ಸ್ವೀಪ್ ವತಿಯಿಂದ ಚೆಕ್ ಪೋಸ್ಟ್‍ಗಳಲ್ಲಿ ಚುನಾವಣಾ ತಪಾಸಣಾ ಕೇಂದ್ರ ತರೆದು ನಾಗರೀಕರಿಗೆ ಅರಿವು

Source: so news | By MV Bhatkal | Published on 17th March 2019, 11:16 PM | State News | Don't Miss |

ಮೈಸೂರು :ಮೈಸೂರು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ 2019 ರ ಏಪ್ರಿಲ್ 18 ರಂದು ನಡೆಯಲಿರುವ ಮೈಸೂರು ಮತ್ತು ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಇರುವ ಚೆಕ್ ಪೋಸ್ಟ್‍ಗಳಲ್ಲಿ ಚುನಾವಣಾ ತಪಾಸಣಾ ಕೇಂದ್ರ(ಎಸ್.ಎಸ್.ಟಿ)ಗಳನ್ನು ತೆರೆಯಲಾಗುತ್ತಿದೆ.
ನೈತಿಕ ಚುನಾವಣ ಬೆಂಬಲಿಸಿ ಎಂಬ ಅಭಿಯಾನ ಕೈಗೊಳ್ಳಲೂ ಚೆಕ್ ಪೋಸ್ಟ್‍ಗಳಲ್ಲಿ ಚುನಾವಣೆಯ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ತಂಡಗಳು ರಸ್ತೆಯಲ್ಲಿ ಸಂಚಾರ ಮಾಡುವ ನಾಗರೀಕರಿಗೆ ಮತದಾನದ ಅರಿವು ಮೂಡಿಸಲು ಕ್ರಮವಹಿಸಿ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ರಸ್ತೆ ಮೂಲಕ ಪ್ರತಿನಿತ್ಯ ಸಂಚಾರ ನಡೆಸುವವರೂ 18 ವರ್ಷ ತುಂಬಿರುವ ಮತದಾರರ ಪಟ್ಟಿಯಲ್ಲಿ ನೋದಾಯಿಸಿ ಕೊಂಡಿರುವವರು ಚುನಾವಣ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಮತದಾನದ ಕಡೆ ನಮ್ಮ ನಡೆ , ನಮ್ಮ ಮತ ನಮ್ಮ ಹಕ್ಕು , ಪ್ರಜಾಪ್ರಭುತ್ವದ ಉಳಿವಿಗೆ ಮತ ಚಲಾಯಿಸಿ, ಜಾಗೃತ ಮತದಾರ ಪ್ರಜಾ ಪ್ರಭುತ್ವದ ನೇತಾರ ಹೀಗೆ ಅರಿವು ಮೂಡಿಸುವ ಅಭಿಯಾನವನ್ನು ಕೈಗೊಂಡಿದೆ.
1950 ಸಂಖ್ಯೆಗೆ ಕರೆ ಮಾಡಿ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದೆಯಾ, ತಮ್ಮ ಮತದಾನ ಕೇಂದ್ರ ಹಾಗೂ ಮತದಾರರ ಪಟ್ಟಿಯಲ್ಲಿ ತಮ್ಮ ವಿಳಾಸ, ಹೆಸರುಗಳ ಬಗ್ಗೆ ಪರಿಶೀಲನೆ ಮಾಡಿಕೊಳ್ಳಬಹುದು ಎಂಬ ಮಾಹಿತಿಯನ್ನು ನಾಗರೀಕರಿಗೆ ತಿಳಿಸಲಾಗುತ್ತದೆ.
ಯಾವುದೇ ಮತದಾರ ಮತದಾನದಿಂದ ಹೊರಗುಳಿಬಾರದು, ಮತಚಲಾಯಿಸಿ ಪ್ರಜಾಪ್ರಭುತ್ವವನ್ನು ಬಲಪಡಿಸಲು ತಪ್ಪದೇ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಬೇಕು. ನಿಮ್ಮ ಮತ ಅಮೂಲ್ಯ ಅದನ್ನು ವ್ಯರ್ಥಮಾಡಬೇಡಿ ಸೂಕ್ತ ಸಮಾಜಿಕ ಕಳಕಳಿಯುಳ್ಳ ವ್ಯಕ್ತಿಯನ್ನು ಆರಿಸಲು ಮತದಾನ ಅಸ್ತ್ರವಾಗಿದೆ.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...