ಲಕ್ನೋ: ಲೋಕಸಭಾ ಚುನಾವಣೆಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಬಿಜೆಪಿ ಸಂಸದರೊಬ್ಬರು ಬಿಜೆಪಿ ಕಚೇರಿಯ ಚೌಕೀದಾರ್ ಅಥವಾ ಕಾವಲುಗಾರನಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಬಗ್ಗೆ ವರದಿಯಾಗಿದೆ.
44 ವರ್ಷದ ಅಂಶುಲ್ ವರ್ಮಾ 2014ರ ಲೋಕಸಭಾ ಚುನಾವಣೆಯಲ್ಲಿ ಹರ್ದೋಯಿಯಿಂದ ಜಯ ಗಳಿಸಿದ್ದರು. ಆದರೆ ಈ ಬಾರಿ ಬಿಜೆಪಿಯು ಅವರಿಗೆ ಟಿಕೆಟ್ ನೀಡದೆ ಜೈ ಪ್ರಕಾಶ್ ರಾವತ್ ಎಂಬವರನ್ನು ಕಣಕ್ಕಿಳಿಸಿದೆ. ಇದರಿಂದ ಅಸಮಾಧಾನಗೊಂಡ ಅಂಶುಲ್ ವರ್ಮಾ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
“ನಾನು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ನಾನು ಅಂಶುಲ್ ಆಗಿಯೇ ಇರಲಿದ್ದೇನೆ. ನಾನು ನನ್ನನ್ನು ಚೌಕಿದಾರ್ ಎಂದು ಕರೆದುಕೊಳ್ಳಲು ಬಯಸುವುದಿಲ್ಲ” ಎಂದವರು ಹೇಳಿದರು.