ಕಾರವಾರದ ಆಶಾನಿಕೇತನ ಶಾಲೆಯಲ್ಲಿ ಮಕ್ಕಳಿಂದ ಬಿಜೆಪಿ ಎಸ್ಸಿ ಮೋರ್ಛಾ ರಾಜ್ಯಾಧ್ಯಕ್ಷ ಚಲುವಾದಿ ನಾರಾಯಣಸ್ವಾಮಿ ಹುಟ್ಟುಹಬ್ಬ ಆಚರಣೆ.
ಕಾರವಾರ : ಬಿಜೆಪಿ ಎಸ್.ಸಿ ಮೋರ್ಚಾದ ರಾಜ್ಯಾಧ್ಯಕ್ಷ ಹಾಗೂ ವಕ್ತಾರರಾದ ಚಲುವಾದಿ ನಾರಾಯಣಸ್ವಾಮಿ ಅವರ ಹುಟ್ಟುಹಬ್ಬವನ್ನು ಕಾರವಾರದ ಆಶಾನಿಕೇತನ ಕಿವುಡ ಮತ್ತು ಮೂಕ ಮಕ್ಕಳ ಶಾಲೆಯಲ್ಲಿ ಆಚರಿಸಲಾಯಿತು.
ಶಾಲೆಯ ಮಕ್ಕಳು ಕೇಕ್ ಕತ್ತರಿಸುವ ಹಬ್ನ ಆಚರಿಸಿದರು. ಈ ವೇಳೆ ಪರಸ್ಪರ ಸಿಹಿ ಹಂಚುವುದರ ಮೂಲಕ ರಾಜ್ಯಾಧ್ಯಕ್ಷರಿಗೆ ಶುಭಾಶಯ ಕೋರಿದರು.
ಕಾರ್ಯಕ್ರಮದಲ್ಲಿ ಬಿಜೆಪಿಯ ಕಾರವಾರ ನಗರದ ಅಧ್ಯಕ್ಷ ನಾಗೇಶ್ ಕುರ್ಡೇಕರ್, ಎಸ್ಸಿ ಮೋರ್ಚಾದ ಕಾರ್ಯದರ್ಶಿ ತಿಮ್ಮ ರೆಡ್ಡಿ, ತಾಲೂಕ ಉಪಾಧ್ಯಕ್ಷ ರಾಜು ಕಟ್ಟಿಮನಿ, ಕಾರ್ಯಕ್ರಮದ ರುವಾರಿಗಳಾದ ಉತ್ತರ ಕನ್ನಡಜಿಲ್ಲೆಯ ಎಸ್ ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಉದಯ ಬಶೆಟ್ಟಿ, ರಾಜ್ಯ ಕಾರ್ಯಕಾರಣಿ ಸದಸ್ಯ ಬಿ ಎನ್. ಸೂರ್ಯಪ್ರಕಾಶ ರವರು ಸಂಸ್ಥೆಯ ಪ್ರಾಂಶುಪಾಲರು ಸಿಬ್ಬಂದಿ ವರ್ಗದವರು ಪುಟಾಣಿ ಮಕ್ಕಳು ಉಪಸ್ಥಿತರಿದ್ದರು.