ಕಾರವಾರ : ಜೂನ 1 ರಿಂದ 7 ರವರೆಗೆ ಸ್ವಚ್ಛತಾ ಸಪ್ತಾಹ
ಕಾರವಾರ : ಜಿಲ್ಲೆಯ ಎಲ್ಲಾ ನಗರ ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಜೂನ 1 ರಿಂದ 7 ರವರೆಗೆ ಸ್ವಚ್ಛತಾ ಸಪ್ತಾಹ ಹಮ್ಮಿಕೊಳಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಹರೀಶ ಕುಮಾರ ಕೆ. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸ್ವಚ್ಛತಾ ಸಪ್ತಾಹದಲ್ಲಿ ಚರಂಡಿ ಸ್ವಚ್ಛತೆ, ಗಿಡಗಂಟಿಗಳನ್ನು ತೆರವುಗೊಳಿಸುವ ಕಾಮಗಾರಿ ಹಾಗೂ ಮುಂಗಾರು ಮಳೆಯಿಂದ ಉಂಟಾಗಬಹುದಾದ ಇನ್ನಿತರ ತೊಂದರೆಗಳನ್ನು ನಿವಾರಿಸುವ ಕುರಿತು, ಎಲ್ಲಾ ಅವಶ್ಯಕವಾದ ಪೂರ್ವ ಸಿದ್ದತೆಯನ್ನು ಮಾಡಿಕೊಳ್ಳುವಂತೆ ಎಲ್ಲಾ ಸ್ಥಳಿಯ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳಿಗೆ ಸೂಚಿಸಲಾಗಿರುತ್ತದೆ.
ಸಾರ್ವಜನಿಕರು ಸಹ ಈ ಕುರಿತಂತೆ ಯಾವುದೇ ರೀತಿಯ ಕುಂದು ಕೊರತೆ ಇದ್ದಲ್ಲಿ ನಗರ ಸ್ಥಳಿಯ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳ ಗಮನಕ್ಕೆ ತಂದು ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿರುತ್ತಾರೆ.