ಮಂಡ್ಯ ಜಿಲ್ಲಾ ಪಂಚಾಯತ್ ಬಜೆಟ್ ಮಂಡನೆ

Source: so news | By MV Bhatkal | Published on 19th June 2019, 9:17 PM | State News | Don't Miss |

ಮಂಡ್ಯ: 2019-20ನೇ ಸಾಲಿನ ಅಯವ್ಯಯವನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ನಾಗರತ್ನಸ್ವಾಮಿ ಅವರು ಇಂದು ಬೆಳಿಗ್ಗೆ ಜಿ.ಪಂ.ನ ಕಾವೇರಿ ಸಭಾಂಗಣದಲ್ಲಿ ತಮ್ಮ ರೂ. 90802.60 ಲಕ್ಷ ಆಯವ್ಯಯವನ್ನು ಮಂಡಿಸಿದರು. 
ಜಿಲ್ಲಾ ಪಂಚಾಯತ್ ಕಾರ್ಯಕ್ರಮಗಳಿಗೆ ರೂ. 29302.34 ಲಕ್ಷಗಳು, ತಾಲ್ಲೂಕು ಪಂಚಾಯಿತಿಗೆ ರೂ 61386.26 ಲಕ್ಷಗಳು, ಗ್ರಾಮ ಪಂಚಾಯಿತಿಗೆ ರೂ. 114 ಲಕ್ಷಗಳು ಮೀಸಲಿರಿಸಿದರು. ಅಂದರೆ 2019-20ನೇ ಸಾಲಿನ ಆಯವ್ಯದಲ್ಲಿ ಜಿಲ್ಲಾ ಪಂಚಾಯತ್ ಕಾರ್ಯಗಳಿಗೆ ಶೇ.32.27, ತಾಲ್ಲೂಕು ಪಂಚಾಯತ್ ಕಾರ್ಯಗಳಿಗೆ ಶೇ,67.60 ಹಾಗೂ ಗ್ರಾಮ ಪಂಚಾಯತ್ ಕಾರ್ಯಗಳಿಗೆ ಶೇ.0.13ರಷ್ಟು ಅನುದಾನ ಹಂಚಿಕೆ ಮಾಡಲಾಯಿತು.
ಕಳೆದ ವರ್ಷಕ್ಕಿಂತ ಈ ಬಾರಿ 130.74.17 ಲಕ್ಷಗಳ ಅನುದಾನ ಹೆಚ್ಚುವರಿಯಾಗಿ ಜಿಲ್ಲಾ ಪಂಚಾಯತ್‍ಗೆ ದೊರಕಿದ್ದು, ಪ್ರಸಕ್ತ ಸಾಲಿನಲ್ಲಿ ಬಿಡುಗಡೆಯಾಗಿರುವ ಅನುದಾನವನ್ನು ಜಿ.ಪಂ. ವ್ಯಾಪ್ತಿಯ 28 ಇಲಾಖೆಗಳಿಗೆ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರು ತಿಳಿಸಿದರು. 
28 ಇಲಾಖೆಗಳ ಪೈಕಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಭಿವೃದ್ಧಿ ಹಾಗೂ ನಿರ್ವಹಣೆಗಾಗಿ ಪ್ರಸಕ್ತ ಸಾಲಿನಲ್ಲಿ 4,318 ಲಕ್ಷ, ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆಗೆ 7.9ಲಕ್ಷ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ 195.01ಲಕ್ಷ, ಆರೋಗ್ಯ ಇಲಾಖೆಗೆ 4,784.72 ಲಕ್ಷ, ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಗೆ 246.05 ಕೋಟಿ ರೂ.ಗಳ ಅನುದಾನ, ಸಮಾಜ ಕಲ್ಯಾಣ ಇಲಾಖೆಗೆ 1888.67 ಲಕ್ಷ ಅನುದಾನ ಹಂಚಿಕೆ ಮಾಡಲಾಗಿದೆ ಎಂದು ಅವರ ವಿವರಿಸಿದರು. 
ಶಿಕ್ಷಣ ಇಲಾಖೆಗೆ ಹೆಚ್ಚು ಒತ್ತು ನೀಡಲಾಗಿದೆ.
2018-19ನೇ ಸಾಲಿನಲ್ಲಿ ಶಿಕ್ಷಣ ಇಲಾಖೆ ಕಾರ್ಯಗಳಿಗೆ 43692 ಲಕ್ಷಗಳ ಅನುದಾನ ನಿಗದಿಪಡಿಸಲಾಗಿತ್ತು. ಆದರೆ ಈ ಸಾಲಿನಲ್ಲಿ ಶಿಕ್ಷಣ ಇಲಾಖೆಯ ಎಲ್ಲಾ ಕಾರ್ಯಕ್ರಮಗಳಿಗೆ 52268 ಲಕ್ಷಗಳನ್ನು ನಿಯೋಜಿಸಲಾಗಿದೆ. 
ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ 93,980 ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ಮತ್ತು ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ 1,16,272 ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳನ್ನು ವಿತರಿಸಲಾಗಿದೆ. ವಾರದಲ್ಲಿ ಐದು ದಿನಗಳು ಸರ್ಕಾರಿ ಮತ್ತು ಅನುದಾನಿತ ಶಾಲೆಯ 1ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಕ್ಷೀರಭಾಗ್ಯ ಯೋಜನೆಯಡಿ ಹಾಲು ವಿತರಣೆ ಮಾಡಲಾಗಿದೆ. ಈ ಎಲ್ಲ ಯೋಜನೆಗೆ 6318 ಲಕ್ಷಗಳನ್ನು ಹಂಚಿಕೆ ಮಾಡಲಾಗಿದೆ.
ಜಿಲ್ಲೆಯ 15ರಿಂದ 35 ವಯೋಮಿತಿಯ ಯುವ ಜನರಿಗೆ ಯುವ ಚಟುವಟಿಕೆ ಗಳನ್ನು ಸಂಘಟಿಸಲು ಹಾಗೂ ಭಾಗವಹಿಸಲು ಅಗತ್ಯವಿರುವ ಮಾರ್ಗದರ್ಶನ ನೀಡುವ ಮತ್ತು ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ 195.01 ಲಕ್ಷವನ್ನು ಒದಗಿಸಲಾಗಿದೆ. ಈ ಅನುದಾನವನ್ನು ಕ್ರಿಯಾ ಯೋಜನೆಯಲ್ಲಿ ಅಳವಡಿಸಿ ಕೊಂಡಿರುವಂತೆ ಅನುಮೊದನೆ ಪಡೆದು ವೆಚ್ಚ ಭರಿಸಲು ಕ್ರಮ ವಹಿಸಲಾಗುತ್ತದೆ.
ಆರೋಗ್ಯ ಇಲಾಖೆಯ ಕಾರ್ಯಕ್ರಮಗಳಿಗೆ ಜಿಪಂ ಲೆಕ್ಕ ಶೀರ್ಷಿಕೆಗಳಿಗೆ ರೂ.4784 ಲಕ್ಷಗಳು ಮತ್ತು ತಾಪಂ ಲೆಕ್ಕ ಶೀರ್ಷಿಕೆಗಳಿಗೆ 220 ಲಕ್ಷ ರೂ.ಗಳು ಹಾಗೂ ಕುಟುಂ ಕಲ್ಯಾಣ ಕಾರ್ಯಕ್ರಮದ ಲ್ಕ ಶೀರ್ಷಿಕೆಗಳಿಗೆ 16662 ಲಕ್ಷಗಳು (ಕೇಂದ್ರ ಪುರಸ್ಕøತ ಯೋಜನೆ) ಅನುದಾನ ಸೇರಿ 6666 ಲಕ್ಷಗಳು ನಿಗದಿಯಾ ಗಿದ್ದು, ಇದರಲ್ಲಿ ಆರೋಗ್ಯ ಇಲಾಖೆಯ ಕಟ್ಟಡಗಳ ದುರಸ್ಥಿಗಾಗಿ 52 ಲಕ್ಷ, ಸಲಕರಣೆಗಳ ಖರೀದಿ ಮತ್ತು ರಿಪೇರಿಗಾಗಿ 21ಲಕ್ಷ ಹಾಗೂ ತಾಪಂ ಲೆಕ್ಕ ಶೀಷಿಕೆಯಡಿಯಲ್ಲಿ ಸಾಮಾಗ್ರಿಗಳ ಖರೀದಿಗಾಗಿ 21ಲಕ್ಷಗಳನ್ನು ಒದಗಿಸಲಾಗಿದೆ.
ಗ್ರಾಮೀಣ ಕುಡಿಯುವ ನೀರು ಪೂರೈಕೆ ಯೋಜೆಗಳ ಕ್ರಿಯಾ ಯೋಜನೆಗಳ ಕ್ರಿಯಾ ಯೋಜನೆ ರೂಪಿಸಲು 246.05 ಕೋಟಿಗಳ ಅನುದಾನ ಹಂಚಿಕೆ ಮಾಡಲಾಗಿದ್ದು, ಅದರಲ್ಲಿ ಬಹು ಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ ರೂ.19030 ಕೋಟಿಗಳಾಗಿದ್ದು, ಲೆಕ್ಕ ಶೀರ್ಷಿಕೆ 2215ರಡಿಯಲ್ಲಿ ರೂ.9.78ಕೋಟಗಳನ್ನು 4215ರಡಿಯಲ್ಲಿ ರೂ 30.02 ಕೋಟಿಗಳನ್ನು ಎಸ್‍ಡಿಪಿ ಯೋಜನೆಯಡಿ ರೂ15.96 ಕೋಟಿಗಳನ್ನುನಿಗದಿಪಡಿಸಲಾಗಿದೆ.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಗಾಯತ್ರಿ ರೇವಣ್ಣ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಯಾಲಕ್ಕಿಗೌಡ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶಿವಪ್ರಕಾಶ್, ರವಿ ಇತರರು ಉಪಸ್ಥಿತರಿದ್ದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...