ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿ :ಬೈಕ್ ಸವಾರ ಗಂಭೀರ

Source: SO News | By MV Bhatkal | Published on 26th October 2023, 12:30 AM | Coastal News | Don't Miss |

ಭಟ್ಕಳ: ಮೂಡಭಟ್ಕಳ ಬೈಪಾಸ್ ಡಾ. ಚಿತ್ತರಂಜನ್ ಸರ್ಕಲ್ ಬಳಿಯಲ್ಲಿ ಸಂಭವಿಸಿದ ಕಾರು ಮತ್ತು ಬೈಕ್ ಅಪಘಾತದಲ್ಲಿ ಬೈಕ್ ಸವಾರನೋರ್ವ ತೀವ್ರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾನೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡವನನ್ನು ಇಲ್ಲಿನ ಹೋಟೆಲ್ ಒಂದಲ್ಲಿ ಸಹಾಯಕನಾಗಿ ಕೆಲಸ ಮಾಡುವ ಕೋಣಾರ ನಿವಾಸಿ ದಿವಾಕರ ನಾಗಪ್ಪ ನಾಯ್ಕ (೩೨) ಎಂದು ತಿಳಿದು ಬಂದಿದೆ. 
 ಈತನು ಭಟ್ಕಳದಿಂದ ಕುಂದಾಪುರ ಕಡೆಗೆ ಹೋಗುವಾಗ ಕುಂದಾಪುರ ಕಡೆಯಿಂದ ಬರುತ್ತಿದ್ದ ಕಾರು ಹಾಗೂ ಬೈಕು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಈತ ತೀವ್ರವಾಗಿ ತಲೆ ಹಾಗೂ ಸೊಂಟಕ್ಕೆ ಪೆಟ್ಟು ಬಿದ್ದ ಪರಿಣಾಮ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಕಾರು ಚಾಲಕ ತುಮಕೂರಿನ ಕೆ.ಎನ್. ವೀರೇಸ ಎನ್ನುವವರ ಮೇಲೆ ಇಲ್ಲಿನ ನಗರ ಠಾಣೆಯಲ್ಲಿ ಗಾಯಾಳು ದಿವಾಕರ ಅವರ ತಾಯಿ ಚಿಕ್ಕಮ್ಮ ದೂರು ನೀಡಿದ್ದು ನಗರ ಠಾಣೆಯ ಶಿವಾನಂದ ನಾವಡಗಿ ತನಿಖೆ ನಡೆಸುತ್ತಿದ್ದಾರೆ.

Read These Next

ಕಾರವಾರ: ಹಣ, ಉಡುಗೊರೆ ಹಂಚಿಕೆ ಬಗ್ಗೆ ಹೆಚ್ಚಿನ ನಿಗಾ ವಹಿಸಿ : ವಿಶೇಷ ವೆಚ್ಚ ವೀಕ್ಷಕ ಬಿ.ಮುರಳಿ ಕುಮಾರ್

ಮತದಾರರಿಗೆ ಹಣ, ಉಡುಗೊರೆ ಮತ್ತಿತರ ಆಮಿಷಗಳನ್ನು ಒಡ್ಡುವುದರ ಕುರಿತಂತೆ ತೀವ್ರ ನಿಗಾ ವಹಿಸಬೇಕು, ಈ ಕುರಿತಂತೆ ದೂರುಗಳು ಬಂದ ...

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...