ಬಿಜೆಪಿ ಟಿಕೆಟ್ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಪ್ರಕರಣ; ಒಡಿಶಾದಲ್ಲಿ ಹಾಲಶ್ರೀ ಬಂಧನ

Source: Vb | By I.G. Bhatkali | Published on 20th September 2023, 7:42 AM | Coastal News | State News |

ಬೆಂಗಳೂರು: ಬಿಜೆಪಿ ಟಿಕೆಟ್ ಹೆಸರಿ ನಲ್ಲಿ ಕೋಟ್ಯಂತರ ರೂ. ವಂಚನೆ ಪ್ರಕರಣದ ಆರೋಪಿ ಹೊಸ ಪೇಟೆಯ ಹಿರೇಹಡಗಲಿಯ ಅಭಿನವ ಹಾಲಶ್ರೀ ಮಠದ ಹಾಲವೀರಪ್ಪ ಸ್ವಾಮೀಜಿ ಒಡಿಶಾದಲ್ಲಿ ಸಿಸಿಬಿ ಪೊಲೀ ಸರ ಕೈಗೆ ಸಿಕ್ಕಿಬಿದ್ದಿದ್ದು, ಈ ವೇಳೆ ಭಯದಲ್ಲಿ ಖಾವಿ ಬಟ್ಟೆ ತೆಗೆದು ಟೀ- ಶರ್ಟ್ ಧರಿಸಿ ಸಾಮಾನ್ಯನಂತೆ ರೈಲಿನಲ್ಲಿ ಅಡ ಗಿದ್ದ ಮಾಹಿತಿ ಹೊರಬಿದ್ದಿದೆ.

ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಬಿಜೆಪಿ ಟಿಕೆಟ್ ಕೊಡಿಸುವ ಆಮಿಷವೊಡ್ಡಿ ಹಣ ಪಡೆದು ವಂಚಿಸಿದ್ದ ಪ್ರಕರಣದ ಆರೋಪಿ ಹಾಲವೀರಪ್ಪ ಸ್ವಾಮೀಜಿ ಸಹ ದೂರುದಾರರಿಂದ 1.50 ಕೋಟಿ ರೂ. ಪಡೆದಿರುವ ಆರೋಪವಿದ್ದು, ಇದು ಬೆಳಕಿಗೆ ಬಂದ ಬೆನ್ನಲ್ಲೇ ಸ್ವಾಮೀಜಿ ತಲೆಮರೆಸಿಕೊಂಡಿದ್ದರು.

ಅದರಂತೆ ಮಠದಿಂದ ಸ್ವಾಮೀಜಿ ಮೈಸೂರಿಗೆ ಹೋಗಿ ಅಲ್ಲಿನ ಮಠವೊಂದರಲ್ಲಿ ಒಂದು ರಾತ್ರಿ ಕಳೆದು ನಂತರ ಕಾರು ಚಾಲಕನಿಂದ ನಾಲ್ಕು ಹೊಸ ಸಿಮ್‌ಗಳು ಹಾಗೂ ತಲೆಮರೆಸಿಕೊಳ್ಳಲು ಖರ್ಚಿಗೆ ಬೇಕಾದಂತಹ ಹಣವನ್ನು ತರೆಸಿಕೊಂಡಿದ್ದರು. ನಂತರ ಮೈಸೂರಿನಿಂದ ಹೈದರಾಬಾದ್‌ಗೆ ಹೋಗಿ ಅಲ್ಲಿಂದ ಶ್ರೀಶೈಲಕ್ಕೆ ತೆರಳಿದ್ದು, ಅಲ್ಲಿಂದಲೂ ಜಾಗ ಬದಲಿಸಿ ಒಡಿಶಾಕ್ಕೆ ಹೋಗಿದ್ದಾರೆ.

ಪ್ರತಿಯೊಂದು ಮೊಬೈಲ್ ಕರೆಗೂ ಮೊಬೈಲ್ ಸಿಮ್ ಬದಲಿಸುತ್ತಿದ್ದರು. ಒಂದು ಸಿಮ್ ಬಳಸಿದ ನಂತರ ಆ ಸಿಮ್ ಅನ್ನು ಮತ್ತೆ ಬಳಸುತ್ತಿರಲಿಲ್ಲ. ಹಾಗಾಗಿ ಇವರ ಬಂಧನ ಪೊಲೀಸರಿಗೆ ತಲೆನೋವಾಗಿತ್ತು. ಬಳಿಕ ತನಿಖಾಧಿಕಾರಿಗಳು ಸ್ವಾಮೀಜಿಯ ಕಾರು ಚಾಲಕನನ್ನು ತೀವ್ರ ವಿಚಾರಣೆಗೊಳಪಡಿಸಿದಾಗ ಸ್ವಾಮೀಜಿಯ ಬಗ್ಗೆ ಕೆಲವೊಂದು ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು.

