ಭಟ್ಕಳ ತಾಲೂಕಾ ಆಸ್ಪತ್ರೆಯಲ್ಲಿ ಸ್ತನ ಕ್ಯಾನ್ಸರ್ ಜಾಗೃತಿ ಮಾಸಾಚರಣೆ

Source: S.O. News Service | By MV Bhatkal | Published on 19th October 2021, 12:08 PM | Coastal News | Don't Miss |


ಭಟ್ಕಳ:ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರವಾರ ಮತ್ತು ತಾಲೂಕಾಸ್ಪತ್ರೆ ಭಟ್ಕಳ ವತಿಯಿಂದ ಸ್ತನ ಕ್ಯಾನ್ಸರ್ ಜಾಗ್ರತಿ ಮಾಸಾಚಾರಣೆಯನ್ನು ಭಟ್ಕಳ ತಾಲೂಕಾಸ್ಪತ್ರೆಯಲ್ಲಿ ನಡೆಸಲಾಯಿತು. 


ಕಾರ್ಯಕ್ರಮವನ್ನು ಸಹಾಯಕ ಆಯುಕ್ತೆ ಮಮತಾ ದೇವಿ ಜಿ.ಎಸ್ ಉದ್ಘಾಟಿಸಿ ಮಾತನಾಡಿದ್ದು'ಸ್ತನ ಕ್ಯಾನ್ಸರ್ ಜಾಗ್ರತಿ ಮಾಸಾಚಾರಣೆಯನ್ನು ಆರೋಗ್ಯ ಇಲಾಖೆ ವತಿಯಿಂದ ಪ್ರತಿ ವರ್ಷ ಆಕ್ಟೋಬರ್ ತಿಂಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಸ್ತನ ಕ್ಯಾನ್ಸರ್ ಎನ್ನುವುದು ಗಂಭೀರ ವಿಷಯವಾಗಿದ್ದು ಅದನ್ನು ನಾವು ಅಪಾಯಕಾರಿ ಮಟ್ಟಕ್ಕೆ ತೆಗೆದುಕೊಂಡು ಹೋಗದೆ ಸರಿಯಾದ ಸಮಯದಲ್ಲಿ ಚಿಕಿತ್ಸೆ ಪಡೆದುಕೊಳ್ಳ ಬೇಕು ಎಂದ ಅವರು ಸಾಮಾನ್ಯ ನಮ್ಮ ಆರೋಗ್ಯ ತಪಾಸಣೆಯಲ್ಲೇ ಇದು ಒಂದು ಭಾಗವಾಗಿದ್ದು, ಈ ಸಮಸ್ಯೆಯನ್ನು ಯಾರೊಂದಿಗಾದರು ಹಂಚಿಕೊಳ್ಳಲು ಹಿಂಜರಿ ಮಾಡಿಕೊಳ್ಳದೇ ವೈದ್ಯರ ಬಳಿ ನಿಮ್ಮ ಸಮಸ್ಯೆ ಬಗ್ಗೆ ಹೇಳಿ ಸರಿಯಾದ ಚಿಕಿತ್ಸೆ ಪಡೆದುಕೊಳ್ಳಿ ಹಾಗೂ ತಾಲೂಕಾಸ್ಪತ್ರೆಯಿಂದ ಹಮ್ಮಿಕೊಂಡ ಜಾಗ್ರತಿ ಮಾಸಾಚಾರಣೆ ಸಾಕಷ್ಟು ಪರಿಣಾಮಕಾರಿಯಾಗಿ ಸಮಾಜದ ಹೆಣ್ಣು ಮಕ್ಕಳಿಗೆ ಸರಿಯಾಗಿ ತಲುಪಬೇಕು ಮತ್ತು ಈ ಸಮಸ್ಯೆ ಬಂದ ಯಾವುದೇ ಹೆಣ್ಣು ಮಕ್ಕಳು ಹಿಂಜರಿಯದೆ ತಾಲೂಕಾಸ್ಪತ್ರೆಗೆ ಬಂದು ವೈದ್ಯರ ಬಳಿ ಸರಿಯಾದ ಸಲಹೆ ಪಡೆದುಕೊಳ್ಳಿ ಎಂದರು. 

