ಸಿಇಟಿ ಪರೀಕ್ಷೆ ಸುಖಾಂತ್ಯ: ಕೋವಿಡ್ ಆತಂಕದ ನಡುವೆಯೂ ಅತ್ಯುತ್ತಮ ಹಾಜರಾತಿ-ಡಾ.ಸಿ.ಎನ್.ಅಶ್ವತ್ಥನಾರಾಯಣ

Source: uni | Published on 1st August 2020, 12:52 AM | State News | Don't Miss |

 

ಬೆಂಗಳೂರು: ಎರಡನೇ ದಿನವೂ ರಾಜ್ಯದ 497 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ಅತ್ಯಂತ ಯಶಸ್ವಿಯಾಗಿ ನಡೆದಿದ್ದು,  ಒಂದು ಸಣ್ಣ ಸಮಸ್ಯೆ ಹಾಗೂ ಲೋಪದೋಷವೂ ಇಲ್ಲದೆ ಸಮಾಪ್ತಿಯಾಗಿದೆ.ಕೋವಿಡ್ ಪಾಸಿಟಿವ್ ಇದ್ದ 63 ವಿದ್ಯಾರ್ಥಿಗಳು ಕೂಡ ಪರೀಕ್ಷೆ ಬರೆದಿದ್ದಾರೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.
ಬೆಂಗಳೂರಿನಲ್ಲಿ ಶುಕ್ರವಾರ ಸಂಜೆ ಆನ್’ಲೈನ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಟ್ಟು 1,94,419 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ ಭೌತವಿಜ್ಞಾನ ಕ್ಕೆ 1,75,4428 ವಿದ್ಯಾರ್ಥಿಗಳು ಹಾಜರಾಗಿದ್ದರು. ಶೇ. 90.23ರಷ್ಟು ಹಾಜರಾತಿ ಇತ್ತು. ರಸಾಯನವಿಜ್ಞಾನ ದಲ್ಲಿ  1,75,337 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಶೇ. 90.9ರಷ್ಟು ಹಾಜರಾತಿ ಆಗಿದೆ. ಇನ್ನು 2019ರಲ್ಲಿ  ಭೌತವಿಜ್ಞಾನದಲ್ಲಿ ಶೇ. 92.27 ಹಾಗೂ ರಸಾಯನವಿಜ್ಞಾನ ದಲ್ಲಿ ಶೇ.90.88 ಹಾಜರಾತಿ ಇತ್ತು. ಕೋವಿಡ್ ಆತಂಕದ ನಡುವೆಯೂ ಈ ವರ್ಷ ಅತ್ಯುತ್ತಮ ಹಾಜರಾತಿ ಇದೆ. ಸೋಂಕಿನ ಭಯವಿದ್ದರೂ ಆತ್ಮಸ್ಥೈರ್ಯದಿಂದ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದಾರೆ. ಸರಕಾರದ ಪರವಾಗಿ ಎಲ್ಲ ವಿದ್ಯಾರ್ಥಿಗಳು,ಪೋಷಕರಿಗೆ ಕೃತಜ್ಞತೆಗಳು ಎಂದು ಡಿಸಿಎಂ ಹೇಳಿದರು. 
6 ಕೇಂದ್ರಗಳಲ್ಲಿ ಗಡಿ ಕನ್ನಡಿಗರಿಗೆ ಪರೀಕ್ಷೆ: ಶನಿವಾರ ಹೊರನಾಡು ಮತ್ತು ಗಡಿ ಕನ್ನಡಿಗ ವಿದ್ಯಾರ್ಥಿಗಳಿಗೆ ಕನ್ನಡ ಪರೀಕ್ಷೆ ನಡೆಯಲಿದೆ. ಮಂಗಳೂರು, ಬೆಂಗಳೂರು,ವಿಜಯಪುರ, ಬಳ್ಳಾರಿ, ಬೆಳಗಾವಿ, ಬೀದರ್ ಜಿಲ್ಲಾ ಕೇಂದ್ರಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಅದಕ್ಕೂ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಮಾಹಿತಿ ನೀಡಿದರು.
