ಒಂದೆರಡು ದಿನಗಳಲ್ಲಿ ಬಿಜೆಪಿ ಸರ್ಕಾರ ರಚನೆ; ಯಡಿಯೂರಪ್ಪನವರೇ ಮುಖ್ಯಮಂತ್ರಿ; ಮುರುಳಿಧರ ರಾವ್

Source: sonews | By Staff Correspondent | Published on 26th July 2019, 12:46 AM | State News | Don't Miss |

ಬೆಂಗಳೂರು: ಕರ್ನಾಟಕದಲ್ಲಿ ನೂತನ ಸರಕಾರ ರಚಿಸಲು ಬಿಜೆಪಿ ಒಂದೆರಡು ದಿನಗಳಲ್ಲಿ ಹಕ್ಕು ಮಂಡಿಸಲಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ಹಾಗು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೇ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗು ಕರ್ನಾಟಕದ ಉಸ್ತುವಾರಿ ಮುರಳೀಧರ್ ರಾವ್ ಅವರನ್ನು ಉಲ್ಲೇಖಿಸಿ ‘theprint.in’ ವರದಿ ಮಾಡಿದೆ.

ಕರ್ನಾಟಕದ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರಕಾರ ಮಂಗಳವಾರ ವಿಶ್ವಾಸಮತಯಾಚನೆಯಲ್ಲಿ ಸೋತು ಪತನಗೊಂಡ ಬಳಿಕ ಬಿಜೆಪಿ ಸರಕಾರ ರಚನೆಗೆ ಕ್ಷಣಗಣನೆ ಆರಂಭವಾಗಿತ್ತು. ಆದರೆ ಮೈತ್ರಿ ಸರಕಾರ ಪತನವಾಗಿ ಎರಡು ದಿನ ಕಳೆದರೂ ನೂತನ ಸರಕಾರ ರಚಿಸಲು ಮುಂದಾಗಲು ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ಹಸಿರು ನಿಶಾನೆ ತೋರಿಸಿರಲಿಲ್ಲ. ಹಾಗಾಗಿ ರಾಜ್ಯ ರಾಜಕೀಯ ವಲಯದಲ್ಲಿ ಮತ್ತು ಬಿಜೆಪಿ ಪಾಳಯದಲ್ಲಿ ಗೊಂದಲ ಸೃಷ್ಟಿಯಾಗಿತ್ತು. ಆದರೆ ಮುರಳೀಧರ್ ರಾವ್ ಅವರು ಗುರುವಾರ ಸಂಜೆ ಈ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. “ ನಾವು ಸರಕಾರ ರಚಿಸಲೇಬೇಕು. ಅದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಆದರೆ ಸರಕಾರ ರಚನೆಗೆ ಸಂಬಂಧಿಸಿದ ಕೆಲವು ಸಂಕೀರ್ಣಗಳನ್ನು ಸರಿಯಾಗಿ ನಿಭಾಯಿಸಬೇಕಾಗಿದೆ. ಅದಕ್ಕಾಗಿ ಪಕ್ಷದ ವರಿಷ್ಟರು ಎಲ್ಲರೊಂದಿಗೆ ಸಮಾಲೋಚಿಸುತ್ತಿದ್ದಾರೆ. ಒಂದೆರಡು ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮುರಳೀಧರ್ ರಾವ್ ಹೇಳಿದ್ದಾರೆ.

ಯಡಿಯೂರಪ್ಪರವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಕಳೆದ ಚುನಾವಣೆಯಲ್ಲಿ ನಾವು ಘೋಷಿಸಿದ್ದೇವೆ. ಈಗ ಶಾಸಕಾಂಗ ಪಕ್ಷದ ನಾಯಕ ಆಯ್ಕೆಯಾಗುವಾಗ ಈ ಬಗ್ಗೆ ಚರ್ಚಿಸುತ್ತೇವೆ. ಯಡಿಯೂರಪ್ಪ ಅವರಲ್ಲದೆ ಮುಖ್ಯಮಂತ್ರಿ ಹುದ್ದೆಗೆ ಬೇರೆ ನಾಯಕರಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಈ ಬಗ್ಗೆ ಶೀಘ್ರವೇ ಪಕ್ಷದ ಕೇಂದ್ರೀಯ ಸಂಸದೀಯ ಮಂಡಳಿಯ ಸಭೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...