ನವದೆಹಲಿ: ಇಂಡೊ-ಪೆಸಿಫಿಕ್ ಭಾಗದಲ್ಲಿ ಚೀನಾದ ಹೆಚ್ಚಿದ ಮಿಲಿಟರಿ ಕಾರ್ಯಾಚರಣೆಯನ್ನು ಸಮರ್ಥವಾಗಿ ಎದುರಿಸಲು ಒಟ್ಟಾರೆಯಾಗಿ ರಕ್ಷಣಾ ಮತ್ತು ರಚನಾತ್ಮಕ ಸಹಕಾರವನ್ನು ವೃದ್ಧಿಸುವುದು ಸೇರಿದಂತೆ ಹಲವು ವಿಚಾರಗಳ ಕುರಿತು ಭಾರತ ಮತ್ತು ಆಸ್ಟ್ರೇಲಿಯಾ ಶನಿವಾರ ಉನ್ನತ ಮಟ್ಟದ ವಿದೇಶಾಂಗ ಮತ್ತು ರಕ್ಷಣಾ ಸಚಿವಾಲಯ ಮಟ್ಟದ ಮಾತುಕತೆ ಆರಂಭಿಸಿದೆ.
ಇಂದು ದೆಹಲಿಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆರಂಭದ ದಿನ 2+2 ಮಾತುಕತೆಯನ್ನು ಆಸ್ಟ್ರೇಲಿಯಾದ ವಿದೇಶಾಂಗ ಹಾಗೂ ರಕ್ಷಣಾ ಇಲಾಖೆ ಸಚಿವರುಗಳಾದ ಮಾರಿಸ್ ಪೇನ್ ಮತ್ತು ಪೀಟರ್ ಡಟನ್ ಜೊತೆ ನಡೆಸಿದ್ದಾರೆ.
ಇಂದು ಇಡೀ ವಿಶ್ವದ ಗಮನ ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಮೇಲೆ ನೆಟ್ಟಿರುವುದರಿಂದ ಇಂದಿನ ಮಾತುಕತೆಯಲ್ಲಿ ಅಫ್ಘಾನಿಸ್ತಾನ ವಿಷಯ, ಮುಂದಿನ ದಿನಗಳಲ್ಲಿ ಆ ದೇಶದೊಂದಿಗೆ ಇಟ್ಟುಕೊಳ್ಳುವ ಸಂಬಂಧಗಳ ಬಗ್ಗೆ ಚರ್ಚೆ ನಡೆಯಿತು.
ತಮ್ಮ ಮಾತುಕತೆಯಲ್ಲಿ, ಇಬ್ಬರು ರಕ್ಷಣಾ ಮಂತ್ರಿಗಳು ಅಫ್ಘಾನಿಸ್ತಾನದ ದುರ್ಬಲ ಭದ್ರತಾ ಪರಿಸ್ಥಿತಿ ಮತ್ತು ತಾಲಿಬಾನ್ ಆಡಳಿತದ ಅಫ್ಘಾನಿಸ್ತಾನದಿಂದ ಭಯೋತ್ಪಾದನೆಯ ಹರಡುವಿಕೆಗೆ ಸಂಬಂಧಿಸಿದಂತೆ ತಮ್ಮ ಕಳವಳ, ಆತಂಕವನ್ನು ವ್ಯಕ್ತಪಡಿಸಿದರು.
ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಸಹಕಾರವನ್ನು ವಿಸ್ತರಿಸಲು ಕ್ವಾಡ್ ಸದಸ್ಯ ರಾಷ್ಟ್ರಗಳ ಹೊಸ ಪ್ರಯತ್ನಗಳ ನಡುವೆ ವಿದೇಶಿ ಮತ್ತು ರಕ್ಷಣಾ ಸಚಿವರ ಮಾತುಕತೆ ನಡೆಯುತ್ತಿದೆ.ಭಾರತ ಮತ್ತು ಆಸ್ಟ್ರೇಲಿಯಾವನ್ನು ಹೊರತುಪಡಿಸಿ, ಕ್ವಾಡ್ ಸದಸ್ಯ ದೇಶಗಳಲ್ಲಿ ಅಮೆರಿಕ ಮತ್ತು ಜಪಾನ್ ಕೂಡ ಸೇರಿದೆ.
