ಬಸ್ಸಿನ ಬಾಗಿಲು ತಗುಲಿ ಪಾದಚಾರಿ ಸಾವು

Source: s o news | By MV Bhatkal | Published on 24th May 2017, 1:24 AM | Coastal News | Don't Miss |

ಭಟ್ಕಳ: ಚಲಿಸುತ್ತಿದ್ದ ಖಾಸಗಿ ಬಸ್ಸೊಂದರ ಬಾಗಿಲು ತಗುಲಿ ಪಾದಚಾರಿಯೋರ್ವ ಗಂಭೀರವಾಗಿ ಗಾಯಗೊಂಡು ಸಾವಿಗೀಡಾಗಿರುವ ಘಟನೆ ಮಂಗಳವಾರ ರಾತ್ರಿ 8.30 ಸುಮಾರಿಗೆ ತಾಲೂಕಿನ ಮದೀನಾಕಾಲೋನಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.


 ಮೃತ ವ್ಯಕ್ತಿಯನ್ನು ತಾಲೂಕಿನ ಶಿರಾಲಿ ನಿವಾಸಿ ಮೋಹನ ದೇವಪ್ಪ ಮೊಗೇರ (30) ಎಂದು ಗುರುತಿಸಲಾಗಿದೆ. ಚಾಲಕನ ನಿರ್ಲಕ್ಷ್ಯ, ಚಲಿಸುತ್ತಿದ್ದ ಬಸ್ಸಿನ ಬಾಗಿಲು ತೆರೆದುಕೊಂಡಿದ್ದೇ ಘಟನೆಗೆ ಕಾರಣ ಎಂದು ತಿಳಿದು ಬಂದಿದೆ. ಬಸ್ಸಿನ ಎಡ ಬದಿಯ ಲಗೇಜ್ ಬಾಗಿಲು ತುಂಡಾಗಿ ಕೆಳಕ್ಕೆ ಬಿದ್ದಿದೆ. ಬಸ್ಸಿನಿಂದಿಳಿದು ಚಾಲಕ ಪರಾರಿಯಾಗಿದ್ದಾನೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Read These Next

ಕಾರವಾರ: ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಮತದಾನ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ , ಸಾರ್ವಜನಿಕರು ಹೆಚ್ಚಿನ ...