ಹವಾಮಾನ ವೈಪರಿತ್ಯ. ಮೀನುಗಾರರಿಗೆ ಮುನ್ನೆಚ್ಚರಿಕೆ.
ಕಾರವಾರ : ಜೂನ್ 06ರಿಂದ 11ರವರೆಗೆ ಉತ್ತರಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಹವಾಮಾನ ವೈಪರಿತ್ಯ ಉಂಟಾಗಲಿದೆ ಎಂದು ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.
ಹವಮಾನ ವೈಪರೀತ್ಯದಿಂದ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾದ್ಯತೆ ಇರುವ ಕಾರಣ ಯಾವುದೇ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಭಾರತೀಯ ಹವಾಮಾನ ಇಲಾಖೆ, ತಿರುವನಂತಪುರಂ ಎಚ್ಚರಿಕೆ ನೀಡಿದೆ.
ಯಾವುದೇ ಮೀನುಗಾರರು ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆಯನ್ನು ನೀಡಲಾಗಿದೆ. ಅಲ್ಲದೇ ಪ್ರವಾಸಿಗರು ಕೂಡ ಸಮುದ್ರದತ್ತ ಧಾವಿಸದಂತೆ ಮೀನುಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.