 


ನಂತರ ಮಾತನಾಡಿದ ಸ್ತ್ರಿರೋಗ ತಜ್ಞೆ ಡಾ. ಶಮ್ಸ್‌ ನೂರ್‌ ಕಾರ್ಯಕ್ರಮದಲ್ಲಿ ಭಾಗವಹಿದ್ದ ಮಹಿಳೆಯರಿಗೆ ಸ್ತನ ಕ್ಯಾನ್ಸರ್ ಬಗ್ಗೆ ಮಾಹಿತಿ ನೀಡಿ ಅರಿವು ಮೂಡಿಸುವುದರ ಜೊತೆಯಲ್ಲಿ ಈ ಸಮಸ್ಯೆಯಿಂದ ಬಳಲುವ ಮಹಿಳೆಯರು ಅಥವಾ ಹೆಣ್ಣು ಮಕ್ಕಳು ಮುಜುಗರ ಮರೆತು ವೈದ್ಯರ ಬಳಿ ಬಂದು ಸರಿಯಾದ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು. 
ನಂತರ ಕಾರ್ಯಕ್ರಮದ ಬಳಿಕ ತಾಲೂಕಾಸ್ಪತ್ರೆಯಿಂದ ಚಾಲನೆಗೊಂಡ ಜಾಗ್ರತಿ ಜಾಥಾ ಸಂತೆ ಮಾರುಕಟ್ಟೆ ಮೂಲಕ ತಾಲೂಕಾ ಪಂಚಾಯತ ಮಾರ್ಗವಾಗಿ ಸಂಶುದ್ದೀನ್ ಸರ್ಕಲ್ ಮೂಲಕ ಪುನಃ ತಾಲೂಕಾಸ್ಪತ್ರೆಗೆ ತೆರಳಿ ಜಾಥಾ ಮುಕ್ತಾಯಗೊಂಡಿತು. 
ಈ‌ ಸಂಧರ್ಭದಲ್ಲಿ ತಾಲೂಕಾಸ್ಪತ್ರೆಯ ವೈದ್ಯಾಧಿಕಾರಿ ಡಾ.ಸವಿತಾ ಕಾಮತ್, ಆರ್.ಎಫ್.ಓ ಸವಿತಾ ದೇವಾಡಿಗೆ, ನಗರ ಠಾಣೆಯ ಪಿ.ಎಸ್.ಐ ಸುಮಾ ಬಿ,ಗ್ರಾಮೀಣ ಠಾಣೆ ಪಿ.ಎಸ್.ಐ ರತ್ನಾ ಕುರಿ, ಸಿಡಿಪಿಒ ಸುಶೀಲ ಮೊಗೇರ,ಹಾಗೂ  ಆಶಾ ಕಾರ್ಯಕರ್ತರು, ಅಂಗನವಾಡಿ ಶಿಕ್ಷಕರು, ಮಹಿಳಾ ಪೊಲೀಸ ಸಿಬ್ಬಂದಿ, ಮತ್ತು ತಾಲೂಕಾಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಕಾರವಾರ: ಚುನಾವಣಾ ವೀಕ್ಷಕರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ವೀಕ್ಷಣೆ; 17 ನಾಮಪತ್ರಗಳು ತಿರಸ್ಕೃತ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸದಂತೆ ಜಿಲ್ಲೆಗೆ ಭಾರತ ಚುನಾವಣಾ ಆಯೋಗದಿಂದ ವೀಕ್ಷಕರಾಗಿ ನೇಮಕಗೊಂಡಿರುವ ರಾಜೀವ್ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...