ಹಿಂದುತ್ವ ಎಜೆಂಡಾ ಕ್ಕಾಗಿ ಪೇಟಿಎಂ ನಿಂದ ಬಳಕೆದಾರರ ಮಾಹಿತಿ ದುರ್ದಳಕೆ;ಕೋಬ್ರಾಪೋಷ್ಟ್ ಕುಟುಕು ಕಾರ್ಯಾಚರಣೆಯಲ್ಲಿ ಬಹಿರಂಗ

Source: sonews | By Staff Correspondent | Published on 25th May 2018, 11:04 PM | State News | National News | Special Report | Don't Miss |

ಹೊಸದಿಲ್ಲಿ: ಪ್ರಧಾನಿ ಕಚೇರಿಯಿಂದ ಕರೆ ಬಂದ ನಂತರ ಬಳಕೆದಾರರ ಮಾಹಿತಿಯನ್ನು ಒದಗಿಸಿದ್ದೇವೆ ಎಂದು ಪೇಟಿಎಂ ಸದಸ್ಯರು 'ಕೋಬ್ರಾ ಪೋಸ್ಟ್'ನ ಹೊಸ ಕುಟುಕು ಕಾರ್ಯಾಚರಣೆಯಲ್ಲಿ ಒಪ್ಪಿಕೊಂಡಿರುವುದು ಸಂಚಲನ ಸೃಷ್ಟಿಸಿದೆ.

“ಪ್ರಧಾನಿ ಕಚೇರಿಯಿಂದ ನನಗೇ ಕರೆ ಬಂದಿತ್ತು,. ಕೆಲ ಕಲ್ಲುತೂರಾಟಗಾರರು ಪೇಟಿಎಂ ಬಳಕೆದಾರರು ಆಗಿರಬಹುದು ಎಂದು ಹೇಳಿ ಡಾಟಾ ನೀಡುವಂತೆ ನನ್ನಲ್ಲಿ ಹೇಳಲಾಯಿತು” ಎಂದು ಪೇಟಿಎಂ ಉಪಾಧ್ಯಕ್ಷ ಅಜಯ್ ಶೇಖರ್ ಕುಟುಕು ಕಾರ್ಯಾಚರಣೆಯಲ್ಲಿ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ಪೇಟಿಎಂನ ಹಿರಿಯ ಸದಸ್ಯರಾದ ಸುಧಾಂಶು ಗುಪ್ತಾ ಹಾಗು ಹಿರಿಯ ಉಪಾಧ್ಯಕ್ಷ ಅಜಯ್ ಶೇಖರ್ ಶರ್ಮಾ ಮಾತನಾಡಿರುವುದು 'ಕೋಬ್ರಾ ಪೋಸ್ಟ್'ನ ಕುಟುಕು ಕಾರ್ಯಾಚರಣೆಯಲ್ಲಿ ಸೆರೆಯಾಗಿದೆ ಎನ್ನಲಾಗಿದೆ.

‘ಶ್ರೀಮದ್ ಭಗವದ್ ಗೀತಾ ಪ್ರಚಾರ್ ಸಮಿತಿ’ ಎಂಬ ಕಾಲ್ಪನಿಕ ಸಂಘಟನೆಯೊಂದರ ಪ್ರತಿನಿಧಿ ಎಂದು ತನ್ನನ್ನು ಪರಿಚಯಿಸಿಕೊಂಡ ಪತ್ರಕರ್ತ ಪುಷ್ಪ್ ಶರ್ಮಾ ತಾನು ಒಂದು ‘ಗುರಿ’ (ಗುಪ್ತ ವ್ಯವಸ್ಥೆ) ಹೊಂದಿದ್ದು, ‘ಸಂಘಟನೆ’ಯ ಆಜ್ಞೆಯ ಪ್ರಕಾರ ಮುಂಬರುವ ಚುನಾವಣೆಯಲ್ಲಿ ಅಧಿಕಾರದಲ್ಲಿರುವ ಪಕ್ಷವನ್ನು ಸದೃಢಗೊಳಿಸಬೇಕಾಗಿದೆ ಎಂದು ಪೇಟಿಎಂ ಸದಸ್ಯರಲ್ಲಿ ಹೇಳುತ್ತಾರೆ.

ಇದೇ ಸಂದರ್ಭ ತಾನು ಸರಕಾರ ಹಾಗು ಆರೆಸ್ಸೆಸ್ ಜೊತೆಗೆ ನಿಕಟ ಸಂಬಂಧ ಹೊಂದಿದ್ದೇನೆ ಎಂಬುದನ್ನು ತೋರಿಸಲು ಪೇಟಿಎಂನ ಅಜಯ್ ಶೇಖರ್, “ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವಾಗ ಕಲ್ಲುತೂರಾಟ ನಿಂತಿತ್ತೋ, ಆ ಸಂದರ್ಭ ನನಗೆ ಪ್ರಧಾನಿ ಕಚೇರಿಯಿಂದ ಕರೆ ಬಂದಿತ್ತು. ಕೆಲ ಕಲ್ಲು ತೂರಾಟಗಾರರು ಪೇಟಿಎಂ ಬಳಕೆದಾರರು ಆಗಿರಬಹುದು ಎಂದು ಕರೆಯಲ್ಲಿ ತಿಳಿಸಲಾಗಿತ್ತು. ನಿಮಗೆ ಅರ್ಥವಾಯಿತೇ?” ಎಂದು ಹೇಳಿರುವುದು ಕುಟುಕು ಕಾರ್ಯಾಚರಣೆಯಲ್ಲಿ ಸೆರೆಯಾಗಿದೆ.

ಹಿಂದುತ್ವ ಸಿದ್ಧಾಂತ ಹರಡಲು ಹಾಗು ರಾಜಕೀಯ ಪಕ್ಷವೊಂದರ ಪರ ಪ್ರಚಾರ ಮಾಡಲು, ಇತರ ಪಕ್ಷಗಳ ವಿರುದ್ಧ ಅಪಪ್ರಚಾರ ನಡೆಸಲು ಹಲವು ಭಾರತೀಯ ಮಾಧ್ಯಮಗಳು ಭಾರೀ ಹಣದಾಸೆಗೆ ಒಪ್ಪಿಕೊಂಡ ಕುಟುಕು ಕಾರ್ಯಾಚರಣೆಯ ವಿಡಿಯೋವನ್ನು ಈ ಹಿಂದೆ 'ಕೋಬ್ರಾಪೋಸ್ಟ್' ಬಿಡುಗಡೆ ಮಾಡಿತ್ತು. 'ಕೋಬ್ರಾ ಪೋಸ್ಟ್'ನ ಈ ಕಾರ್ಯಾಚರಣೆಗೆ ‘ಆಪರೇಶನ್ 136’ ಎಂದು ಹೆಸರಿಡಲಾಗಿತ್ತು.

ವಿಡೀಯೋ ನೋಡಲು ಇಲ್ಲಿ ಕ್ಲಿಕ್ಕಿಸಿ: 

https://youtu.be/lvj8hRD1GY4 

ಕೃಪೆ:vbnewsonline

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...