ಕ್ರೈಂ ಮತ್ತು ಭ್ರಷ್ಟಾಚಾರ ಕೊನೆಗಾಣಿಸಲು ಯಾವುದೇ ಕ್ರಮಕ್ಕೂ ಹಿಂಜರಿಯುವುದಿಲ್ಲ: ಸಿಎಂ ಯೋಗಿ ಖಡಕ್​ ಮಾತು

Source: PTI | Published on 12th July 2020, 12:29 AM | National News | Don't Miss |

 


ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಮೊದಲಿನಿಂದಲೂ ತಮ್ಮ ರೆಬಲ್ ಸ್ವಭಾವದಿಂದಲೇ ಖ್ಯಾತರಾಗಿದ್ದಾರೆ. ನಿನ್ನೆ ವಿಕಾಸ್ ದುಬೆಯ ಎನ್​ಕೌಂಟರ್​ ಆದ ಮೇಲಂತೂ ಮತ್ತೆ ಯೋಗಿ ಜೀ ಸುದ್ದಿಯಲ್ಲಿದ್ದಾರೆ. ಪ್ರತಿಪಕ್ಷಗಳ ಹಲವು ಮುಖಂಡರು ಯೋಗಿ ಆದಿತ್ಯನಾಥ್​ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳದ ಯೋಗಿ ಆದಿತ್ಯನಾಥ್​ ಅವರು, ನಮ್ಮ ರಾಜ್ಯದಲ್ಲಿ ಭ್ರಷ್ಟಾಚಾರ ಮತ್ತು ಕ್ರೈಂಗಳನ್ನು ಕೊನೆಗಾಣಿಸಲು ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂದು ಖಡಕ್​ ಆಗಿ ಹೇಳಿದ್ದಾರೆ.
ಭಷ್ಟಾಚಾರ ಮತ್ತು ಅಪರಾಧಗಳನ್ನು ಒಂದು ಸ್ವಲ್ಪವೂ ಸಹಿಸಿಕೊಳ್ಳುವುದಿಲ್ಲ. ಉತ್ತರ ಪ್ರದೇಶದಲ್ಲಿರುವ 200 ಮಿಲಿಯನ್​ ಜನರ ಸಂರಕ್ಷಣೆ ನಮ್ಮ ಸರ್ಕಾರದ ಜವಾಬ್ದಾರಿ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ 36,216ಕ್ಕೆ ಏರಿಕೆ; ಇಂದು 2 ಸಾವಿರಕ್ಕೂ ಹೆಚ್ಚು ಕೇಸ್​ಗಳು
ಹಾಗೇ ಲಾಕ್​ಡೌನ್​ ಸಂದರ್ಭದಲ್ಲಿ ರಾಜ್ಯಕ್ಕೆ ವಾಪಸ್​ ಬಂದ ವಲಸೆ ಕಾರ್ಮಿಕರ ಬಗ್ಗೆ ಮಾತನಾಡಿದ ಯೋಗಿ ಆದಿತ್ಯನಾಥ್​ ಅವರು, ಕೊವಿಡ್-19 ಸಾಂಕ್ರಾಮಿಕ ರೋಗ ಬಂದು ಲಾಕ್​ಡೌನ್ ಆದ ಬಳಿಕ ಸುಮಾರು 4 ಮಿಲಿಯನ್​ ವಲಸೆ ಕಾರ್ಮಿಕರು ರಾಜ್ಯಕ್ಕೆ ವಾಪಸ್​ ಆಗಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಎಲ್ಲ ವಲಸೆ ಕಾರ್ಮಿಕರಿಗೂ ಕೆಲಸ ಒದಗಿಸಲು ಕ್ರಮ ಕೈಗೊಂಡಿದ್ದೇವೆ. ಅಷ್ಟೇ ಅಲ್ಲ, ಮೊದಲು ಇದ್ದಲ್ಲಿಗೇ ವಾಪಸ್​ ಹೋಗಿ ಕೆಲಸ ಮಾಡುತ್ತೇವೆ ಎಂದು ಇಚ್ಛೆ ಪಡುವ ಕಾರ್ಮಿಕರಿಗೆ ಅದಕ್ಕೂ ವ್ಯವಸ್ಥೆ ಮಾಡುತ್ತೇವೆ ಎಂದಿದ್ದಾರೆ. 

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...