | Coastal News |

ಭಟ್ಕಳ: ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾದ ರವಿವಾರ ಬಿಜೆಪಿ ಅಭ್ಯರ್ಥಿ ಅನಂತಕುಮಾರ ಹೆಗಡೆ ನೂರಾರು ಕಾರ್ಯಕರ್ತರೊಂದಿಗೆ ರೋಡ್ ಶೋ ನಡೆಸಿದರು.

ಮೂಡಭಟ್ಕಳ ಬೈಪಾಸ್‍ನಿಂದ ಮೆರವಣಿಗೆಯಲ್ಲಿ ಹೊರಟ ಬಿಜೆಪಿ ಕಾರ್ಯಕರ್ತರು ಪ್ರಧಾನಮಂತ್ರಿ ನರೇಂದ್ರ ಮೋದಿ ಪರ ಘೋಷಣೆಗಳನ್ನು ಕೂಗಿದರು. ನಂತರ ಇಲ್ಲಿನ ಹಳೆಯ ಬಸ್‍ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಇದು ಚುನಾವಣೆಯಲ್ಲ, ಯುದ್ಧ ಎಂದರು. ನನಗೆ ಮೋದಿ ಹೆಸರಿನಲ್ಲಿ ಮತ ಕೇಳಲು ಯಾವುದೇ ಅಂಜಿಕೆ ಇಲ್ಲ. ದೇಶವನ್ನು ಮೇಲಕ್ಕೆ ಎತ್ತಲು ಈ ಚುನಾವಣೆ ನಡೆಯುತ್ತಿದೆ. ಹಿಂದುತ್ವ, ಭಾರತೀಯತೆ ಬೇರೆ ಬೇರೆ ಅಲ್ಲ. ಬಡವರ ಹಾಗೂ ಹಳ್ಳಿಯ ಜನರ ಬದುಕನ್ನು ಬದಲಾಯಿಸುವ ಪ್ರಯತ್ನ ದೇಶದಲ್ಲಿ ನಡೆದಿದೆ. ಹಿಂದಿನ ವೈಭವದ ದಿನಗಳು ಮರುಕಳಿಸುತ್ತಿವೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜಿ.ನಾಯ್ಕ ಮಾತನಾಡಿ, ಜಿಲ್ಲೆಯಲ್ಲಿ ಜೆಡಿಎಸ್‍ಗೆ ಅಸ್ತಿತ್ವ ಇಲ್ಲ. ಈ ಚುನಾವಣೆಯನ್ನು ಬಿಜೆಪಿ ಗೆಲ್ಲುವುದು ಶತಸಿದ್ಧವಾಗಿದ್ದು, ಎಷ್ಟು ಮತಗಳ ಅಂತರದ ಗೆಲುವು ಎನ್ನುವುದಷ್ಟೇ ಈಗ ಮುಖ್ಯವಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಅತಿ ಹೆಚ್ಚಿನ ಮತಗಳ ಅಂತರದಿಂದ ಬಿಜೆಪಿಯನ್ನು ಗೆಲ್ಲಿಸಬೇಕಾಗಿದೆ ಎಂದರು. ಶಾಸಕ ಸುನಿಲ್ ನಾಯ್ಕ ಮಾತನಾಡಿ, ದೇಶದ ಜನರು ಎಚ್ಚೆತ್ತಿದ್ದು, ಪಕ್ಷದ ಕಾರ್ಯಕರ್ತರು ಇಂದಿನಿಂದ ಚುನಾವಣೆ ದಿನದವರೆಗೆ ಹೆಚ್ಚಿನ ಬದ್ಧತೆಯನ್ನು ತೋರಿಸಬೇಕು ಎಂದರು. ಕೃಷ್ಣ ನಾಯ್ಕ ಆಸರಕೇರಿ, ಗೋವಿಂದ ನಾಯ್ಕ, ರಾಜೇಶ ನಾಯ್ಕ, ಉಮೇಶ ನಾಯ್ಕ, ರವಿ ನಾಯ್ಕ ಜಾಲಿ ಮೊದಲಾದವರು ಉಪಸ್ಥಿತರಿದ್ದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...