'ಬಾಲಕನ ರಕ್ಷಣೆ: ಪತ್ತೆಗೆ ಮನವಿ'

Source: sonews | Published on 22nd July 2019, 8:20 PM | Coastal News | Don't Miss |

ಭಟ್ಕಳ: ಬೈಂದೂರು-ಶಿರೂರಿನ ಮೈದಿನಪುರದಲ್ಲಿ ಅಸಹಾಯಕ ಸ್ಥಿತಿಯಲ್ಲಿ ಪತ್ತೆಯಾಗಿರುವ, ಮಾತು ಬಾರದ ಸುಮಾರು 16 ವರ್ಷದ ಅಪರಿಚಿತ ಬಾಲಕನನ್ನು ಆರೋಗ್ಯದ ಸಮಸ್ಯೆ ಕಾರಣದಿಂದ ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಲಾಗಿದೆ. ಗುಣಮುಖನಾದ ಬಳಿಕ ಬಾಲಕನನ್ನು ಶಂಕರಪುರದ ವಿಶ್ವಾಸದ ಮನೆ ಪುರ್ನವಸತಿ ಕೇಂದ್ರದಲ್ಲಿ ನೆಲೆ ಕಲ್ಪಿಸಲು ಅಧಿಕಾರಿಗಳು ಯೋಚಿಸಿದ್ದಾರೆಂದು ತಿಳಿದು ಬಂದಿದೆ.  

ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಕಲ್ಯಾಣ ಸಮಿತಿ, ಉಡುಪಿ ಜಿಲ್ಲಾ ನಾಗರಿಕ ಸಮಿತಿ ಬಾಲಕನ ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದೆ. ಕಾರ್ಯಚರಣೆಯಲ್ಲಿ ಅಧಿಕಾರಿಗಳಾದ ರೊನಾಲ್ಡ್ ಪುರ್ಟಾಡೊ, ಮುರುಳಿಧರ್ ಶೆಟ್ಟಿ, ಮೋಹನ್ ಕುಮಾರ್, ಯೋಗಿಶ್, ಹಾಗೂ ಸಮಾಜಸೇವಕ ನಿತ್ಯಾನಂದ ಒಳಕಾಡು ಪಾಲ್ಗೊಂಡಿದ್ದಾರೆ. ಬಾಲಕನ ಸಂಬಂಧಿಕರು ತುರ್ತಾಗಿ ಉಡುಪಿ ನಿಟ್ಟೂರು ಬಾಲಕಿಯರ ಬಾಲ ಮಂದಿರದ- ಮಕ್ಕಳ ಕಲ್ಯಾಣ ಸಮಿತಿ ಕಛೇರಿ, ಅಥವಾ ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ಸಂಪರ್ಕಿಸಲು ತಿಳಿಸಲಾಗಿದೆ.   

Read These Next

ಕಾರವಾರ: ಕುಡಿಯುವ ನೀರು ಸಮಸ್ಯೆ : ಟ್ಯಾಂಕರ್ ಮೂಲಕ ತಕ್ಷಣ ನೀರು ಒದಗಿಸಲು ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ ಕಂಡು ಬರುತ್ತಿರುವ ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ತಕ್ಷಣವೇ ಸಾರ್ವಜನಿಕರಿಗೆ ಕುಡಿಯುವ ನೀರು ...

ಕಾರವಾರ: ಮತದಾನ ಜಾಗೃತಿಯ ಬೆಳಕು ಎಲ್ಲೆಡೆ ಪ್ರಕಾಶಿಸಲಿ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಬೆಳಕು ಕತ್ತಲನ್ನು ದೂರ ಮಾಡಿ, ಎಲ್ಲೆಡೆ ಬೆಳಕು ಮೂಡಿಸುತ್ತದೆ. ಅದೇ ರೀತಿ ಮತದಾನದ ಕುರಿತ ಜಾಗೃತಿಯ ಬೆಳಕನ್ನು ಎಲ್ಲಾ ಮತದಾರರ ...