ಖತರ್‌ನಲ್ಲಿ ಭಾರತೀಯ ಉತ್ಪನ್ನಗಳ ಬಹಿಷ್ಕಾರಕ್ಕೆ ಕರೆ ಭಾರತದ ರಾಯಭಾರಿ ಕಚೇರಿ ಖಂಡನೆ

Source: VB | Published on 30th September 2021, 8:30 PM | National News | Gulf News |

ಹೊಸದಿಲ್ಲಿ: ಭಾರತೀಯ ಉತ್ಪನ್ನಗಳನ್ನು ಬಹಿಷ್ಕರಿಸಲು ಕರೆ ನೀಡುವ ಅರೇಬಿಕ್ ಟ್ವಿಟರ್ ಹ್ಯಾಶ್ ಟ್ಯಾಗ್ ಬಗ್ಗೆ ಸುಮಾರು 1 ವರ್ಷದ ಬಳಿಕ ಎಚ್ಚರಿಕೆ ನೀಡಿರುವ ಖತರ್‌ನಲ್ಲಿನ ಭಾರತೀಯ ರಾಯಭಾರಿ ಕಚೇರಿ, ಇದು ಭಾರತದ ವಿರುದ್ದದ ಸುಳ್ಳುಪ್ರಚಾರವಾಗಿದೆ ಎಂದು ಪ್ರತಿಕ್ರಿಯಿಸಿದೆ.

ಸಾಮಾಜಿಕ ಮಾಧ್ಯಮದ ಮೂಲಕ ಭಾರತದ ಬಗ್ಗೆ ಸುಳ್ಳು ಸುದ್ದಿ ಪ್ರಚಾರ ಮಾಡಿ ದ್ವೇಷ ಮತ್ತು ಅಸಾಮರಸ್ಯ ಹರಡುವ ದುರುದ್ದೇಶಪೂರಿತ ಪ್ರಯತ್ನ ನಡೆಯುತ್ತಿದೆ ಎಂದು ಖತ‌ನಲ್ಲಿನ ಭಾರತೀಯ ದೂತಾವಾಸ ಮಂಗಳವಾರ ಟ್ವಿಟ್ ಮಾಡಿದೆ. ಇಂತಹ ಸುಳ್ಳು ಸುದ್ದಿ, ಪ್ರಚಾರ, ತಿರುಚಿದ ವೀಡಿಯೊಗಳನ್ನು ನಂಬಿ ಮೋಸಹೋಗದಂತೆ ಎಲ್ಲರೂ ಎಚ್ಚರಿಕೆ ವಹಿಸಬೇಕು. ಎಲ್ಲಾ ಭಾರತೀಯ ಪ್ರಜೆಗಳೂ ಏಕತೆ ಮತ್ತು ಸಾಮರಸ್ಯ ಕಾಪಾಡಿಕೊಳ್ಳಬೇಕು ಎಂದು ಟ್ವಿಟ್‌ನಲ್ಲಿ ತಿಳಿಸಲಾಗಿದೆ. ಸುಮಾರು 15 ನಿಮಿಷದ ಬಳಿಕ ಇದೇ ಟೀಟ್ ಅನ್ನು ಅರೇಬಿಕ್‌ನಲ್ಲೂ ಮಾಡಲಾಗಿದೆ.

ಬಾಯ್ಕಾಟ್ ಇಂಡಿಯನ್ ಪ್ರಾಡಕ್ಟ್ (ಭಾರತೀಯ ಉತ್ಪ ನ್ನಗಳನ್ನು ಬಹಿಷ್ಕರಿಸಿ) ಎಂಬ ಟ್ವಿಟರ್ ಟ್ರೆಂಡ್ ಖತರ್‌ನಲ್ಲಿ ಅಗ್ರ ಟ್ವಿಟರ್ ಟ್ರೆಂಡ್‌ಗಳಲ್ಲಿ ಒಂದಾಗಿದೆ. ಧಾರ್ಮಿಕ

ಮತಭೇದದ ಬೀಜ ಬಿತ್ತುವ ಪ್ರಯತ್ನಗಳ ವಿರುದ್ಧ ಎಚ್ಚರಿಕೆಯಿಂದ ಇರುವಂತೆ 2020ರಲ್ಲಿ ಕೊಲ್ಲಿರಾಷ್ಟ್ರಗಳಲ್ಲಿನ ಹಲವು ಭಾರತೀಯ ನಿಯೋಗಗಳು ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ರವಾನಿಸಿದ್ದವು. ಕೊಲ್ಲಿ ರಾಷ್ಟ್ರಗಳಲ್ಲಿ ನೆಲೆಸಿರುವ ಕೆಲವು ಭಾರತೀಯರು ಇಸ್ಲಾಮೊಫೋಬಿಕ್ (ಇಸ್ಲಾಂ ಅಥವಾ ಮುಸ್ಲಿಮರ ವಿರುದ್ಧ ಪೂರ್ವಾಗ್ರಹ ಪೀಡಿತ ಭಾವನೆ) ಪೋಸ್ಟ್‌ಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಚಾರ ಮಾಡಿದ ಪ್ರಕರಣಗಳನ್ನು ಅರಬ್‌ನ ಟ್ವಿಟರ್ ಬಳಕೆದ ಉಲ್ಲೇಖಿಸಿದ ಬಳಿಕ ಸಾಮಾಜಿಕ ಮಾಧ್ಯಮ 5 ತೀವ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ದಿಲ್ಲಿಯಲ್ಲಿ ನಡೆದಿದ್ದ ತಲ್ಲೀಗಿ ಜಮಾಅತ್ ಅಧಿವೇಶನವನ್ನು ಕೊರೋನ ಹರಡುವ ಹಾಟ್‌ಸ್ಪಾಟ್ ಎಂದು ಭಾರತ ಸರಕಾರ ಹಾಗೂ ಮಾಧ್ಯಮದ ಒಂದು ವಿಭಾಗ ಬಣ್ಣಿಸಿರುವುದನ್ನು ಖಂಡಿಸಿ ಕೊಲ್ಲಿ ರಾಷ್ಟ್ರಗಳಲ್ಲಿ ಸಾಮಾಜಿಕ ಮಾಧ್ಯಮದ ಮೂಲಕ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಅಸ್ಸಾಮಿನ ದರಾಂಗ್‌ನಲ್ಲಿ ಜನರನ್ನು ತೆರವುಗೊಳಿಸುವ ಸಂದರ್ಭ ಪೊಲೀಸರು ಗುಂಡುಹಾರಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿ ರುವ ಪ್ರಕರಣದ ವೀಡಿಯೊ ವೈರಲ್ ಆಗಿತ್ತು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...

ದುಬಾಯಿಯಲ್ಲಿ "ಗಲ್ಫ್ ಕರ್ನಾಟಕೊತ್ಸವ" ಯಶಸ್ವಿ; ಐತಿಹಾಸಿಕ ದಾಖಲೆಗೆ ಸಾಕ್ಷಿಯಾದ ಅನಿವಾಸಿ ಕನ್ನಡಿಗರು

ಕರ್ನಾಟಕದ 21 ಅತ್ಯಂತ್ ಪ್ರಭಾವಶಾಲಿ ವ್ಯಾಪಾರ  ಐಕಾನ್ ಗಳು ಗಲ್ಫ್ ಕರ್ನಾಟಕ ರತ್ನ ಪ್ರಶಸ್ತಿಗಳೊಂದಿಗೆ ಗೌರವಿಸಲಿಟ್ಟರು.