ಬೆಂಗಳೂರು: ಕೋವಿಡ್ ಎರಡನೇ ಅಲೆ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜಾತ್ರೆಗಳನ್ನು ನಿಷೇಧಿಸಲಾಗಿದೆ. ಅಲ್ಲದೆ, ಮದುವೆ ಸಮಾರಂಭಗಳಿಗೂ ನಿರ್ಬಂಧ ಹೇರಲು ರಾಜ್ಯ ಸರಕಾರ ತೀರ್ಮಾನಿಸಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಶನಿವಾರ ವಿಕಾಸಸೌಧದಲ್ಲಿ ಕೋವಿಡ್ ಪರಿಸ್ಥಿತಿಯ ಕುರಿತು ಗೃಹ ಸಚಿವ ಬಸವರಾಜ
ಮದುವೆಗೆ ಕಲ್ಯಾಣ ಮಂಟಪ ಬುಕ್ಗೆ ಅನುಮತಿ ಕಡ್ಡಾಯ ಮದುವೆಗೆ ಕಲ್ಯಾಣ ಮಂಟಪ ಬುಕ್ ಮಾಡಲು ಜಿಲ್ಲಾಧಿಕಾರಿಗಳ ಅನುಮತಿ ಕಡ್ಡಾಯ. ಜಿಲ್ಲಾಡಳಿತ ನಿಗದಿತ ಸಂಖ್ಯೆಯ ಪಾಸ್ ವಿತರಿಸಲಿದೆ. ಈಗಾಗಲೇ ಬುಕ್ ಮಾಡಿದ್ದರೆ ಸಮಸ್ಯೆ ಇಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. |
ಬೊಮ್ಮಾಯಿ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಜೊತೆ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೊ ಸಂವಾದ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಾತ್ರೆಗಳನ್ನು ನಿಷೇಧಿಸಿದ್ದು, ಅದನ್ನು ಮೀರಿ ಜಾತ್ರೆಗಳು ನಡೆದರೆ ಅದಕ್ಕೆ ಜಿಲ್ಲಾಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಎಚ್ಚರಿಸಿದರು.
ಎಫ್ಐಆರ್ ದಾಖಲು: ಮದುವೆ ಸಮಾರಂಭಗಳಲ್ಲಿ ಜನರನ್ನು ನಿಯಂತ್ರಿಸದಿದ್ದರೆ ಎಫ್ಐಆರ್ ದಾಖಲಿಸಲಾಗು ವುದು, ಮದುವೆಗೆ ಬರುವವರಿಗೆ ಪಾಸ್ ನೀಡಲಾಗುವುದು.
ಒಂದು ವೇಳೆ ಹೆಚ್ಚುವರಿ ಪಾಸ್ ನೀಡಿದರೆ ಅಂತಹ ಕಲ್ಯಾಣ ಮಂಟಪಗಳ ಮಾಲಕರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವ ಆರ್. ಅಶೋಕ್ ಎಚ್ಚರಿಕೆ ನೀಡಿದರು. ಕೊರೋನ ಎರಡನೇ ಅಲೆ ನಿಯಂತ್ರಿಸಲು ಸರಕಾರ ತೆಗೆದುಕೊಂಡ ಕ್ರಮಗಳನ್ನು ಕಟ್ಟುನಿಟ್ಟಾಗಿ ಎಲ್ಲರೂ ಪಾಲಿಸಬೇಕು. ಅಲ್ಲದೆ, ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಸೋಂಕು ತಡೆಗಟ್ಟುವ ಉದ್ದೇಶದಿಂದ ಬರ್ತ್ಡೇ ಪಾರ್ಟಿ, ಧಾರ್ಮಿಕ ಸಮಾರಂಭಗಳಿಗೂ ಮೇಲ್ಕಂಡ ನೀತಿ ಅನ್ವಯವಾಗಲಿದೆ ಎಂದರು.