ಮಂಗಳೂರ:ಚೈತ್ರಾ ಕುಂದಾಪುರ ಬಂಧನಕ್ಕೆ ಆಗ್ರಹಿಸಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ನಿಂದ ದೂರು ಉಳ್ಳಾಲ ಬ್ಲಾಕ್ ಕಾಂಗ್ರೆಸ್, ಅಧ್ಯಕ್ಷರಾದ ಸದಾಶಿವ ಉಳ್ಳಾಲ್ ಅವರ ಅಧ್ಯಕ್ಷತೆಯಲ್ಲಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕ, ಮತ್ತು ಇತರ ಮುಂಚೂಣಿ ಘಟಕಗಳ ವತಿಯಿಂದ ಕೋಮು ಪ್ರಚೋದನಕಾರಿಯಾಗಿ ಭಾಷಣ ಮಾಡಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕದಡಲು ಯತ್ನಿಸಿದ ಚೈತ್ರ ಕುಂದಾಪುರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಹಾಗೂ ಕೂಡಲೇ ಬಂಧಿಸಬೇಕು ಎಂದು ಉಳ್ಳಾಲ ಪೊಲೀಸ್ ಠಾಣೆ ಹಾಗೂ ಕೊಣಾಜೆ ಪೊಲೀಸ್ ಠಾಣೆ ಗಳಲ್ಲಿ ದೂರು ನೀಡಿದ್ದಾರೆ.
ಈ ಸಂದರ್ಭದಲ್ಲಿ ಉಲ್ಲಾಳ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಅಲ್ವಿನ್ ಡಿಸೋಜ ಜಿಲ್ಲಾ ಕಾಂಗ್ರೆಸಿನ ಪ್ರಧಾನ ಕಾರ್ಯದರ್ಶಿಯಾದ NS ಕರೀ ಹಿಂದುಳಿದ ವರ್ಗದ ಅಧ್ಯಕ್ಷರಾದ ದೀಪಕ್ ಪಿಲಾ ರ್ ಕಿಸಾನ್ ಘಟಕದ ಅಧ್ಯಕ್ಷರಾದ ಪುರುಶೋತಂ ಶೆಟ್ಟಿ ಉಲ್ಲಾಳ ಬ್ಲಾಕ್ ಕಾಂಗ್ರೆಸ್ಸಿನ ಮಹಿಳಾ ಘಟಕದ ಅಧ್ಯಕ್ಷರಾದ ದೇವಕಿ ಪೂಜಾರಿ ರಾಜ್ಯ ಮಹಿಳಾ ಘಟಕದ ಕಾರ್ಯದರ್ಶಿಯಾದ ಸುರೇಖ ಚಂದ್ರ ತಾಲೂಕು ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಮಹಮ್ಮದ್ ಮೋನು,ಮುನ್ನೂರು ಗ್ರಾಮದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ನವೀನ್ ಡಿಸೋಜ ಯೂತ್ ಇಂಟೆಕ್ ಅಧ್ಯಕ್ಷ ವಿಶಾಲ್ ಕೊಲ್ಯ ಉಪಸ್ಥಿತರಿದ್ದರು