ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೊದಲಿನಿಂದಲೂ ತಮ್ಮ ರೆಬಲ್ ಸ್ವಭಾವದಿಂದಲೇ ಖ್ಯಾತರಾಗಿದ್ದಾರೆ. ನಿನ್ನೆ ವಿಕಾಸ್ ದುಬೆಯ ಎನ್ಕೌಂಟರ್ ಆದ ಮೇಲಂತೂ ಮತ್ತೆ ಯೋಗಿ ಜೀ ಸುದ್ದಿಯಲ್ಲಿದ್ದಾರೆ. ಪ್ರತಿಪಕ್ಷಗಳ ಹಲವು ಮುಖಂಡರು ಯೋಗಿ ಆದಿತ್ಯನಾಥ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳದ ಯೋಗಿ ಆದಿತ್ಯನಾಥ್ ಅವರು, ನಮ್ಮ ರಾಜ್ಯದಲ್ಲಿ ಭ್ರಷ್ಟಾಚಾರ ಮತ್ತು ಕ್ರೈಂಗಳನ್ನು ಕೊನೆಗಾಣಿಸಲು ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ.
ಭಷ್ಟಾಚಾರ ಮತ್ತು ಅಪರಾಧಗಳನ್ನು ಒಂದು ಸ್ವಲ್ಪವೂ ಸಹಿಸಿಕೊಳ್ಳುವುದಿಲ್ಲ. ಉತ್ತರ ಪ್ರದೇಶದಲ್ಲಿರುವ 200 ಮಿಲಿಯನ್ ಜನರ ಸಂರಕ್ಷಣೆ ನಮ್ಮ ಸರ್ಕಾರದ ಜವಾಬ್ದಾರಿ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ 36,216ಕ್ಕೆ ಏರಿಕೆ; ಇಂದು 2 ಸಾವಿರಕ್ಕೂ ಹೆಚ್ಚು ಕೇಸ್ಗಳು
ಹಾಗೇ ಲಾಕ್ಡೌನ್ ಸಂದರ್ಭದಲ್ಲಿ ರಾಜ್ಯಕ್ಕೆ ವಾಪಸ್ ಬಂದ ವಲಸೆ ಕಾರ್ಮಿಕರ ಬಗ್ಗೆ ಮಾತನಾಡಿದ ಯೋಗಿ ಆದಿತ್ಯನಾಥ್ ಅವರು, ಕೊವಿಡ್-19 ಸಾಂಕ್ರಾಮಿಕ ರೋಗ ಬಂದು ಲಾಕ್ಡೌನ್ ಆದ ಬಳಿಕ ಸುಮಾರು 4 ಮಿಲಿಯನ್ ವಲಸೆ ಕಾರ್ಮಿಕರು ರಾಜ್ಯಕ್ಕೆ ವಾಪಸ್ ಆಗಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಎಲ್ಲ ವಲಸೆ ಕಾರ್ಮಿಕರಿಗೂ ಕೆಲಸ ಒದಗಿಸಲು ಕ್ರಮ ಕೈಗೊಂಡಿದ್ದೇವೆ. ಅಷ್ಟೇ ಅಲ್ಲ, ಮೊದಲು ಇದ್ದಲ್ಲಿಗೇ ವಾಪಸ್ ಹೋಗಿ ಕೆಲಸ ಮಾಡುತ್ತೇವೆ ಎಂದು ಇಚ್ಛೆ ಪಡುವ ಕಾರ್ಮಿಕರಿಗೆ ಅದಕ್ಕೂ ವ್ಯವಸ್ಥೆ ಮಾಡುತ್ತೇವೆ ಎಂದಿದ್ದಾರೆ.