ಹೊಸದಿಲ್ಲಿ:ಬಿಜೆಪಿ ರಾಷ್ಟ್ರೀಯ ಪ್ರ. ಸಂಘಟನಾ ಕಾರ್ಯದರ್ಶಿಯಾಗಿ ಕರ್ನಾಟಕ ಮೂಲದ ಬಿ.ಎಲ್ ಸಂತೋಷ್ ನೇಮಕ

Source: sonews | By Staff Correspondent | Published on 14th July 2019, 10:37 PM | National News | Don't Miss |

ಹೊಸದಿಲ್ಲಿ: ಕಳೆದ 13 ವರ್ಷಗಳಿಂದ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ ರಾಮಲಾಲ್ ಹುದ್ದೆ ತೊರೆದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಬಿಎಲ್ ಸಂತೋಷ್‌ರನ್ನು ನೇಮಕ ಮಾಡಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಆದೇಶ ಹೊರಡಿಸಿದ್ದಾರೆ.

ಸಂತೋಷ್ ಪಕ್ಷದ ಜಂಟಿ ಕಾರ್ಯದರ್ಶಿ(ಸಂಘಟನೆ)ಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ರಾಮಲಾಲ್ ಆರೆಸ್ಸೆಸ್‌ಗೆ ಮರಳುವ ಇಚ್ಛೆ ವ್ಯಕ್ತಪಡಿಸಿ, ತನ್ನನ್ನು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸುವಂತೆ ಅಮಿತ್ ಶಾಗೆ ಪತ್ರ ಬರೆದಿದ್ದರು. ಸಂತೋಷ್ ತಕ್ಷಣದಿಂದಲೇ ಪ್ರಧಾನ ಕಾರ್ಯದರ್ಶಿ ಹುದ್ದೆ ವಹಿಸುತ್ತಾರೆ ಎಂದು ಬಿಜೆಪಿ ಹೇಳಿಕೆಯಲ್ಲಿ ತಿಳಿಸಿದೆ.

ಕರ್ನಾಟಕ ಮೂಲದವರಾದ ಸಂತೋಷ್ 2006ರಿಂದ 2014ರವರೆಗೆ ಕರ್ನಾಟಕದಲ್ಲಿ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದರು. ಪ್ರಧಾನಿ ಮೋದಿ ಹಾಗೂ ಪಕ್ಷಾಧ್ಯಕ್ಷ ಅಮಿತ್ ಶಾ ಇಬ್ಬರಿಗೂ ನಿಕಟವಾಗಿರುವ ಸಂತೋಷ್ ಅವರ ಅಭಿಪ್ರಾಯವನ್ನು ಆಧರಿಸಿ ದಕ್ಷಿಣ ರಾಜ್ಯಗಳಿಗೆ ಸಂಬಂಧಿಸಿದ ನಿರ್ಧಾರವನ್ನು ಪಕ್ಷದ ಹೈಕಮಾಂಡ್ ಕೈಗೊಳ್ಳುತ್ತಿತ್ತು. 2014ರಲ್ಲಿ ಸಂತೋಷ್‌ರನ್ನು ಜಂಟಿ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿತ್ತು.

ಬಿಜೆಪಿಯ ಸಾಂಸ್ಥಿಕ ಚುನಾವಣೆ ಮುಂದಿನ ತಿಂಗಳು ನಡೆಯಲಿದ್ದು ಕೇಂದ್ರ ಸಚಿವ ಸಂಪುಟದ ಸದಸ್ಯರಾಗಿರುವ ಅಮಿತ್ ಶಾ ಪಕ್ಷಾಧ್ಯಕ್ಷತೆ ತ್ಯಜಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಪಕ್ಷವನ್ನು ಸಂಘಟಿಸುವ ಹೊಣೆಗಾರಿಕೆ ಸಂತೋಷ್ ಹೆಗಲಮೇಲಿದೆ ಎಂದು ಮೂಲಗಳು ತಿಳಿಸಿವೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...