ಪ್ಯಾಂಗಾಂಗ್‌ನ ಅತಿಕ್ರಮಿತ ಪ್ರದೇಶದಲ್ಲಿ ಚೀನಾದಿಂದ ಸೇತುವೆ ನಿರ್ಮಾಣ; ಕೇಂದ್ರ ಸರಕಾರದ ಖಂಡನೆ

Source: VB News | By I.G. Bhatkali | Published on 7th January 2022, 4:57 PM | National News |

ಹೊಸದಿಲ್ಲಿ: ಪೂರ್ವ ಲಡಾಖ್‌ನ   ಪ್ಯಾಂಗಾಂಗ್ ಸರೋವರಕ್ಕೆ ಚೀನಾ ಸೇತುವೆ ನಿರ್ಮಿಸುತ್ತಿರುವುದನ್ನು ಭಾರತ ಗುರುವಾರ ಬಲವಾಗಿ ಖಂಡಿಸಿದೆ. 

ಚೀನಾವು ಕಳೆದ 60 ವರ್ಷಗಳಿಂದ ಅದು ಅಕ್ರಮವಾಗಿ  ಸ್ವಾಧೀನದಲ್ಲಿಟ್ಟುಕೊಂಡಿರುವ ಪ್ರದೇಶದಲ್ಲಿ ಈ ಸೇತುವೆಯನ್ನು ನಿರ್ಮಿಸುತ್ತಿದೆಯೆಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಆಕ್ರೋಶ ವ್ಯಕ್ತಪಡಿಸಿದೆ.

“ಪ್ಯಾಂಗಾಂಗ್ ಸರೋವರದ ಚೀನಾ ಭಾಗದಿಂದ ಸೇತುವೆ 66 ನಿರ್ಮಾಣಗೊಳ್ಳುತ್ತಿರುವುದರ ಬಗ್ಗೆ ಕೇಂದ್ರ ಸರಕಾರವು ನಿಕಟವಾದ ನಿಗಾವಿರಿಸಿದೆ. 60 ವರ್ಷಗಳಿಂದ ಚೀನಾದ ಅಕ್ರಮ ಸ್ವಾಧೀನದಲ್ಲಿರುವ ಪ್ರದೇಶಗಳಲ್ಲಿ ಈ ಸೇತುವೆ ನಿರ್ಮಾಣವಾಗುತ್ತಿದೆ' ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ಆರಿಂದಮ್ ಬಾಗ್‌ಚಿ ಗುರುವಾರ ಹೊಸದಿಲ್ಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

“ನಿಮಗೆ ತಿಳಿದಿರುವಂತೆ ಭಾರತವು ಚೀನಾದ ಈ ಕಾನೂನು ಬಾಹಿರ ಅತಿಕ್ರಮಣವನ್ನು ಯಾವತ್ತೂ ಒಪ್ಪಿಕೊಂಡಿಲ್ಲ ಹಾಗೂ ನಮ್ಮ ದೇಶದ ಭದ್ರತಾ ಹಿತಾಸಕ್ತಿಗಳು ಸಂಪೂರ್ಣವಾಗಿ 

ಸುರಕ್ಷಿತವಾಗಿರುವುದನ್ನು ಖಾತರಿಪಡಿಸಲು ಕೇಂದ್ರ ಸರಕಾರವು ಅಗತ್ಯವಿರುವ ಎಲ್ಲ ಹೆಜ್ಜೆಗಳನ್ನು ಇಡಲಿದೆ' ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಭಾರತೀಯ ಸಶಸ್ತ್ರ ಪಡೆಗಳಿಗೆ ಉತ್ತಮವಾದ ವ್ಯೂಹಾತ್ಮಕ ಬೆಂಬಲವನ್ನು ಒದಗಿಸುವುದಾಗಿ ಗಡಿ ಮೂಲ ಸೌಕರ್ಯ (ರಸ್ತೆಗಳು ಹಾಗೂ ಸೇತುವೆಗಳು) ಅಭಿವೃದ್ಧಿಗಾಗಿ ನೀಡಲಾಗು ವ ಹಣಕಾಸು ನೆರವಿನಲ್ಲಿ ಗಣನೀಯ ಏರಿಕೆ ಮಾಡಲಾಗುವುದೆಂದು ಬಾಗ್ಚಿ ತಿಳಿಸಿದರು.

ಅರುಣಾಚಲ ಪ್ರದೇಶದ ಕೆಲವು ಭಾಗಗಳಿಗೆ ಚೀನಾವು ಮರುನಾಮಕರಣ ಮಾಡಿರುವುದನ್ನೂ ಬಾಗ್ಚಿ ಖಂಡಿಸಿದರು. ಪೂರ್ವ ಲಡಾಕ್‌ ಗಡಿ ವಿವಾದವನ್ನು ಚೀನಾವು ಭಾರತದೊಂದಿಗೆ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬೇಕು ಎಂದವರು ಹೇಳಿದರು.

ದೇಶಭ್ರಷ್ಟ ಟಿಬೆಟ್ ಸಂಸತ್ ಕಳೆದ ವಾರ ದಿಲ್ಲಿಯಲ್ಲಿ ಆಯೋಜಿಸಿದ ಸತ್ಕಾರಕೂಟದಲ್ಲಿ ಪಾಲ್ಗೊಂಡಿದ್ದ ಭಾರತೀಯ ಸಂಸದರಿಗೆ ಚೀನಾದ ರಾಯಭಾರಿ ಕಚೇರಿಯು ಬರೆದ ಪತ್ರದ ಧಾಟಿಯು ಸ್ವೀಕಾರಾರ್ಹವಲ್ಲವೆಂದು ಅರಿಂದಮ್ ತಿಳಿಸಿದರು.

ಚೀನಾವು ಪೂರ್ವ ಲಡಾಕ್‌ನ ಪ್ಯಾಂಗಾಂಗ್ ಸರೋವರಕ್ಕೆ ಸೇತುವೆ ನಿರ್ಮಿಸುತ್ತಿರುವುದನ್ನು ಸೂಚಿಸುವ ಉಪಗ್ರಹ ಚಿತ್ರಗಳು ಭೌಗೋಳಿಕ-ಬೇಹುಗಾರಿಕಾ ತಜ್ಞ ಡ್ಯಾಮಿಯೆನ್ ಸೈಮೊನ್ ಅವರಿಗೆ ಲಭ್ಯವಾಗಿರುವುದಾಗಿ ಎನ್‌ಡಿಟಿವಿ ಸುದ್ದಿವಾಹಿನಿಯು ಸೋಮವಾರ ವರದಿ ಮಾಡಿತ್ತು.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...