ಹೆಲ್ಪ್’ಲೈನ್ ನೆರವು:ಇನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅತ್ಯುತ್ತಮವಾಗಿ ನಿರ್ವಹಣೆ ಮಾಡಿದೆ. ಸಿಇಟಿ ಹೆಲ್ಪ್’ಲೈನ್’ಗೆ ಗುರುವಾರ 200ಕ್ಕೂ ಹೆಚ್ಚು ಕರೆಗಳು ಬಂದಿದ್ದವು. ಅದರಲ್ಲಿ 10ರಿಂದ 15 ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ಬದಲಾವಣೆಗೆ ಮನವಿ
ಮಾಡಿದರು. ಪರೀಕ್ಷಾ ಪ್ರಾಧಿಕಾರ ಅವರಿಗೆ ನೆರವಾಗಿದೆ. ಇನ್ನು ಕೆಲ ವಿದ್ಯಾರ್ಥಿಗಳು ಅಪ್ಲಿಕೇಷನ್ ಸಂಖ್ಯೆ ಮತ್ತು ಯೂಸರ್ ಐಡಿ ಮತ್ತಿತರ ಸಮಸ್ಯೆ ಗಳಿಗೆ ಕರೆ ಮಾಡಿದ್ದು ಅವರಿಗೂ ಪ್ರವೇಶ ಪತ್ರ ಡೌನ್’ಲೋಡ್ ಮಾಡಿಕೊಳ್ಳಲು ಸಹಾಯ ಮಾಡಲಾಗಿದೆ. ಇನ್ನು ಅನೇಕ ಕಡೆ ಮಾಸ್ಕ್ ಇಲ್ಲದೆ ಬಂದವರಿಗೆ ಮಾಸ್ಕ್ ನೀಡಲಾಗಿದೆ. ಉಳಿದಂತೆ ಕೋವಿಡ್ ಹಿನ್ನೆಲೆಯಲ್ಲಿ ಎಲ್ಲ ವ್ಯವಸ್ಥೆಗಳನ್ನೂ ಕೈಗೊಳ್ಳಲಾಗಿತ್ತು ಎಂದು ಉಪ ಮುಖ್ಯಮಂತ್ರಿಗಳು ಹೇಳಿದರು.
ಇಡೀ ತಂಡಕ್ಕೆ ಕೃತಜ್ಙತೆ:ಸಿಇಟಿ ಪರೀಕ್ಷೆ ಯಶಸ್ವಿಯಾಗಿ ನಡೆಯಲು ಕಾರಣರಾದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸೇರಿದಂತೆ ಉನ್ನತ ಶಿಕ್ಷಣ, ಬಿಬಿಎಂಪಿ, ಕೆಸ್ಸಾರ್ಟಿಸಿ, ಬಿಎಂಟಿಸಿ, ಆರೋಗ್ಯ, ಪೊಲೀಸ್ ಇಲಾಖೆಗಳ ಅಧಿಕಾರಿಗಳು, ಎಲ್ಲ ಸಿಬ್ಬಂದಿಗೂ ನನ್ನ
 ಕೃತಜ್ಞತೆಗಳು ಸಲ್ಲುತ್ತವೆ. ಸೋಮವಾರ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿ ಅವರಿಗೆ ಅಭಿನಂದನೆ ಸಲ್ಲಿಸಲಿದ್ದೇನೆ ಎಂದು ಡಾ. ಅಶ್ವತ್ಥನಾರಾಯಣ ತಿಳಿಸಿದರು.
20 ದಿನದಲ್ಲಿ ಫಲಿತಾಂಶ:ಇನ್ನು 15ರಿಂದ 20 ದಿನಗಳ ಒಳಗಾಗಿ ಸಿಇಟಿ ಫಲಿತಾಂಶವನ್ನು ಪ್ರಕಟಿಸಲಾಗುವುದು. ಈ ವರ್ಷ ಕೌನ್ಸೆಲಿಂಗ್ ಸೇರಿದಂತೆ ಎಲ್ಲವನ್ನೂ ಆನ್’ಲೈನ್’ನಲ್ಲಿಯೇ ಮಾಡಲಾಗುವುದು ಎಂದು ಅವರು ಹೇಳಿದರು

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...