ಬೆಂಗಳೂರು : ಹೊಸಕೋಟೆ ಪಟ್ಟಣದ ಎಂ.ವಿ.ಜೆ. ಆಸ್ಪತ್ರೆಗೆ ಸೋಮವಾರ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಭೇಟಿ ನೀಡಿದರು.
ಕೋವಿಡ್ ಸೋಂಕಿತರ ಆರೈಕೆ ಕುರಿತು ಪರಿಶೀಲಿಸಿದ ವೇಳೆ, ಎಂ.ವಿ.ಜೆ ಆಸ್ಪತ್ರೆಯ ಹೊರಗುತ್ತಿಗೆ ಫಾರ್ಮಸಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ದಿನೇಶ್ ಎಂಬ ವ್ಯಕ್ತಿಯ ಕರಾಮತ್ತು ಪತ್ತೆ ಹಚ್ವಿದ್ದಾರೆ.
ಎಂ.ವಿ.ಜೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖಾಸಗಿ ಕೋವಿಡ್ ಸೋಂಕಿತರ ಹೆಸರಲ್ಲಿ ರೆಮ್ಡಿಸಿವರ್ಅನ್ನು ತರಿಸಿಕೊಂಡು, ಇತರೆ ಆಸ್ಪತ್ರೆಗಳಿಗೆ ಹಾಗೂ ವೈದ್ಯರು ಸೂಚನೆ ಇರುವ ಚೀಟಿಯುಳ್ಳವರಿಗೆ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ.
ಈ ಹಿನ್ನಲೆಯಲ್ಲಿ ಆರೋಪಿಯ ವಿರುದ್ಧ ಹೊಸಕೋಟೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 153/2021ಅನ್ನು ದಾಖಲಿಸಲಾಗಿದೆ