ಅಗತ್ಯ ಸೇವೆಗೆ ಮಾತ್ರ ಬಿ.ಎಂ.ಟಿ.ಸಿ. : ಡಿ.ಸಿ.ಎಂ ಸವದಿ

Source: sonews | By Staff Correspondent | Published on 26th March 2020, 7:13 PM | State News |

ಬೆಂಗಳೂರು: ಇಂದಿನಿಂದ ಅಗತ್ಯ ಸೇವೆ ನೀಡುವವರಿಗಾಗಿ ಕೆಲವು ನಿರ್ದಿಷ್ಟ ಮಾರ್ಗಗಳಲ್ಲಿ ಬಿ.ಎಂ.ಟಿ.ಸಿ. ಬಸ್ಸುಗಳು    ಕಾರ್ಯನಿರ್ವಹಿಸಲಿವೆ.
 
ಇಂದಿನಿಂದ ಬಿಎಂಟಿಸಿ ಸೇವೆ ಇರೋದು ಜನಸಾಮಾನ್ಯರಿಗಲ್ಲ... ಕೇವಲ ಅವಶ್ಯಕ ಸೇವೆಗಳ ನೌಕರರಿಗೆ ಮಾತ್ರ... ಜೊತೆಗೆ, ವೈದ್ಯರು, ದಾದಿಯರು, ಆಸ್ಪತ್ರೆ ನೌಕರರು, ಸೆಕ್ಯೂರಿಟಿ ಗಾರ್ಡ್ಗಳು, ಬ್ಯಾಂಕ್ ಉದ್ಯೋಗಿಗಳು, ಹಾಗೂ ಮಾಧ್ಯಮದವರಿಗೆ ಮಾತ್ರ ಈ ಬಿಎಂಟಿಸಿಯಲ್ಲಿ ಪ್ರಯಾಣಿಸಲು ಸಾಧ್ಯ.... ಯಾವುದೇ ಕಾರಣಕ್ಕೂ ಮನೆಯಿಂದ ಜನಸಾಮಾನ್ಯರು ಹೊರಗೆ ಬರಬೇಡಿ..

ಪ್ರತಿ ಬಸ್ಸಿನಲ್ಲಿ ಗರಿಷ್ಠ 20 ಜನ ಮಾತ್ರ ಪ್ರಯಾಣಿಸಬಹುದಾಗಿರುತ್ತದೆ. ಬಸ್ಸನ್ನು ಚಲಾಯಿಸುವ ಎಲ್ಲ ಚಾಲಕ ನಿರ್ವಹಕರುಗಳಿಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಸೂಕ್ತ    ನಿರ್ದೇಶನಗಳನ್ನು ನೀಡಲಾಗಿದೆ.

ಪ್ರತಿಯೊಂದು ವಾಹನದಲ್ಲಿ 20 ಕ್ಕಿಂತ ಮೀರದಂತೆ ಪ್ರಯಾಣಿಕರು.
ಪೊಲೀಸ್ ಸಿಬ್ಬಂದಿ, ಆಸ್ಪತ್ರೆ ಸಿಬ್ಬಂದಿ, ಮೆಡಿಕಲ್ ಶಾಪ್, ಕಾರ್ಪೊರೇಷನ್, ಮೆಟ್ರೋ ಸಿಬ್ಬಂದಿ, ಖಾಸಗಿ ಸೆಕ್ಯೂರಿಟಿ ಗಾರ್ಡ್,ಬ್ಯಾಂಕ್ ಸಿಬ್ಬಂದಿ, ರಕ್ತ ದಾನಿಗಳು, ಅಲ್ಲದೆ ಆಸ್ಪತ್ರೆಗೆ ಭೇಟಿ ನೀಡುವ ನಾಗರೀಕರು, ರೋಗಿಗಳನ್ನು ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಇವರಲ್ಲದೆ ಪೊಲೀಸ್ ಇಲಾಖೆಯಿಂದ ಪಾಸ್ ಪಡೆದಿರುವ ಅಂಗಡಿ ಕಾರ್ಮಿಕರು, ಡೆಲಿವರಿ ಹುಡುಗರು, ಪೆಟ್ರೋಲ್ ಬಂಕ್ ಸಿಬ್ಬಂದಿ, ಹೋಟೆಲ್ ಸಿಬ್ಬಂದಿಯನ್ನು ಮಾತ್ರ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ರಾಜ್ಯದೆಲ್ಲೆಡೆ ಕೊರೊನ ಮಹಾಮಾರಿಯನ್ನು ತಡೆಯ್ಯುವ ಪ್ರಯುಕ್ತ ಲಾಕ್ ಡೌನ್  ಘೋಷಿಸಿದೆ.ಇದರ ನಡುವೆ ತುರ್ತು ಸೇವೆಗಳ ಸೌಲಭ್ಯಗಳನ್ನು ಒದಗಿಸುವ ದೃಷ್ಟಿಯಿಂದ ಬಿಎಂಟಿಸಿ ಯ ಬಸ್ಸುಗಳನ್ನು ಕಾರ್ಯಾಚರಣೆ ಗೊಳಿಸಲಾಗುತ್ತಿದೆ. ಸದರಿ ಸೇವೆಯು ತುರ್ತು ಸೇವೆಗಳ ಸೌಲಭ್ಯಗಳನ್ನು ಒದಗಿಸುವ ಸಿಬ್ಬಂದಿಗಳಿಗೆ ಮಾತ್ರ ಸೀಮಿತವಾಗಿರುತ್ತದೆ. ಈ ಸೇವೆ ಪಡೆಯಲು ಪೊಲೀಸ್ ಸಂಸ್ಥೆ ವಿತರಿಸಿರುವ ಗುರುತಿನ ಚೀಟಿ ಅತ್ಯಾವಶ್ಯವಾಗಿರುತ್ತದೆ
ದಯವಿಟ್ಟು ಸಾರ್ವಜನಿಕರು ಪರಿಸ್ಥಿತಿಯ ಗಂಭೀರತೆಯನ್ನು ಅರಿತುಕೊಂಡು ಸಹಕರಿಸಬೇಕಾಗಿ ವಿನಂತಿ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...