ಹಾಲಶ್ರೀ ಸ್ವಾಮೀಜಿ ಕರ್ನಾಟಕದ ಆಪ್ತರೊಬ್ಬರಿಗೆ ಕರೆ ಮಾಡಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ವಿಶೇಷ ತಂಡ ಒಡಿಶಾಗೆ ಹೋಗಿತ್ತು. ಅದು ಗೊತ್ತಾಗುತ್ತಿದ್ದಂತೆ, ಸ್ವಾಮೀಜಿ ಭುವನೇಶ್ವರದಿಂದ ಭೋದ್ ಗಯಾಗೆ ರೈಲಿನಲ್ಲಿ ತೆರಳುತ್ತಿದ್ದರು. ಈ ಮಾಹಿತಿ ಸಿಗುತ್ತಿದ್ದಂತೆ,

ರೈಲು ಪ್ರಯಾಣದ ವೇಳೆಯಲ್ಲೇ ಸ್ವಾಮೀಜಿಯನ್ನು ಪತ್ತೆ ಮಾಡಿ ವಶಕ್ಕೆ ಪಡೆಯಲಾಗಿದೆ ಎಂದು ಸಿಸಿಬಿ ಹಿರಿಯ ಅಧಿಕಾರಿಯೊಬ್ಬರು ಹೇಳಿದರು. ಮಂಗಳವಾರ ವಿಶೇಷ ತಂಡದ ಸಿಬ್ಬಂದಿ, ಸ್ವಾಮೀಜಿಯನ್ನು ಬೆಂಗಳೂರಿಗೆ ಕರೆತಂದು ಇಲ್ಲಿನ ಶಿವಾಜಿಗನರದ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ನಂತರ ವಶಕ್ಕೆ ಪಡೆಯಲಾಗಿದೆ ಎಂದು ತನಿಖಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

Read These Next

ಭಟ್ಕಳ: ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದ ವಾರ್ಷಿಕೋತ್ಸವ ಮತ್ತು ದೀಪದಾನಕಾರ್ಯಕ್ರಮ

ಬಿ.ಎಡ್.ಪ್ರಶಿಕ್ಷಣಾರ್ಥಿಗಳು ತಾವು ಪಡೆದತರಬೇತಿಯನ್ನು ಮುಂದೆ ಶಿಕ್ಷಕರಾಗಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡುವಾಗ ಅನುಸರಿಸಿ ಉತ್ತಮ ...

ಸಂಪರ್ಕ ಕಳೆದುಕೊಂಡ ಬೋಟ್ ಪತ್ತೆ ಮಾಡಿದ ಕೋಸ್ಟ್ ಗಾರ್ಡ್. 26 ಮೀನುಗಾರರು ಸುರಕ್ಷಿತವಾಗಿ ಕಾರವಾರ ಬಂದರಿಗೆ.

ಕಾರವಾರ : ಅರಬ್ಬಿ ಸಮುದ್ರದಲ್ಲಿ ಇಂಜಿನ್ ಸಮಸ್ಯೆಯಿಂದ ಸಂಪರ್ಕ ಕಳೆದುಕೊಂಡಿದ್ದ ಬೋಟು ಸುರಕ್ಷಿತವಾಗಿ ಬಂದರು ತಲುಪಿದೆ.

ಜಿಲ್ಲೆಯಲ್ಲಿನ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಶುದ್ಧ ಕುಡಿಯವ ನೀರು ಪೂರೈಸಲು ಅಗತ್ಯ ಕ್ರಮ : ಸಚಿವ ಮಧು ಎಸ್ ಬಂಗಾರಪ್ಪ

ಶಿವಮೊಗ್ಗ : ಪ್ರಸಕ್ತ ಸಾಲಿನ ಮುಂಗಾರು ವಿಫಲವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ...

ಕುಡಿಯುವ ನೀರು-ಜಾನುವಾರು ಮೇವಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಸಚಿವರ ಸೂಚನೆ

ಶಿವಮೊಗ್ಗ : ಮುಂಬರುವ ದಿನಗಳಲ್ಲಿ ತಾಲ್ಲೂಕಿನಲ್ಲಿ ಕುಡಿಯುವ ನೀರು ಹಾಗೂ ಜಾನುವಾರು ಮೇವಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ...

ಐ.ಟಿ.ಎಫ್ ಕಲಬುರಗಿ ಓಪನ್-2023ಗೆ ತೆರೆ. ಕಲಬುರಗಿಯಲ್ಲಿ ಟೆನಿಸ್ ತರಬೇತಿ ಕೇಂದ್ರ ಸ್ಥಾಪಿಸಿ: ಪ್ರಿಯಾಂಕ್ ಖರ್ಗೆ

ಕಲಬುರಗಿ : ರಾಜ್ಯದಲ್ಲಿ ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಟೆನಿಸ್ ಕ್ರೀಡೆಗೆ ಹೆಚ್ಚಿನ ಉತ್ತೇಜನ ನೀಡಲು ಕರ್ನಾಟಕ ರಾಜ್ಯ ...

ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿ.ಪಂ ಸಿಇಓ ಸ್ವರೂಪ ಟಿ.ಕೆ.

ಧಾರವಾಡ : ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಕಾರ್ಯಕ್ರಮ ಮೂಲಕ ರಾಜ್ಯದಲ್ಲಿ ಮಕ್ಕಳು ಮತ್ತು ಗರ್ಭಿಣಿ ಮಹಿಳೆಯರು ಅನೀಮಿಯಾದಿಂದ ...