ಉಭಯ ದೇಶಗಳ ನಡುವಿನ ಕಾರ್ಯತಂತ್ರದ ಸಹಕಾರವನ್ನು ವಿಸ್ತರಿಸುವ ಒಟ್ಟಾರೆ ಗುರಿಯ ಭಾಗವಾಗಿ ವಿದೇಶಾಂಗ ಮತ್ತು ರಕ್ಷಣಾ ಸಚಿವರ ನಡುವಿನ ಸಂವಾದ ನಡೆದಿದೆ.ಕಳೆದ ಕೆಲವು ವರ್ಷಗಳಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ರಕ್ಷಣಾ ಮತ್ತು ಸೇನಾ ಸಹಕಾರವು ಹೆಚ್ಚುತ್ತಿದೆ.
Read These Next
ದೇಶಾದ್ಯಂತ 88 ಕ್ಷೇತ್ರಗಳಲ್ಲಿ ಚುನಾವಣೆ; ದ್ವಿತೀಯ ಹಂತ; ಶೇ.61 ಮತದಾನ
ಲೋಕಸಭಾ ಚುನಾವಣೆಗೆ ಎರಡನೇ ಹಂತದ ಮತದಾನ ಕರ್ನಾಟಕ ಸೇರಿದಂತೆ 13 ರಾಜ್ಯಗಳು ಮತ್ತು ಕೇಂದ್ರಾಡಳಿತಗಳ 88 ಕ್ಷೇತ್ರಗಳಲ್ಲಿ ಶುಕ್ರವಾರ ...
ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81
ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...
ಸೋಮವಾರದ ಒಳಗೆ ಬರ ಪರಿಹಾರ ಬಿಡುಗಡೆ ಮಾಡಲು ಒಪ್ಪಿದ ಕೇಂದ್ರ ಸರ್ಕಾರ
ನವದೆಹಲಿ/ಬೆಂಗಳೂರು: ಕರ್ನಾಟಕಕ್ಕೆ ಸೋಮವಾರದ ಏಪ್ರಿಲ್ 29ರ ಒಳಗೆ ಬರ ಪರಿಹಾರ ಬಿಡುಗಡೆ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರ ...
ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...
ಇವಿಎಂ - ವಿವಿಪ್ಯಾಟ್ ಮತ ಪರಿಶೀಲನೆ ತೀರ್ಪು ಕಾದಿರಿಸಿದ ಸುಪ್ರೀಂಕೋರ್ಟ್
ಇಲೆಕ್ಟ್ರಾನಿಕ್ ಮತಯಂತ್ರ (ಇವಿಎಂ)ದ ಮೂಲಕ ಚಲಾಯಿತವಾದ ಮತಗಳನ್ನು ವಿವಿಪ್ಯಾಟ್ ಯಂತ್ರದಲ್ಲಿ ದಾಖಲಾದ ಸ್ಲಿಪ್;ಗಳ ಜೊತೆ ತಾಳೆ ಹಾಕುವ ...
ಅಣಕು ಮತದಾನದ ವೇಳೆ ಬಿಜೆಪಿಗೆ ಮತ
ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...
ಮನೆಯಿಂದ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ
ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...
ಚಿಂಚೋಳಿಯಲ್ಲಿ ಬೈಕ್ ಜಾಥಾದ ಮೂಲಕ ಮತದಾನದ ಜಾಗೃತಿ
ಕಲಬುರಗಿ : ಚಿಂಚೋಳಿ ತಾಲೂಕು ಆಡಳಿತ, ತಾಲೂಕು ಸ್ವೀಪ್ ಸಮಿತಿ ಹಾಗೂ ತಾಲೂಕು ಪಂಚಾಯತ ವತಿಯಿಂದ ಹಮ್ಮಿಕೊಳ್ಳಲಾದ "ಮತದಾನ ಜಾಗೃತಿ ಜಾಥಾ ...
ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್
ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...
ಏ.29 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ -2 : ಸಕಲ ಸಿದ್ದತೆಗೆ ಸೂಚನೆ
ಶಿವಮೊಗ್ಗ : ಜಿಲ್ಲೆಯಲ್ಲಿ ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ನಡೆಯಲಿದೆ. ಪರೀಕ್ಷೆಗಳು ...
ಅಂಕೋಲದಲ್ಲಿ ಬೈಕ್ ಮತ್ತು ಟ್ರಾಕ್ಸ್ ನಡುವೆ ಅಪಘಾತ. ಸವಾರ ಸಾವು. ಇಬ್ಬರು ಗಂಭೀರ.
ಅಂಕೋಲಾ : ಬೈಕ್ ಮತ್ತು ಟ್ರಾಕ್ಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಅಕೋಲಾ ತಾಲೂಕಿನ ಹಟ್ಟಿಕೇರಿ ...
ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಸಿ ಸುಳ್ಳು : ಸಿ lಎಂ ಸಿದ್ದರಾಮಯ್ಯ ಆರೋಪ
ಬೆಂಗಳೂರು : ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ...