ಪೌರ ಕಾರ್ಮಿಕರು ಮಕ್ಕಳ ಶಿಕ್ಷಣಕ್ಕೆ ಆದ್ಯತೆ

Source: sonews | By Staff Correspondent | Published on 23rd September 2020, 7:52 PM | State News |

ಶ್ರೀನಿವಾಸಪುರ: ಪೌರ ಕಾರ್ಮಿಕರು ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್‌ ಕುಮಾರ್‌ ಹೇಳಿದರು.

ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಡಿ ಮನೆಗಳನ್ನು ನಿರ್ಮಿಸಿಕೊಳ್ಳಲು ತಲಾ ರೂ.7.5 ಲಕ್ಷ ಆರ್ಥಿಕ ನೆರವು ನೀಡಲಾಗುವುದು. ಪೌರ ಕಾರ್ಮಿಕರಿಗೆ ಉಚಿತ ನಿವೇಶನ ನೀಡಲು ಅಗತ್ಯವಾದ ಜಮೀನು ಮಂಜೂರು ಮಾಡುವಂತೆ ಜಿಲ್ಲಾಧಿಕಾರಿಗಳನ್ನು ಕೋರಲಾಗಿದೆ ಎಂದು ಹೇಳಿದರು.

ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. ಕೆ.ಎನ್‌.ವೇಣುಗೋಪಾಲ್‌ ಮಾತನಾಡಿ, ಪೌರ ಕಾರ್ಮಿಕರ ಸೇವೆ ಅಮೂಲ್ಯವಾದುದು. ಕೊರೊನಾ ಸಂದರ್ಭದಲ್ಲಿ ತಮ್ಮ ಪ್ರಾಣದ ಮೇಲಿನ ಹಂಗು ತೊರೆದು ಸಾರ್ವಜನಿಕರ ಹಿತಕ್ಕಾಗಿ ದುಡಿಯುತ್ತಿದ್ದಾರೆ. ಸಮಾಜದ ಎಲ್ಲ ವರ್ಗದ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ. ಶ್ರಮ ಗೌರವಕ್ಕೆ ಮಾದರಿಯಾಗಿದ್ದಾರೆ ಎಂದು ಹೇಳಿದರು.

ರೋಟರಿ ಸಂಸ್ಥೆ ಅಧ್ಯಕ್ಷ ಶಿವಮೂರ್ತಿ  ಹಿರಿಯ ಪೌರ ಕಾರ್ಮಿಕರನ್ನು ಸನ್ಮಾನಿಸಿದರು.

  ಪುರಸಭೆ ಆರೋಗ್ಯ ನಿರೀಕ್ಷಕ ಕೆ.ಜಿ.ರಮೇಶ್‌, ಪರಿಸರ ಅಭಿಯಂತರ ಶೇಖರರೆಡ್ಡಿ, ಕಂದಾಯ ನಿರೀಕ್ಷ ಶಂಕರ್‌, ನಾಗೇಶ್‌, ಸದಸ್ಯರಾದ ಅಪ್ಪೂರು ರಾಜು, ಬಿ.ಎಲ್‌.ಭಾಸ್ಕರ್‌, ಆನಂದ್‌, ಶ್ರೀನಿವಾಸ್‌, ನಾಗರಾಜ್‌, ಶಾರದ, ಸೀತಾರಾಮರೆಡ್ಡಿ, ರಾಜೇಶ್ವರಿ ಇದ್ದರು.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...